ವಿಜಯಪುರ: ನಗರದ ಮನಗೂಳಿ ಬೈಪಾಸ್ ಬಳಿ ಎರಡು ದಿನಗಳ ಹಿಂದೆ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಾವಿಗೀಡಾಗಿದ್ದಾನೆ.
ಯೋಗಾಪುರ ಕಾಲೊನಿ ನಿವಾಸಿ ಸುನೀಲ ರಜಪೂತ (23)ಚಾಕು ಇರಿತದಿಂದ ಸಾವಿಗೀಡಾದ ಯುವಕ ಎಂದು ಗುರುತಿಸಲಾಗಿದೆ. ಚಾಕು ಇರಿತಕ್ಕೆ ಒಳಗಾಗಿರುವ ಮತ್ತೊಬ್ಬ ರಮೇಶ ಮಾದರ(28)ಗೆ ಚಿಕಿತ್ಸೆ ಮುಂದುವರೆದಿದೆ.
ಎರಡು ದಿನಗಳ ಹಿಂದೆ ಮನಗೂಳಿ ಬೈಪಾಸ್ ಬಳಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇದುವರೆಗೂ ಪತ್ತೆಯಾಗಿಲ್ಲ.