ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಾದೇವ ಬೈರಗೊಂಡ ಅವರ ಕಾರು ಚಾಲಕ ಮತ್ತು ಮ್ಯಾನೇಜರ್ ಸೇರಿದಂತೆ ಇಬ್ಬರು ಸಾವನಪ್ಪಿದ್ದಾರೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ಮಹಾದೇವ ಸಾಹುಕಾರ ಅವರಿಗೆ ಹೊರರಾಜ್ಯದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಭದ್ರತೆ ದೃಷ್ಟಿಯಿಂದ ಯಾವ ಸ್ಥಳ ಎಂಬುದನ್ನು ಗೌಪ್ಯವಾಗಿಡಲಾಗಿದೆ.