ಪ್ರಕರಣದಲ್ಲಿಮೂರು ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿರುವ ಮಹಾದೇವ ಸಾಹುಕಾರ ಬೈರಗೊಂಡ ನಗರದ ಬಿಎಲ್ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಮೂಲಕ ಗುಂಡುಗಳನ್ನು ಹೊರತೆಗೆಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರತೆ ಉದ್ದೇಶದಿಂದ ಬೈರಗೊಂಡ ಅವರನ್ನು ಹೈದರಾಬಾದ್ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.