ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ತಹಶೀಲ್ದಾರ್ ಖಾಸಗಿ ವಾಹನ ಚಾಲಕ ಆತ್ಮಹತ್ಯೆ

Last Updated 21 ಜೂನ್ 2020, 15:49 IST
ಅಕ್ಷರ ಗಾತ್ರ

ವಿಜಯಪುರ: ತಹಶೀಲ್ದಾರ್ ಮೋಹನಕುಮಾರಿ ಅವರ ಖಾಸಗಿ ವಾಹನ ಚಾಲಕ ಶನಿವಾರ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ನೂತನ ಪ್ರವಾಸಿ ಮಂದಿರದ ಕಟ್ಟಡದ ಕಿಟಕಿಗೆ ನೇಣು ಹಾಕಿಕೊಂಡು ಚಾಲಕ ಆರೀಫ್ ಜುನೇದಿ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ನಾಲ್ಕು ದಿನಗಳಿಂದ ಮನೆಯಿಂದ ಕಾಣೆಯಾಗಿದ್ದ ಆರೀಫ್, ಕೆಲಸಕ್ಕೂ ಹಾಜರಿರಲಿಲ್ಲ. ಹೀಗಾಗಿ ಕುಟುಂಬ ಸದಸ್ಯರು ಕಾಣೆಯಾಗಿರುವ ಕುರಿತು ಶನಿವಾರ ಮಧ್ಯಾಹ್ನ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಂಜೆ 5 ಗಂಟೆಗೆ ಆರೀಫ್ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಘಟನೆ ಮಾಹಿತಿ ಸಿಗುತ್ತಲೇ ವಿಜಯಪುರ ತಹಶೀಲ್ದಾರ್ ಮೋಹನಕುಮಾರಿ ಡಿಎಸ್ಪಿ ಲಕ್ಷ್ಮೀನಾರಾಯಣ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿಗಳ ಸೆರೆ

ವಿಜಯಪುರ: ತಾಲ್ಲೂಕಿನ ಅರಕೇರಿ ತಾಂಡಾ ನಂ.2ರಲ್ಲಿ ಜೂನ್‌ 10ರಂದು ನಡೆದಿದ್ದ ಸಂತೋಷ ಜಾದವ (31) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಗ್ರಾಮೀಣ ಠಾಣೆಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಅರಕೇರಿ ತಾಂಡಾ ನಂ-2ರ ಸುರೇಶ ರಾಠೋಡ, ಸಂತೋಷ ಪವಾರ, ಸುನೀಲ ಪವಾರ, ಅನೀಲ ಪವಾರ, ಕ್ಯಾತನಕೇರಿ ತಾಂಡಾದ ರವಿ ರಾಠೋಡ ಮತ್ತು ಚಂದ್ರಶೇಖರ ರಾಠೋಡ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ ಎರಡು ಮೋಟಾರ್ ಸೈಕಲ್, ಚಾಕು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡು, ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT