ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ, ತಾಳಿಕೋಟೆ: ಧಾರಾಕಾರ ಮಳೆ

Last Updated 12 ಆಗಸ್ಟ್ 2021, 14:01 IST
ಅಕ್ಷರ ಗಾತ್ರ

ವಿಜಯಪುರ: ಎರಡು ವಾರಗಳಿಂದ ಮರೆಯಾಗಿದ್ದ ಮಳೆ ಗುರುವಾರ ಸಂಜೆ ಸುಮಾರು ಅರ್ಧ ತಾಸು ವಿಜಯಪುರ ನಗರ ಸೇರಿದಂತೆ ತಾಳಿಕೋಟೆ ಪಟ್ಟಣದಲ್ಲಿ ಧಾರಾಕಾರವಾಗಿ ಸುರಿಯಿತು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಬಾಡತೊಡಗಿತ್ತು. ಇದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಿಸಿಲಿನ ತಾಪ ಬೇಸಿಗೆಯನ್ನು ನೆನಪಿಸುವಂತಿತ್ತು. ಇದೀಗ ಮಳೆಯಾಗಿರುವುದರಿಂದ ರೈತರ ಆತಂಕ ದೂರವಾಗಿದೆ. ವಾತಾವರಣವೂ ತಂಪಾಗಿದೆ.

ಸುಮಾರು ಅರ್ಧ ತಾಸು ಮಳೆಯಾದ ಪರಿಣಾಮ ಚರಂಡಿಗಳು ಉಕ್ಕಿ ಮಳೆ ನೀರು ರಸ್ತೆ ಮೇಲೆ ಹರಿಯಿತು. ತಗ್ಗು ಪ್ರದೇಶ, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.

ತಿಕೋಟಾ, ನಾಲತವಾಡ ವ್ಯಾಪ್ತಿಯಲ್ಲೂ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT