<p>ವಿಜಯಪುರ: 2025-26ನೇ ಸಾಲಿನಲ್ಲಿ ಹೊಸದಾಗಿ ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ 2013 ಜಿಲ್ಲಾಮಟ್ಟದ ಜಾಗೃತಿ ಸಮಿತಿ ರಚಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.</p>.<p>ಜಿಲ್ಲಾಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾಗಲು ಬಯಸುವವರು ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಜಿಲ್ಲಾ ಮಟ್ಟದಲ್ಲಿ ವಾಸಿಸುವ ಸಮುದಾಯವನ್ನು ಪ್ರತಿನಿಧಿಸುತ್ತಿರುವ 4 ಜನ ಮೀರದಂತೆ ಸಾಮಾಜಿಕ ಕಾರ್ಯಕರ್ತರು, ಅವರಲ್ಲಿ ಇಬ್ಬರು ಮಹಿಳೆಯರು ಇರಬೇಕು. ಒಟ್ಟು 4 ಜನ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.</p>.<p>ಈ ಸಮಿತಿಗೆ ಸದಸ್ಯರಾಗ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೇ 10ರ ಮಧ್ಯಾಹ್ನ 1.30 ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.</p>.<p>ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಅವರ ಕಚೇರಿಯಿಂದ ಮೇ 5ರೊಳಗಾಗಿ ಪಡೆದುಕೊಳ್ಳಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-26-1802941157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: 2025-26ನೇ ಸಾಲಿನಲ್ಲಿ ಹೊಸದಾಗಿ ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ 2013 ಜಿಲ್ಲಾಮಟ್ಟದ ಜಾಗೃತಿ ಸಮಿತಿ ರಚಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.</p>.<p>ಜಿಲ್ಲಾಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾಗಲು ಬಯಸುವವರು ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಜಿಲ್ಲಾ ಮಟ್ಟದಲ್ಲಿ ವಾಸಿಸುವ ಸಮುದಾಯವನ್ನು ಪ್ರತಿನಿಧಿಸುತ್ತಿರುವ 4 ಜನ ಮೀರದಂತೆ ಸಾಮಾಜಿಕ ಕಾರ್ಯಕರ್ತರು, ಅವರಲ್ಲಿ ಇಬ್ಬರು ಮಹಿಳೆಯರು ಇರಬೇಕು. ಒಟ್ಟು 4 ಜನ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.</p>.<p>ಈ ಸಮಿತಿಗೆ ಸದಸ್ಯರಾಗ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೇ 10ರ ಮಧ್ಯಾಹ್ನ 1.30 ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.</p>.<p>ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಅವರ ಕಚೇರಿಯಿಂದ ಮೇ 5ರೊಳಗಾಗಿ ಪಡೆದುಕೊಳ್ಳಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-26-1802941157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>