<p>ವಿಜಯಪುರ: ‘ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕೇವಲ ಮತಪಟ್ಟಿ ಪರಿಷ್ಕರಣೆಯಲ್ಲ. ನಿರ್ದಿಷ್ಟ ಸಮುದಾಯ, ವರ್ಗದ ಮತದಾರರನ್ನು ಹೊರಗಿಡುವ ಹಾಗೂ ಅವರ ನಾಗರಿಕತ್ವವನ್ನು ರದ್ದುಪಡಿಸುವ ಹುನ್ನಾರ’ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಆರೋಪಿಸಿದರು.</p>.<p>‘ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಆಯೋಗದ ಮೂಲಕ ಎಸ್ಐಆರ್ ಎಂಬ ಕಾನೂನುಬಾಹಿರ ಕಾರ್ಯಕ್ಕೆ ಕೈಹಾಕಿದೆ. ಇದರಿಂದ ದೇಶದ ನಾಗರಿಕರ ಪೌರತ್ವಕ್ಕೆ ಅಪಾಯ ಎದುರಾಗಿದೆ’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಈಗಾಗಲೇ ಅನೇಕ ರಾಜ್ಯಗಳು ಆತಂಕ ಮತ್ತು ವಿರೋಧ ವ್ಯಕ್ತಪಡಿಸಿವೆ. ಎಸ್ಐಆರ್ ಸಂಬಂಧಿಸಿದ ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿ ಇರುವುದರಿಂದ ಕರ್ನಾಟಕದಲ್ಲಿ ತರಾತುರಿಯಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಬಾರದು’ ಎಂದು ಒತ್ತಾಯಿಸಿದರು.</p>.<p>‘ಎಸ್ಐಆರ್ ಮೂಲಕ ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ಮತದಾರರನ್ನು ಹೊರಗಿಟ್ಟು, ಬಳಿಕ ಅವರ ನಾಗರಿಕತ್ವವನ್ನೇ ಮೊಟಕುಗೊಳಿಸುವ ದೊಡ್ಡ ಷಡ್ಯಂತ್ರ ಅಡಗಿದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಗರಾಜ ಲಂಬು, ಡಾ.ರವಿಕುಮಾರ ಬಿರಾದಾರ, ಫಯಾಜ್ ಕಲಾದಗಿ, ವಸಂತ ಹೊನಮೋಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-26-2061607528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕೇವಲ ಮತಪಟ್ಟಿ ಪರಿಷ್ಕರಣೆಯಲ್ಲ. ನಿರ್ದಿಷ್ಟ ಸಮುದಾಯ, ವರ್ಗದ ಮತದಾರರನ್ನು ಹೊರಗಿಡುವ ಹಾಗೂ ಅವರ ನಾಗರಿಕತ್ವವನ್ನು ರದ್ದುಪಡಿಸುವ ಹುನ್ನಾರ’ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಆರೋಪಿಸಿದರು.</p>.<p>‘ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಆಯೋಗದ ಮೂಲಕ ಎಸ್ಐಆರ್ ಎಂಬ ಕಾನೂನುಬಾಹಿರ ಕಾರ್ಯಕ್ಕೆ ಕೈಹಾಕಿದೆ. ಇದರಿಂದ ದೇಶದ ನಾಗರಿಕರ ಪೌರತ್ವಕ್ಕೆ ಅಪಾಯ ಎದುರಾಗಿದೆ’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಈಗಾಗಲೇ ಅನೇಕ ರಾಜ್ಯಗಳು ಆತಂಕ ಮತ್ತು ವಿರೋಧ ವ್ಯಕ್ತಪಡಿಸಿವೆ. ಎಸ್ಐಆರ್ ಸಂಬಂಧಿಸಿದ ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿ ಇರುವುದರಿಂದ ಕರ್ನಾಟಕದಲ್ಲಿ ತರಾತುರಿಯಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸಬಾರದು’ ಎಂದು ಒತ್ತಾಯಿಸಿದರು.</p>.<p>‘ಎಸ್ಐಆರ್ ಮೂಲಕ ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ಮತದಾರರನ್ನು ಹೊರಗಿಟ್ಟು, ಬಳಿಕ ಅವರ ನಾಗರಿಕತ್ವವನ್ನೇ ಮೊಟಕುಗೊಳಿಸುವ ದೊಡ್ಡ ಷಡ್ಯಂತ್ರ ಅಡಗಿದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಗರಾಜ ಲಂಬು, ಡಾ.ರವಿಕುಮಾರ ಬಿರಾದಾರ, ಫಯಾಜ್ ಕಲಾದಗಿ, ವಸಂತ ಹೊನಮೋಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-26-2061607528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>