<p><strong>ವಿಜಯಪುರ:</strong> ಜಿಲ್ಲೆಯಲ್ಲಿ ಕೋವಿಡ್ನಿಂದ ಇಬ್ಬರು ಸಾವಿಗೀಡಾಗಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ತಿಳಿಸಿದ್ದಾರೆ</p>.<p>ನಗರದ ಬಾಂಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 33 ವರ್ಷ ವಯೋಮಾನದ ಕೋವಿಡ್ ರೋಗಿ (ಪಿ188675) ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆಯಿಂದ ಬಳಲಿದ್ದ ಇವರು ಆಗಸ್ಟ್ 2 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 10ರಂದು ಸಾವಿಗೀಡಾಗಿದ್ದಾರೆ.</p>.<p>ಬಸವನ ಬಾಗೇವಾಡಿಯ 65 ವರ್ಷ ವಯೋಮಾನದ ವ್ಯಕ್ತಿ (ಪಿ101156) ತೀವ್ರ ಉಸಿರಾಟ ತೊಂದರೆ, ಕೆಮ್ಮು, ಮೈಕೈ ನೋವಿನಿಂದ ಬಳಲಿ ಜುಲೈ 24 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 27 ರಂದು ಮೃತಪಟ್ಟಿದ್ದಾರೆ.</p>.<p><strong>ಜಿಲ್ಲಾಧಿಕಾರಿ ಸೂಚನೆ:</strong>ಪಾಸಿಟಿವ್ ಪ್ರಕರಣಗಳ ಪ್ರಥಮ ಸಂಪರ್ಕ 10 ಹಾಗೂ ದ್ವಿತೀಯ ಸಂಪರ್ಕ 10 ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಕ್ವಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯಲ್ಲಿ ಕೋವಿಡ್ನಿಂದ ಇಬ್ಬರು ಸಾವಿಗೀಡಾಗಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ತಿಳಿಸಿದ್ದಾರೆ</p>.<p>ನಗರದ ಬಾಂಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 33 ವರ್ಷ ವಯೋಮಾನದ ಕೋವಿಡ್ ರೋಗಿ (ಪಿ188675) ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆಯಿಂದ ಬಳಲಿದ್ದ ಇವರು ಆಗಸ್ಟ್ 2 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್ 10ರಂದು ಸಾವಿಗೀಡಾಗಿದ್ದಾರೆ.</p>.<p>ಬಸವನ ಬಾಗೇವಾಡಿಯ 65 ವರ್ಷ ವಯೋಮಾನದ ವ್ಯಕ್ತಿ (ಪಿ101156) ತೀವ್ರ ಉಸಿರಾಟ ತೊಂದರೆ, ಕೆಮ್ಮು, ಮೈಕೈ ನೋವಿನಿಂದ ಬಳಲಿ ಜುಲೈ 24 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 27 ರಂದು ಮೃತಪಟ್ಟಿದ್ದಾರೆ.</p>.<p><strong>ಜಿಲ್ಲಾಧಿಕಾರಿ ಸೂಚನೆ:</strong>ಪಾಸಿಟಿವ್ ಪ್ರಕರಣಗಳ ಪ್ರಥಮ ಸಂಪರ್ಕ 10 ಹಾಗೂ ದ್ವಿತೀಯ ಸಂಪರ್ಕ 10 ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಕ್ವಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>