<p><strong>ಚಿಂಚೋಳಿ:</strong> ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಸಿದ್ಧಸಿರಿ ಎಥೆನಾನ್ ಮತ್ತು ಪವರ್ ಘಟಕದ ನಿರ್ದೇಶಕರಾಗಿರುವ ಆಕಾಶ ಗುತ್ತೇದಾರ ಅವರನ್ನು ವಿಜಯಪುರದ ಸಿದ್ಧಸಿರಿ ಬಹುರಾಜ್ಯ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.</p>.<p>ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಜಯಪುರ ಮೂಲದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಈಚೆಗೆ ಸಿದ್ಧಸಿರಿ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಆಗಿ ದೇಶದ ತುಂಬಾ ವ್ಯವಹಾರ ನಡೆಸಲು ಮಾನ್ಯ ಮಾಡಲಾಗಿದೆ.</p>.<p>ಸಂಘದ ಉಪ ನಿಯಮ ಹಾಗೂ ಸಹಕಾರಿ ಸಂಘಗಳ ಕಾಯ್ದೆಯ ಅನುಸಾರ ಆಡಳಿತ ಮಂಡಳಿಯ ಸಭೆಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಸಂಘದ ಸಿಇಒ ಜ್ಯೋತಿಬಾ ಎಂ.ಖಂಡಾಗ್ಳೆ ತಿಳಿಸಿದ್ದಾರೆ. ಸದರಿ ಸಂಘವು ರಾಜ್ಯದಲ್ಲಿ 215 ಶಾಖೆಗಳನ್ನು ಹೊಂದಿದ್ದು, ಸುಮಾರು ₹5 ಸಾವಿರ ಕೋಟಿ ಠೇವಣಿಯನ್ನು ಹೊಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-31-288922069</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಸಿದ್ಧಸಿರಿ ಎಥೆನಾನ್ ಮತ್ತು ಪವರ್ ಘಟಕದ ನಿರ್ದೇಶಕರಾಗಿರುವ ಆಕಾಶ ಗುತ್ತೇದಾರ ಅವರನ್ನು ವಿಜಯಪುರದ ಸಿದ್ಧಸಿರಿ ಬಹುರಾಜ್ಯ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.</p>.<p>ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಜಯಪುರ ಮೂಲದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಈಚೆಗೆ ಸಿದ್ಧಸಿರಿ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಆಗಿ ದೇಶದ ತುಂಬಾ ವ್ಯವಹಾರ ನಡೆಸಲು ಮಾನ್ಯ ಮಾಡಲಾಗಿದೆ.</p>.<p>ಸಂಘದ ಉಪ ನಿಯಮ ಹಾಗೂ ಸಹಕಾರಿ ಸಂಘಗಳ ಕಾಯ್ದೆಯ ಅನುಸಾರ ಆಡಳಿತ ಮಂಡಳಿಯ ಸಭೆಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಸಂಘದ ಸಿಇಒ ಜ್ಯೋತಿಬಾ ಎಂ.ಖಂಡಾಗ್ಳೆ ತಿಳಿಸಿದ್ದಾರೆ. ಸದರಿ ಸಂಘವು ರಾಜ್ಯದಲ್ಲಿ 215 ಶಾಖೆಗಳನ್ನು ಹೊಂದಿದ್ದು, ಸುಮಾರು ₹5 ಸಾವಿರ ಕೋಟಿ ಠೇವಣಿಯನ್ನು ಹೊಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-31-288922069</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>