ಕಾರ್ಮಿಕರ ಮೇಲೆ ಬಿದ್ದಿರುವ ಮೂಟೆಗಳನ್ನು ತೆರವು ಮಾಡುವ ಕಾರ್ಯ ಭರದಿಂದ ನಡೆದಿದೆ. ರಾತ್ರಿ 9ರ ವೇಳೆಗೆ ಮೂವರನ್ನು ಸುರಕ್ಷಿತವಾಗಿ ಹೊರ ತರಲಾಗಿದೆ. ಇನ್ನುಳಿದವರ ಉಸಿರಾಟಕ್ಕೆ ತೊಂದರೆಯಾಗದಂತೆ ಆಕ್ಷಿಜನ್ ಪೂರೈಕೆ ಮಾಡಲಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಿಂದ ಎಸ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಅಗತ್ಯ ಬಿದ್ದರೆ ಹೈದರಾಬಾದ್ನಿಂದ ಎನ್ಡಿಆರ್ಎಫ್ ತಂಡವನ್ನು ಕರೆತರಲು ಸಿದ್ಧತೆ ನಡೆದಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.
ಮೆಕ್ಕೆಜೋಳದ ಮೂಟೆಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರು ಬಿಹಾರ ಮೂಲದವರು ಎನ್ನಲಾಗಿದೆ. ಹಲವು ವರ್ಷಗಳಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್ ಅವರು ಬೆಳಗಾವಿಯಿಂದ ವಿಜಯಪುರಕ್ಕೆ ರಾತ್ರಿ ಆಗಮಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಖುದ್ದು ವೀಕ್ಷಿಸಿದರು.
ಘಟನೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೂರ್ಣ ಮಾಹಿತಿ ನೀಡಿದ್ದಾರೆ.