<p><strong>ವಿಜಯಪುರ:</strong> ಇಟ್ಟಂಗಿಹಾಳದಲ್ಲಿರುವ ವೇದ ಅಕಾಡೆಮಿಯಲ್ಲಿ ಅಪ್ಪಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿಣ್ಣರು ತಮ್ಮ ತಂದೆಗೆ ಭಕ್ತಿಭಾವದಿಂದ ಪಾದಪೂಜೆ ನೆರವೇರಿಸಿ ನಮಸ್ಕರಿಸಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ‘ಬದಲಾಗುತ್ತಿರುವ ಇಂದಿನ ಆಧುನಿಕ ಸಮಾಜದಲ್ಲಿ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಶಾಲೆಯಲ್ಲಿಯೇ ಮಕ್ಕಳಿಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಕೆಯು ಮಕ್ಕಳಲ್ಲಿ ಆಧುನಿಕತೆಯ ಜೊತೆಗೆ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುವುದರ ಜೊತೆಗೆ ಒಬ್ಬ ತಾಯಿ ಮನೆಯಲ್ಲಿ ಮಗುವಿಗೆ ಸಂಸ್ಕಾರ ಕೊಟ್ಟರೆ ತಂದೆಯು ಆ ಮಗುವಿಗೆ ಸಮಾಜದಲ್ಲಿ ಹೇಗಿರಬೇಕೆಂಬ ಸಂಸ್ಕಾರವನ್ನು ಕೊಡುತ್ತಾನೆ’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಶಿವಾನಂದ ಕೆಲೂರ ಮಾತನಾಡಿ, ‘ಮಕ್ಕಳ ಆಸಕ್ತಿಯನ್ನು ಗಮನಿಸಿ ಅದೇ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸಿದರೆ ಅಂದುಕೊಂಡ ಗುರಿಯನ್ನು ತಲುಪಲು ಮಕ್ಕಳಿಗೆ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ವಿರೇಶ ವಾಲಿ ಮಾತನಾಡಿದರು. ಪ್ರಾಂಶುಪಾಲ ಮಧ್ವಪ್ರಸಾದ ಜಿ. ಕೆ, ಸಂಸ್ಥೆಯ ಕಾರ್ಯದರ್ಶಿ ಎನ್.ಜಿ. ಯರನಾಳ, ರಶ್ಮಿ ಕವಟಗಿಮಠ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇಟ್ಟಂಗಿಹಾಳದಲ್ಲಿರುವ ವೇದ ಅಕಾಡೆಮಿಯಲ್ಲಿ ಅಪ್ಪಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿಣ್ಣರು ತಮ್ಮ ತಂದೆಗೆ ಭಕ್ತಿಭಾವದಿಂದ ಪಾದಪೂಜೆ ನೆರವೇರಿಸಿ ನಮಸ್ಕರಿಸಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ‘ಬದಲಾಗುತ್ತಿರುವ ಇಂದಿನ ಆಧುನಿಕ ಸಮಾಜದಲ್ಲಿ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಶಾಲೆಯಲ್ಲಿಯೇ ಮಕ್ಕಳಿಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಕೆಯು ಮಕ್ಕಳಲ್ಲಿ ಆಧುನಿಕತೆಯ ಜೊತೆಗೆ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುವುದರ ಜೊತೆಗೆ ಒಬ್ಬ ತಾಯಿ ಮನೆಯಲ್ಲಿ ಮಗುವಿಗೆ ಸಂಸ್ಕಾರ ಕೊಟ್ಟರೆ ತಂದೆಯು ಆ ಮಗುವಿಗೆ ಸಮಾಜದಲ್ಲಿ ಹೇಗಿರಬೇಕೆಂಬ ಸಂಸ್ಕಾರವನ್ನು ಕೊಡುತ್ತಾನೆ’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಶಿವಾನಂದ ಕೆಲೂರ ಮಾತನಾಡಿ, ‘ಮಕ್ಕಳ ಆಸಕ್ತಿಯನ್ನು ಗಮನಿಸಿ ಅದೇ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸಿದರೆ ಅಂದುಕೊಂಡ ಗುರಿಯನ್ನು ತಲುಪಲು ಮಕ್ಕಳಿಗೆ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ವಿರೇಶ ವಾಲಿ ಮಾತನಾಡಿದರು. ಪ್ರಾಂಶುಪಾಲ ಮಧ್ವಪ್ರಸಾದ ಜಿ. ಕೆ, ಸಂಸ್ಥೆಯ ಕಾರ್ಯದರ್ಶಿ ಎನ್.ಜಿ. ಯರನಾಳ, ರಶ್ಮಿ ಕವಟಗಿಮಠ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>