<p><strong>ವಿಜಯಪುರ</strong>: ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ವಿಜಯಪುರ ನಗರದದ 16 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಆರಂಭವಾಗಿದೆ.</p>.<p>ಒಟ್ಟು 4330 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ, ಹೊರ ಜಿಲ್ಲೆಯ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.</p>.<p>ಪರೀಕ್ಷೆ ಆರಂಭಕ್ಕೂ ಒಂದು ತಾಸು ಮೊದಲೇ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಹಾಜರಿದ್ದರು. ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು.</p>.<p>ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.<br /><br />ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.</p>.<p>ಪರೀಕ್ಷಾರ್ಥಿಗಳಿಗೆ ಮೊಬೈಲ್, ಕ್ಯಾಲ್ಯೂಕ್ಲೀಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್, ಬ್ಲೂ ಟೂತ್ ಹಾಗೂ ಇತರೆ ಎಲ್ಲಾ ಎಲೆಕ್ಟ್ರಾನಿಕ ಉಪಕರಣಗಳನ್ನು ತರುವುದು ನಿಷೇಧಿಸಲಾಗಿದೆ.</p>.<p>ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತಿದೆ.</p>.<p>ಯಾವುದೇ ರೀತಿಯಾದ ಕೈ ಗಡಿಯಾರಗಳಿಗೆ ಅನುಮತಿ ನೀಡಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸಲಾಗಿದೆ.</p>.<p>ಜಾಮಿಟಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ, ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿ ನೀಡಲಾಗಿದೆ.</p>.<p>ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳ ಬಾಗಿಲು ಮುಚ್ಚಿಸಲಾಗಿದೆ.</p>.<p>ಪರೀಕ್ಷಾ ಕೇಂದ್ರಗಳ ಎದುರು ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ವಿಜಯಪುರ ನಗರದದ 16 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಆರಂಭವಾಗಿದೆ.</p>.<p>ಒಟ್ಟು 4330 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ, ಹೊರ ಜಿಲ್ಲೆಯ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.</p>.<p>ಪರೀಕ್ಷೆ ಆರಂಭಕ್ಕೂ ಒಂದು ತಾಸು ಮೊದಲೇ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಹಾಜರಿದ್ದರು. ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು.</p>.<p>ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.<br /><br />ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.</p>.<p>ಪರೀಕ್ಷಾರ್ಥಿಗಳಿಗೆ ಮೊಬೈಲ್, ಕ್ಯಾಲ್ಯೂಕ್ಲೀಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್, ಬ್ಲೂ ಟೂತ್ ಹಾಗೂ ಇತರೆ ಎಲ್ಲಾ ಎಲೆಕ್ಟ್ರಾನಿಕ ಉಪಕರಣಗಳನ್ನು ತರುವುದು ನಿಷೇಧಿಸಲಾಗಿದೆ.</p>.<p>ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತಿದೆ.</p>.<p>ಯಾವುದೇ ರೀತಿಯಾದ ಕೈ ಗಡಿಯಾರಗಳಿಗೆ ಅನುಮತಿ ನೀಡಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸಲಾಗಿದೆ.</p>.<p>ಜಾಮಿಟಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ, ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿ ನೀಡಲಾಗಿದೆ.</p>.<p>ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳ ಬಾಗಿಲು ಮುಚ್ಚಿಸಲಾಗಿದೆ.</p>.<p>ಪರೀಕ್ಷಾ ಕೇಂದ್ರಗಳ ಎದುರು ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>