<p><strong>ಡೋಣಿ ಕಡಕೋಳ(ದೇವರಹಿಪ್ಪರಗಿ):</strong> ‘ಉಡಿ ತುಂಬುವಂತಹ ಕಾರ್ಯಕ್ರಮದಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯು ನಮ್ಮ ಸಂಪ್ರದಾಯದ ಪಾಲನೆ ಹಾಗೂ ಬೆಳವಣಿಗೆಯನ್ನು ಸೂಚಿಸುತ್ತದೆ. ಅವರು ಸಮಾಜದ ಶಕ್ತಿ ಆಗಿದ್ದಾರೆ’ ಎಂದು ಕಡಕೋಳ ಗದ್ದುಗೆಹಿರೇಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಡೋಣಿ ಕಡಕೋಳ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಪುರಾಣದ ಅಂಗವಾಗಿ ಜರುಗಿದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>ವಿಜಯಪುರ ಅನುಗ್ರಹ ಆಸ್ಪತ್ರೆಯ ಡಾ. ಪ್ರಭುಗೌಡ ಬಿ.ಎಲ್(ಚಬನೂರ) ಮಾತನಾಡಿ, ‘ಮಹಿಳೆ ಮಮತೆ, ಮಮಕಾರದ ಮಾತೃ ಸ್ವರೂಪಿ. ಅಂತೆಯೇ ನಮ್ಮ ನೆಲದ ಸಂಪ್ರದಾಯ, ಸಂಸ್ಕೃತಿಗಳನ್ನು ಪಾಲಿಸಿ ಮುಂದುವರಿಸಿಕೊಂಡು ಹೋಗುವಲ್ಲಿ ಅವಳು ಸದಾ ಮುಂದು. ಹೀಗಾಗಿಯೇ ಮಹಿಳೆಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ’ ಎಂದರು.</p>.<p>ಪುರಾಣ ಪ್ರವಚನಕಾರ ದೇವರಹಿಪ್ಪರಗಿ ಜಡಿಮಠ ಜಡಿಸಿದ್ಧೇಶ್ವರ ಸ್ವಾಮೀಜಿ, ಹಿರೇಮಠದ ಮಹಾಲಿಂಗಯ್ಯ ಸ್ವಾಮೀಜಿ, ಮಹಾದೇವಿ ಬಸಣ್ಣವರ, ಶಶಿಕಲಾ ತೆಗ್ಗಿನಮನಿ, ಲಲಿತಾ ಖೈನೂರ, ರಾಜಶ್ರೀ ಹಿರೇಮಠ, ಜಯಶ್ರೀ ಯಲರಡ್ಡಿ, ಶಶಿಕಲಾ ಕಲ್ಲಣ್ಣವರ, ಜ್ಯೋತಿ ಉಮರ್ಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-239212775</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೋಣಿ ಕಡಕೋಳ(ದೇವರಹಿಪ್ಪರಗಿ):</strong> ‘ಉಡಿ ತುಂಬುವಂತಹ ಕಾರ್ಯಕ್ರಮದಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯು ನಮ್ಮ ಸಂಪ್ರದಾಯದ ಪಾಲನೆ ಹಾಗೂ ಬೆಳವಣಿಗೆಯನ್ನು ಸೂಚಿಸುತ್ತದೆ. ಅವರು ಸಮಾಜದ ಶಕ್ತಿ ಆಗಿದ್ದಾರೆ’ ಎಂದು ಕಡಕೋಳ ಗದ್ದುಗೆಹಿರೇಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಡೋಣಿ ಕಡಕೋಳ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಪುರಾಣದ ಅಂಗವಾಗಿ ಜರುಗಿದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.</p>.<p>ವಿಜಯಪುರ ಅನುಗ್ರಹ ಆಸ್ಪತ್ರೆಯ ಡಾ. ಪ್ರಭುಗೌಡ ಬಿ.ಎಲ್(ಚಬನೂರ) ಮಾತನಾಡಿ, ‘ಮಹಿಳೆ ಮಮತೆ, ಮಮಕಾರದ ಮಾತೃ ಸ್ವರೂಪಿ. ಅಂತೆಯೇ ನಮ್ಮ ನೆಲದ ಸಂಪ್ರದಾಯ, ಸಂಸ್ಕೃತಿಗಳನ್ನು ಪಾಲಿಸಿ ಮುಂದುವರಿಸಿಕೊಂಡು ಹೋಗುವಲ್ಲಿ ಅವಳು ಸದಾ ಮುಂದು. ಹೀಗಾಗಿಯೇ ಮಹಿಳೆಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ’ ಎಂದರು.</p>.<p>ಪುರಾಣ ಪ್ರವಚನಕಾರ ದೇವರಹಿಪ್ಪರಗಿ ಜಡಿಮಠ ಜಡಿಸಿದ್ಧೇಶ್ವರ ಸ್ವಾಮೀಜಿ, ಹಿರೇಮಠದ ಮಹಾಲಿಂಗಯ್ಯ ಸ್ವಾಮೀಜಿ, ಮಹಾದೇವಿ ಬಸಣ್ಣವರ, ಶಶಿಕಲಾ ತೆಗ್ಗಿನಮನಿ, ಲಲಿತಾ ಖೈನೂರ, ರಾಜಶ್ರೀ ಹಿರೇಮಠ, ಜಯಶ್ರೀ ಯಲರಡ್ಡಿ, ಶಶಿಕಲಾ ಕಲ್ಲಣ್ಣವರ, ಜ್ಯೋತಿ ಉಮರ್ಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-239212775</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>