ವಿಜಯಪುರ: ಸಿಂದಗಿ ತಾಲ್ಲೂಕಿನ ಗೋಲಗೇರಿಯಲ್ಲಿ ಮಂಗಳವಾರ ಮಧ್ಯಾಹ್ನ ಬಾವಿಯಲ್ಲಿ ಈಜಲು ಹೋದ ಬಾಲಕರಿಬ್ಬರು ಮುಳುಗಿ ಸಾವಿಗೀಡಾಗಿದ್ದಾರೆ.
ಸೋಮಶೇಖರ ಆಲಮೇಲ(16), ಮಲಿಕ್ ಹುಸೇನ್ ನದಾಫ್(17) ಸಾವಿಗೀಡಾದ ಬಾಲಕರು.
ಬಿಸಿಲಿನ ತಾಪದಿಂದ ತತ್ತರಿಸಿದ್ದ ನಾಲ್ವರು ಸ್ನೇಹಿತರು ಕೂಡಿಕೊಂಡು ಈಜು ಕಲಿಯಲು ಹೋಗಿದ್ದರು. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಈಜಾಡುವ ಸಂದರ್ಭದಲ್ಲಿ ಹಗ್ಗ ಬಿಚ್ಚಿ ನೀರಲ್ಲಿ ಮುಳುಗಿದ್ದಾರೆ ಎಂದು ತಿಳಿದು ಬಂದಿದೆ.