<p><strong>ಸಿಂದಗಿ</strong>: ‘ಪ್ರತಿ ವರ್ಷವೂ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಆರೋಗ್ಯ ಶಿಬಿರ ಹಮ್ಮಿಕೊಳ್ಳುವ ಮೂಲಕ ಸಾರಂಗಮಠ-ಗಚ್ಚಿನಮಠದ ಚೆನ್ನವೀರಶ್ರೀಗಳ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುತ್ತ ಬರಲಾಗಿದೆ’ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.</p>.<p>ನಗರದ ಸಾರಂಗಮಠದ ಆವರಣದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂಗೈಕ್ಯ ಎನ್.ಚೆನ್ನಯ್ಯಸ್ವಾಮಿ, ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಅನುಗ್ರಹ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ದತ್ತಾತ್ರೇಯ ಹೊಸಮಠ ಮಾತನಾಡಿ, ‘ವಿಜಯಪುರ ನಗರದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆ ಪ್ರಾರಂಭಗೊಂಡು 25 ವರ್ಷಗಳಾಗಿದ್ದು, ಈ ಅವಧಿಯಲ್ಲಿ ನೇತ್ರ ತಜ್ಞರಾದ ಪ್ರಭುಗೌಡ ಚಬನೂರ (ಲಿಂಗದಳ್ಳಿ) ಅವರ ನೇತೃತ್ವದಲ್ಲಿ 50 ಸಾವಿರ ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ, 3 ಲಕ್ಷ ಹೊರರೋಗಿಗಳಿಗೆ ಉಚಿತ ತಪಾಸಣೆ ಮಾಡಲಾಗಿದೆ’ ಎಂದು ವಿವರಿಸಿದರು.</p>.<p>ಸಾರಂಗಮಠ- ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಸಹ-ಕಾರ್ಯದರ್ಶಿ ಅಶೋಕ ವಾರದ, ಪ್ರಾಧ್ಯಾಪಕ ನಾಗರಾಜ ಮುರಗೋಡ, ಮಹಾಂತೇಶ ಹಿರೇಮಠ, ಶ್ರೀದೇವಿ ಸಿಂದಗಿ, ವಿ.ಆರ್. ಪಾಟೀಲ, ಬಸಯ್ಯ ಗೋಲಗೇರಿಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-392048073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ‘ಪ್ರತಿ ವರ್ಷವೂ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಆರೋಗ್ಯ ಶಿಬಿರ ಹಮ್ಮಿಕೊಳ್ಳುವ ಮೂಲಕ ಸಾರಂಗಮಠ-ಗಚ್ಚಿನಮಠದ ಚೆನ್ನವೀರಶ್ರೀಗಳ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುತ್ತ ಬರಲಾಗಿದೆ’ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.</p>.<p>ನಗರದ ಸಾರಂಗಮಠದ ಆವರಣದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂಗೈಕ್ಯ ಎನ್.ಚೆನ್ನಯ್ಯಸ್ವಾಮಿ, ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಅನುಗ್ರಹ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ದತ್ತಾತ್ರೇಯ ಹೊಸಮಠ ಮಾತನಾಡಿ, ‘ವಿಜಯಪುರ ನಗರದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆ ಪ್ರಾರಂಭಗೊಂಡು 25 ವರ್ಷಗಳಾಗಿದ್ದು, ಈ ಅವಧಿಯಲ್ಲಿ ನೇತ್ರ ತಜ್ಞರಾದ ಪ್ರಭುಗೌಡ ಚಬನೂರ (ಲಿಂಗದಳ್ಳಿ) ಅವರ ನೇತೃತ್ವದಲ್ಲಿ 50 ಸಾವಿರ ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ, 3 ಲಕ್ಷ ಹೊರರೋಗಿಗಳಿಗೆ ಉಚಿತ ತಪಾಸಣೆ ಮಾಡಲಾಗಿದೆ’ ಎಂದು ವಿವರಿಸಿದರು.</p>.<p>ಸಾರಂಗಮಠ- ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಸಹ-ಕಾರ್ಯದರ್ಶಿ ಅಶೋಕ ವಾರದ, ಪ್ರಾಧ್ಯಾಪಕ ನಾಗರಾಜ ಮುರಗೋಡ, ಮಹಾಂತೇಶ ಹಿರೇಮಠ, ಶ್ರೀದೇವಿ ಸಿಂದಗಿ, ವಿ.ಆರ್. ಪಾಟೀಲ, ಬಸಯ್ಯ ಗೋಲಗೇರಿಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-392048073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>