<p><strong>ವಿಜಯಪುರ</strong>: ಮಾಂಸ ಮಾರಾಟದ ವರ್ತಕರು, ಉದ್ದಿಮೆದಾರರು ತ್ಯಾಜ್ಯವನ್ನು ಬೀದಿಯಲ್ಲಿ ಅಥವಾ ವರಾಂಡದಲ್ಲಿ ಎಸೆಯುವುದು ಹಾಗೂ ಹಾಕುವುದನ್ನು ಮಹಾನಗರ ಪಾಲಿಕೆ ನಿಷೇಧಿಸಿದ್ದು, ಆದಾಗ್ಯೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಪರಿಸರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಚ್ಚರಿಕೆ ನೀಡಿದ್ದಾರೆ.</p>.<p>‘ತ್ಯಾಜ್ಯ ಉತ್ಪಾದಿಸುವ ಪ್ರತಿಯೊಬ್ಬ ನಾಗರಿಕರು, ಉದ್ದಿಮೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಸರ್ಜಿಸದೆ ತ್ಯಾಜ್ಯ ವಿಂಗಡಣೆ ಮಾಡಬೇಕು. ವಿಂಗಡಣೆ ಮಾಡಿದ ತ್ಯಾಜ್ಯವನ್ನು ಮಹಾನಗರ ಪಾಲಿಕೆ ದಿನನಿತ್ಯ ಕಳುಹಿಸಿಕೊಡುವ ತ್ಯಾಜ್ಯ ವಾಹನಕ್ಕೆ ಹಾಕಬೇಕು’ ಎಂದಿದ್ದಾರೆ.</p>.<p>‘ಬೀದಿ ನಾಯಿಗಳಿಗೆ ಪಾಲಿಕೆ ಸ್ಥಾಪಿಸಿರುವ ಫೀಡಿಂಗ್ ಝೋನ್ ಗಳಿಗೆ ಉಪಾಹಾರ ಹಾಕಬಹುದು. ಆದರೆ, ಕಳೆದ ಕೆಲ ದಿನಗಳಿಂದ ತ್ಯಾಜ್ಯವನ್ನು ಮಹಾನಗರಪಾಲಿಕೆಯ ವಾಹನಕ್ಕೆ ವಿಲೇವಾರಿ ಮಾಡದೇ ತ್ಯಾಜ್ಯವನ್ನು ರಸ್ತೆ ಬದಿ, ಖಾಲಿ ನಿವೇಶನ, ಸಾರ್ವಜನಿಕ ಇತರೆ ಸ್ಥಳಗಳಲ್ಲಿ ಸಾರ್ವಜನಿಕರು ಎಸೆಯುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ಉಂಟಾಗಿ, ಬೀದಿನಾಯಿಗಳ ಆಕ್ರಮಣಾಕಾರಿ ಪ್ರವೃತ್ತಿ ಹೆಚ್ಚಳವಾಗಿದೆ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-26-671705111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಮಾಂಸ ಮಾರಾಟದ ವರ್ತಕರು, ಉದ್ದಿಮೆದಾರರು ತ್ಯಾಜ್ಯವನ್ನು ಬೀದಿಯಲ್ಲಿ ಅಥವಾ ವರಾಂಡದಲ್ಲಿ ಎಸೆಯುವುದು ಹಾಗೂ ಹಾಕುವುದನ್ನು ಮಹಾನಗರ ಪಾಲಿಕೆ ನಿಷೇಧಿಸಿದ್ದು, ಆದಾಗ್ಯೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಪರಿಸರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಚ್ಚರಿಕೆ ನೀಡಿದ್ದಾರೆ.</p>.<p>‘ತ್ಯಾಜ್ಯ ಉತ್ಪಾದಿಸುವ ಪ್ರತಿಯೊಬ್ಬ ನಾಗರಿಕರು, ಉದ್ದಿಮೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಸರ್ಜಿಸದೆ ತ್ಯಾಜ್ಯ ವಿಂಗಡಣೆ ಮಾಡಬೇಕು. ವಿಂಗಡಣೆ ಮಾಡಿದ ತ್ಯಾಜ್ಯವನ್ನು ಮಹಾನಗರ ಪಾಲಿಕೆ ದಿನನಿತ್ಯ ಕಳುಹಿಸಿಕೊಡುವ ತ್ಯಾಜ್ಯ ವಾಹನಕ್ಕೆ ಹಾಕಬೇಕು’ ಎಂದಿದ್ದಾರೆ.</p>.<p>‘ಬೀದಿ ನಾಯಿಗಳಿಗೆ ಪಾಲಿಕೆ ಸ್ಥಾಪಿಸಿರುವ ಫೀಡಿಂಗ್ ಝೋನ್ ಗಳಿಗೆ ಉಪಾಹಾರ ಹಾಕಬಹುದು. ಆದರೆ, ಕಳೆದ ಕೆಲ ದಿನಗಳಿಂದ ತ್ಯಾಜ್ಯವನ್ನು ಮಹಾನಗರಪಾಲಿಕೆಯ ವಾಹನಕ್ಕೆ ವಿಲೇವಾರಿ ಮಾಡದೇ ತ್ಯಾಜ್ಯವನ್ನು ರಸ್ತೆ ಬದಿ, ಖಾಲಿ ನಿವೇಶನ, ಸಾರ್ವಜನಿಕ ಇತರೆ ಸ್ಥಳಗಳಲ್ಲಿ ಸಾರ್ವಜನಿಕರು ಎಸೆಯುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ಉಂಟಾಗಿ, ಬೀದಿನಾಯಿಗಳ ಆಕ್ರಮಣಾಕಾರಿ ಪ್ರವೃತ್ತಿ ಹೆಚ್ಚಳವಾಗಿದೆ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-26-671705111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>