<p><strong>ವಿಜಯಪುರ</strong>: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.</p>.<p>ನಗರದ ವಾರ್ಡ್ ನಂ.33ರ ಶಹಾಪೇಟೆ ಲೇಔಟ್ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ₹10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿ, ಬನಶಂಕರಿ ದೇವಸ್ಥಾನದ ಆವರಣದಲ್ಲಿ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ₹15 ಲಕ್ಷ ಮೊತ್ತದ ವೇದಮಾತಾ ಶ್ರೀ ಗಾಯತ್ರಿ ಪ್ರತಿಷ್ಠಾನ ಟ್ರಸ್ಟ್ನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ರಹೀಮ್ ನಗರ ಕೌಜಲಗಿ ತೋಟದ ಜೈ ಹನುಮಾನ್ ಗುಡಿ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ₹15 ಲಕ್ಷ ಅನುದಾನದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಕುರಿಯವರ, ಪ್ರೇಮಾನಂದ ಬಿರಾದಾರ, ಮುಖಂಡರಾದ ಶಂಕರ ಹೂಗಾರ, ವಿಠ್ಠಲ ನಡುವಿನಕೇರಿ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ, ಎನ್.ಎಂ. ಪ್ಯಾಟಿ, ಆನಂದ ದೊಡಮನಿ, ಸಂಗಮೇಶ ಮೇತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-640731622</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.</p>.<p>ನಗರದ ವಾರ್ಡ್ ನಂ.33ರ ಶಹಾಪೇಟೆ ಲೇಔಟ್ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ₹10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿ, ಬನಶಂಕರಿ ದೇವಸ್ಥಾನದ ಆವರಣದಲ್ಲಿ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ₹15 ಲಕ್ಷ ಮೊತ್ತದ ವೇದಮಾತಾ ಶ್ರೀ ಗಾಯತ್ರಿ ಪ್ರತಿಷ್ಠಾನ ಟ್ರಸ್ಟ್ನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ರಹೀಮ್ ನಗರ ಕೌಜಲಗಿ ತೋಟದ ಜೈ ಹನುಮಾನ್ ಗುಡಿ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ₹15 ಲಕ್ಷ ಅನುದಾನದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಕುರಿಯವರ, ಪ್ರೇಮಾನಂದ ಬಿರಾದಾರ, ಮುಖಂಡರಾದ ಶಂಕರ ಹೂಗಾರ, ವಿಠ್ಠಲ ನಡುವಿನಕೇರಿ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ, ಎನ್.ಎಂ. ಪ್ಯಾಟಿ, ಆನಂದ ದೊಡಮನಿ, ಸಂಗಮೇಶ ಮೇತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-640731622</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>