<p><strong>ವಿಜಯಪುರ:</strong> ವಿಜಯಪುರ ನಗರದಲ್ಲಿರುವ ಸಾಯಿಪಾರ್ಕ್ ವಸತಿ ನಿಲಯದಲ್ಲಿ ಅನಧಿಕೃತ ವ್ಯಕ್ತಿಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಅನಧಿಕೃತ ವ್ಯಕ್ತಿಗಳನ್ನು ಇಲ್ಲಿಂದ ಹೊರಹಾಕಬೇಕು ಎಂದು ಆಗ್ರಹಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಅರವಿಂದ ಲಂಬು ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ, ‘ವಸತಿ ನಿಲಯದಲ್ಲಿ ನೋಂದಣಿ ಇಲ್ಲದ ಅನೇಕ ವ್ಯಕ್ತಿಗಳು ವಾಸಿಸುತ್ತಿದ್ದು, ಕೆಲವರು ಮಾದಕ ವ್ಯಸನಗಳಲ್ಲಿ ತೊಡಗಿ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭದ್ರತೆ ಹಾಗೂ ಶೈಕ್ಷಣಿಕ ವಾತಾವರಣ ಹದಗೆಡುತ್ತಿದೆ’ ಎಂದರು.</p>.<p>ಪರಿಷತ್ ರಾಜ್ಯ ಉಪಾಧ್ಯಕ್ಷ ಕಿರಣ್ ಗೌಡ ಬಿರಾದಾರ, ಸಂಘಟನಾ ಕಾರ್ಯದರ್ಶಿ ರಾಹುಲ್ ಕಳಸದವರ, ಸದಸ್ಯ ಮಂಜು ಕವಳಿ, ಪ್ರವೀಣ್ ಕರ್ನಾಳ, ಪ್ರತಾಪ್, ಶರಣು, ಶ್ರವಣ ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-26-711114144</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ವಿಜಯಪುರ ನಗರದಲ್ಲಿರುವ ಸಾಯಿಪಾರ್ಕ್ ವಸತಿ ನಿಲಯದಲ್ಲಿ ಅನಧಿಕೃತ ವ್ಯಕ್ತಿಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಅನಧಿಕೃತ ವ್ಯಕ್ತಿಗಳನ್ನು ಇಲ್ಲಿಂದ ಹೊರಹಾಕಬೇಕು ಎಂದು ಆಗ್ರಹಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಅರವಿಂದ ಲಂಬು ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ, ‘ವಸತಿ ನಿಲಯದಲ್ಲಿ ನೋಂದಣಿ ಇಲ್ಲದ ಅನೇಕ ವ್ಯಕ್ತಿಗಳು ವಾಸಿಸುತ್ತಿದ್ದು, ಕೆಲವರು ಮಾದಕ ವ್ಯಸನಗಳಲ್ಲಿ ತೊಡಗಿ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭದ್ರತೆ ಹಾಗೂ ಶೈಕ್ಷಣಿಕ ವಾತಾವರಣ ಹದಗೆಡುತ್ತಿದೆ’ ಎಂದರು.</p>.<p>ಪರಿಷತ್ ರಾಜ್ಯ ಉಪಾಧ್ಯಕ್ಷ ಕಿರಣ್ ಗೌಡ ಬಿರಾದಾರ, ಸಂಘಟನಾ ಕಾರ್ಯದರ್ಶಿ ರಾಹುಲ್ ಕಳಸದವರ, ಸದಸ್ಯ ಮಂಜು ಕವಳಿ, ಪ್ರವೀಣ್ ಕರ್ನಾಳ, ಪ್ರತಾಪ್, ಶರಣು, ಶ್ರವಣ ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-26-711114144</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>