<p>ವಿಜಯಪುರ: ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ನಡುವೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ವಿಜಯಪುರ ಕೇಂದ್ರ ಕಾರಗೃಹದಲ್ಲಿ ಸದ್ಯ ಇರುವ 425 ಕೈದಿಗಳ ಪೈಕಿ 50 ಕೈದಿಗಳನ್ನು ಬಾಗಲಕೋಟೆ, 25 ಕೈದಿಗಳನ್ನು ಜಮಖಂಡಿ ಮತ್ತು 100 ಕೈದಿಗಳನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.</p>.<p>ಕೈದಿಗಳನ್ನು ಭೇಟಿ ಮಾಡಲು ಜೈಲಿಗೆ ಬರುವ ಅವರ ಸಂಬಂಧಿಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.</p>.<p class="Subhead">50 ಕೈದಿಗಳ ಬಿಡುಗಡೆ:</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ 50 ಕೈದಿಗಳನ್ನು ಪೆರೋಲ್, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p class="Subhead">ಕಣ್ಗಾವಲು:</p>.<p>ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೋವಿಡ್–19 ದೃಢಪಟ್ಟಿರುವುದರಿಂದ ಜಿಲ್ಲೆಯ ಗಡಿಭಾಗಗಳಲ್ಲಿ 29 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ, ಕಣ್ಗಾವಲು ಹೆಚ್ಚಿಸಲಾಗಿದೆ. ಅಲ್ಲದೇ, ಜನ ಸಂಚಾರಕ್ಕೆ ಮತ್ತಷ್ಟು ನಿರ್ಬಂಧ ವಿಧಿಸಲಾಗಿದೆ. ತಪಾಸಣೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ನಡುವೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ವಿಜಯಪುರ ಕೇಂದ್ರ ಕಾರಗೃಹದಲ್ಲಿ ಸದ್ಯ ಇರುವ 425 ಕೈದಿಗಳ ಪೈಕಿ 50 ಕೈದಿಗಳನ್ನು ಬಾಗಲಕೋಟೆ, 25 ಕೈದಿಗಳನ್ನು ಜಮಖಂಡಿ ಮತ್ತು 100 ಕೈದಿಗಳನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.</p>.<p>ಕೈದಿಗಳನ್ನು ಭೇಟಿ ಮಾಡಲು ಜೈಲಿಗೆ ಬರುವ ಅವರ ಸಂಬಂಧಿಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.</p>.<p class="Subhead">50 ಕೈದಿಗಳ ಬಿಡುಗಡೆ:</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ 50 ಕೈದಿಗಳನ್ನು ಪೆರೋಲ್, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p class="Subhead">ಕಣ್ಗಾವಲು:</p>.<p>ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೋವಿಡ್–19 ದೃಢಪಟ್ಟಿರುವುದರಿಂದ ಜಿಲ್ಲೆಯ ಗಡಿಭಾಗಗಳಲ್ಲಿ 29 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ, ಕಣ್ಗಾವಲು ಹೆಚ್ಚಿಸಲಾಗಿದೆ. ಅಲ್ಲದೇ, ಜನ ಸಂಚಾರಕ್ಕೆ ಮತ್ತಷ್ಟು ನಿರ್ಬಂಧ ವಿಧಿಸಲಾಗಿದೆ. ತಪಾಸಣೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>