<p>ವಿಜಯಪುರ: ಮಹಾರಾಷ್ಟ್ರ ರಾಜ್ಯಕ್ಕೆ ಹೊಂದುಕೊಂಡಿರುವ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಜಾರಿಗೊಳಿಸಲಾಗಿರುವ ವಾರಾಂತ್ಯ ಕರ್ಫ್ಯೂ ನೆಪ ಮಾತ್ರಕ್ಕೆ ಎಂಬಂತಾಗಿದೆ.</p>.<p>ವಾಣಿಜ್ಯ, ವ್ಯಾಪಾರ ಚಟುವಟಿಕೆ ಬಂದ್ ಹೊರತು ಪಡಿಸಿದರೆ ನಗರ ವ್ಯಾಪ್ತಿಯಲ್ಲಿಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಜನ, ವಾಹನ ಸಂಚಾರ, ಬೀದಿ ಬದಿ ವ್ಯಾಪಾರ, ಸಂತೆಗಳು ಎಂದಿನಂತೆ ನಡೆದಿವೆ.</p>.<p>ಅನಗತ್ಯ ಸಂಚಾರಕ್ಕೆ ಪೊಲೀಸರು ಕಡಿವಾಣ ಹಾಕದ ಪರಿಣಾಮ ಜನರು ಎಂದಿನಂತೆ ವ್ಯಾಪಾರ, ವಹಿವಾಟಿನಲ್ಲಿತೊಡಗಿರುವ ಹಾಗೂ ಮನಸೋ ಇಚ್ಛೆ ಸುತ್ತಾಡುವ ದೃಶ್ಯ ಶನಿವಾರ ಎಲ್ಲೆಡೆ ಕಂಡುಬಂದಿತು.</p>.<p>ಮಧ್ಯಾಹ್ನ 2 ಗಂಟೆಯೆ ಬಳಿಕವೂ ಅಲ್ಲಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿದ್ದ ವ್ಯಾಪಾರಿಗಳು, ಜನರನ್ನು ಪೊಲೀಸರು ಚದುರಿಸಿದರೂ ಅವರು ಸ್ಥಳದಿಂದ ಮರೆಯಾಗುತ್ತಿದ್ದಂತೆ ಯಥಾ ಪ್ರಕಾರ ಜನರು ವ್ಯಾಪಾರ, ವಹಿವಾಟಿನಲ್ಲಿ ತೊಡಗುವುದು ಸಾಮಾನ್ಯವಾಗಿದೆ.</p>.<p>ನಗರದ ಮುಖ್ಯ ಮಾರುಕಟ್ಟೆ, ಬಸ್ ನಿಲ್ದಾಣದ ವ್ಯಾಪ್ತಿ ಹೊರತು ಪಡಿಸಿದರೆ ಜನವಸತಿ ಪ್ರದೇಶಗಳಲ್ಲಿ, ವಿವಿಧ ಬಡಾವಣೆಗಳಲ್ಲಿ ಅಂಗಡಿ,ಮಳಿಗೆಗಳು ದಿನಪೂರ್ತಿ ಬಾಗಿಲು ತೆರೆದು ವ್ಯಾಪಾರದಲ್ಲಿ ತೊಡಗುತ್ತಿದ್ದಾರೆ.</p>.<p>ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ ನಗರದಲ್ಲಿ ಜನರು ಮಾಸ್ಕ್ ಧರಿಸಿದೇ, ಪರಸ್ಪರ ಅಂತರ ಕಾಪಾಡದೇ ಅಂಗಡಿ, ಮಳಿಗೆಗಳಲ್ಲಿ, ಕಚೇರಿಗಳಲ್ಲಿ, ಬೀದಿಗಳಲ್ಲಿ ಸುತ್ತಾಡುವುದು ಕಂಡುಬರುತ್ತಿದ್ದರೂ ದಂಡ ವಿಧಿಸುವ ಗೋಜಿಗೆ ಪೊಲೀಸರು, ಮಹಾನಗರ ಪಾಲಿಕೆ ಸಿಬ್ಬಂದಿ ಆದ್ಯತೆ ಕೊಡುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಮಹಾರಾಷ್ಟ್ರ ರಾಜ್ಯಕ್ಕೆ ಹೊಂದುಕೊಂಡಿರುವ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಜಾರಿಗೊಳಿಸಲಾಗಿರುವ ವಾರಾಂತ್ಯ ಕರ್ಫ್ಯೂ ನೆಪ ಮಾತ್ರಕ್ಕೆ ಎಂಬಂತಾಗಿದೆ.</p>.<p>ವಾಣಿಜ್ಯ, ವ್ಯಾಪಾರ ಚಟುವಟಿಕೆ ಬಂದ್ ಹೊರತು ಪಡಿಸಿದರೆ ನಗರ ವ್ಯಾಪ್ತಿಯಲ್ಲಿಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಜನ, ವಾಹನ ಸಂಚಾರ, ಬೀದಿ ಬದಿ ವ್ಯಾಪಾರ, ಸಂತೆಗಳು ಎಂದಿನಂತೆ ನಡೆದಿವೆ.</p>.<p>ಅನಗತ್ಯ ಸಂಚಾರಕ್ಕೆ ಪೊಲೀಸರು ಕಡಿವಾಣ ಹಾಕದ ಪರಿಣಾಮ ಜನರು ಎಂದಿನಂತೆ ವ್ಯಾಪಾರ, ವಹಿವಾಟಿನಲ್ಲಿತೊಡಗಿರುವ ಹಾಗೂ ಮನಸೋ ಇಚ್ಛೆ ಸುತ್ತಾಡುವ ದೃಶ್ಯ ಶನಿವಾರ ಎಲ್ಲೆಡೆ ಕಂಡುಬಂದಿತು.</p>.<p>ಮಧ್ಯಾಹ್ನ 2 ಗಂಟೆಯೆ ಬಳಿಕವೂ ಅಲ್ಲಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿದ್ದ ವ್ಯಾಪಾರಿಗಳು, ಜನರನ್ನು ಪೊಲೀಸರು ಚದುರಿಸಿದರೂ ಅವರು ಸ್ಥಳದಿಂದ ಮರೆಯಾಗುತ್ತಿದ್ದಂತೆ ಯಥಾ ಪ್ರಕಾರ ಜನರು ವ್ಯಾಪಾರ, ವಹಿವಾಟಿನಲ್ಲಿ ತೊಡಗುವುದು ಸಾಮಾನ್ಯವಾಗಿದೆ.</p>.<p>ನಗರದ ಮುಖ್ಯ ಮಾರುಕಟ್ಟೆ, ಬಸ್ ನಿಲ್ದಾಣದ ವ್ಯಾಪ್ತಿ ಹೊರತು ಪಡಿಸಿದರೆ ಜನವಸತಿ ಪ್ರದೇಶಗಳಲ್ಲಿ, ವಿವಿಧ ಬಡಾವಣೆಗಳಲ್ಲಿ ಅಂಗಡಿ,ಮಳಿಗೆಗಳು ದಿನಪೂರ್ತಿ ಬಾಗಿಲು ತೆರೆದು ವ್ಯಾಪಾರದಲ್ಲಿ ತೊಡಗುತ್ತಿದ್ದಾರೆ.</p>.<p>ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ ನಗರದಲ್ಲಿ ಜನರು ಮಾಸ್ಕ್ ಧರಿಸಿದೇ, ಪರಸ್ಪರ ಅಂತರ ಕಾಪಾಡದೇ ಅಂಗಡಿ, ಮಳಿಗೆಗಳಲ್ಲಿ, ಕಚೇರಿಗಳಲ್ಲಿ, ಬೀದಿಗಳಲ್ಲಿ ಸುತ್ತಾಡುವುದು ಕಂಡುಬರುತ್ತಿದ್ದರೂ ದಂಡ ವಿಧಿಸುವ ಗೋಜಿಗೆ ಪೊಲೀಸರು, ಮಹಾನಗರ ಪಾಲಿಕೆ ಸಿಬ್ಬಂದಿ ಆದ್ಯತೆ ಕೊಡುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>