<p><strong>ವಿಜಯಪುರ: </strong>ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಗಾದಿಗೆ ಜೂನ್ 30 ಮಧ್ಯಾಹ್ನ 3ಕ್ಕೆ ಚುನಾವಣೆ ನಿಗದಿಯಾಗಿದೆ.</p>.<p>ಒಟ್ಟು 42 ಸದಸ್ಯ ಸಂಖ್ಯಾ ಬಲ ಇರುವ ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಮತ್ತು ಪಕ್ಷೇತರ 1 ಸದಸ್ಯ ಬಲ ಹೊಂದಿದೆ. ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಹೊಂದಿಲ್ಲದಿರುವುದರಿಂದ ಅತಂತ್ರ ಪರಿಸ್ಥಿತಿಯಲ್ಲಿ ಅಧ್ಯಕ್ಷ ಗಾದಿ ಯಾರ ಪಾಲಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.</p>.<p class="Subhead"><strong>ಕಾಂಗ್ರೆಸ್, ಬಿಜೆಪಿ ಪೈಪೋಟಿ:</strong></p>.<p>ಕಾಂಗ್ರೆಸ್ನಿಂದ ಸಾರವಾಡ ಕ್ಷೇತ್ರದ ಸುಜಾತಾ ಕಳ್ಳಿಮನಿ ಮತ್ತು ಬಿಜೆಪಿಯಿಂದ ನಿವರಗಿ ಕ್ಷೇತ್ರದ ಭೀಮಾಶಂಕರ ಬಿರಾದಾರ ಅವರು ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.</p>.<p>ಎರಡೂ ಪಕ್ಷಗಳು ತಮ್ಮ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ವಿಪ್ ಜಾರಿಗೊಳಿಸಿವೆ. ಜೆಡಿಎಸ್ ತನ್ನ ಸದಸ್ಯರಿಗೆ ಮೌಖಿಕವಾಗಿ ಸೂಚನೆ ನೀಡಿದೆ.</p>.<p>ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿಗೆ ಸಂಖ್ಯಾಬಲ ಹೆಚ್ಚಿದ್ದರೂ ಈ ಹಿಂದಿನ ಎರಡೂ ಅವಧಿಯಲ್ಲಿ ಅಧ್ಯಕ್ಷ ಸ್ಥಾನವನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್ ಎರಡು ಅವಧಿಯಲ್ಲೂ ಅಧಿಕಾರ ನಡೆಸಿ, ಇದೀಗ ಕೊನೆಯ ಅವಧಿ ಅಧಿಕಾರವನ್ನು ತನ್ನ ಬಳಿ ಉಳಿಸಿಕೊಳ್ಳಲು ಹರಸಾಹಸ ಮಾಡತೊಡಗಿದೆ.</p>.<p class="Subhead"><strong>ರೆಸಾರ್ಟ್ ಸೇರಿರುವ ಬಿಜೆಪಿ ಸದಸ್ಯರು:</strong></p>.<p>ಬಿಜೆಪಿ ಈಗಾಗಲೇ ತನ್ನ ಸದಸ್ಯರಿಗೆ ವಿಪ್ ಚಾರಿಗೊಳಿಸಿದೆ. ಸದಸ್ಯರನ್ನು ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ಈಗಾಗಲೇ ಬಿಜೆಪಿ 16 ಸದಸ್ಯರು ಬಾಗಲಕೋಟೆಯ ಕಂಠಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>ಈ ನಡುವೆ ರೆಸಾರ್ಟ್ಗೆ ಹೋಗದೇ ತಪ್ಪಿಸಿಕೊಂಡಿರುವ ಮೊರಟಗಿ ಕ್ಷೇತ್ರದ ಬಿಜೆಪಿ ಸದಸ್ಯ ಬಿಂದುರಾಯಗೌಡ ಪಾಟೀಲ ಮತ್ತು ಯಂಕಂಚಿ ಕ್ಷೇತ್ರದ ಬಿಜೆಪಿ ಸದಸ್ಯ ಮಹಾಂತಗೌಡ ಶಂಕರಗೌಡ ಪಾಟೀಲ ನಡೆ ರಾಜಕೀಯವಾಗಿ ಕುತೂಹಲ ಕೆರಳಿಸಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಬಿಜೆಪಿಯ ಒಮ್ಮತದ ಅಭ್ಯರ್ಥಿಯನ್ನಾಗಿ ಭೀಮಾಶಂಕರ ಬಿರಾದಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಇಬ್ಬರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂಬುದು ಊಹಾಪೂಹ. ನಮ್ಮ ಪ್ರಯತ್ನ ನಡೆದಿದೆ. ಈ ಬಾರಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Subhead"><strong>ಜೆಡಿಎಸ್ ಬೆಂಬಲ ಯಾರಿಗೆ?:</strong></p>.<p>ಮೂರು ಸದಸ್ಯ ಬಲ ಹೊಂದಿರುವ ಜೆಡಿಎಸ್ನಲ್ಲಿ ಇಬ್ಬರು ಕಾಂಗ್ರೆಸ್ನತ್ತ, ಒಬ್ಬರು ಬಿಜೆಪಿಯತ್ತ ಒಲವು ಹೊಂದಿದ್ದಾರೆ. ಅಲ್ಲದೇ, ಪಕ್ಷೇತರ ಸದಸ್ಯರೊಬ್ಬರೂ ಸಹ ಬಿಜೆಪಿ ಬೆಂಬಲಿಸಿದ್ದಾರೆ. ಹೀಗಾಗಿ ಕದನ ಕಣ ಕುತೂಹಲ ಕೆರಳಿಸಿದೆ.</p>.<p>ಕಾಂಗ್ರೆಸ್, ಬಿಜೆಪಿಯಲ್ಲಿ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ಇಲ್ಲದಿರುವುದರಿಂದ ಕೊನೆಯ ಕ್ಷಣದ ವರೆಗೂ ಯಾರು ಅಧ್ಯಕ್ಷರಾಗುತ್ತಾರೆ ಎಂಬುದು ಫಿಫ್ಟಿ–ಫಿಫ್ಟಿ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಗಾದಿಗೆ ಜೂನ್ 30 ಮಧ್ಯಾಹ್ನ 3ಕ್ಕೆ ಚುನಾವಣೆ ನಿಗದಿಯಾಗಿದೆ.</p>.<p>ಒಟ್ಟು 42 ಸದಸ್ಯ ಸಂಖ್ಯಾ ಬಲ ಇರುವ ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿ 20, ಕಾಂಗ್ರೆಸ್ 18, ಜೆಡಿಎಸ್ 3 ಮತ್ತು ಪಕ್ಷೇತರ 1 ಸದಸ್ಯ ಬಲ ಹೊಂದಿದೆ. ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಹೊಂದಿಲ್ಲದಿರುವುದರಿಂದ ಅತಂತ್ರ ಪರಿಸ್ಥಿತಿಯಲ್ಲಿ ಅಧ್ಯಕ್ಷ ಗಾದಿ ಯಾರ ಪಾಲಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.</p>.<p class="Subhead"><strong>ಕಾಂಗ್ರೆಸ್, ಬಿಜೆಪಿ ಪೈಪೋಟಿ:</strong></p>.<p>ಕಾಂಗ್ರೆಸ್ನಿಂದ ಸಾರವಾಡ ಕ್ಷೇತ್ರದ ಸುಜಾತಾ ಕಳ್ಳಿಮನಿ ಮತ್ತು ಬಿಜೆಪಿಯಿಂದ ನಿವರಗಿ ಕ್ಷೇತ್ರದ ಭೀಮಾಶಂಕರ ಬಿರಾದಾರ ಅವರು ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.</p>.<p>ಎರಡೂ ಪಕ್ಷಗಳು ತಮ್ಮ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ವಿಪ್ ಜಾರಿಗೊಳಿಸಿವೆ. ಜೆಡಿಎಸ್ ತನ್ನ ಸದಸ್ಯರಿಗೆ ಮೌಖಿಕವಾಗಿ ಸೂಚನೆ ನೀಡಿದೆ.</p>.<p>ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿಗೆ ಸಂಖ್ಯಾಬಲ ಹೆಚ್ಚಿದ್ದರೂ ಈ ಹಿಂದಿನ ಎರಡೂ ಅವಧಿಯಲ್ಲಿ ಅಧ್ಯಕ್ಷ ಸ್ಥಾನವನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್ ಎರಡು ಅವಧಿಯಲ್ಲೂ ಅಧಿಕಾರ ನಡೆಸಿ, ಇದೀಗ ಕೊನೆಯ ಅವಧಿ ಅಧಿಕಾರವನ್ನು ತನ್ನ ಬಳಿ ಉಳಿಸಿಕೊಳ್ಳಲು ಹರಸಾಹಸ ಮಾಡತೊಡಗಿದೆ.</p>.<p class="Subhead"><strong>ರೆಸಾರ್ಟ್ ಸೇರಿರುವ ಬಿಜೆಪಿ ಸದಸ್ಯರು:</strong></p>.<p>ಬಿಜೆಪಿ ಈಗಾಗಲೇ ತನ್ನ ಸದಸ್ಯರಿಗೆ ವಿಪ್ ಚಾರಿಗೊಳಿಸಿದೆ. ಸದಸ್ಯರನ್ನು ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ಈಗಾಗಲೇ ಬಿಜೆಪಿ 16 ಸದಸ್ಯರು ಬಾಗಲಕೋಟೆಯ ಕಂಠಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<p>ಈ ನಡುವೆ ರೆಸಾರ್ಟ್ಗೆ ಹೋಗದೇ ತಪ್ಪಿಸಿಕೊಂಡಿರುವ ಮೊರಟಗಿ ಕ್ಷೇತ್ರದ ಬಿಜೆಪಿ ಸದಸ್ಯ ಬಿಂದುರಾಯಗೌಡ ಪಾಟೀಲ ಮತ್ತು ಯಂಕಂಚಿ ಕ್ಷೇತ್ರದ ಬಿಜೆಪಿ ಸದಸ್ಯ ಮಹಾಂತಗೌಡ ಶಂಕರಗೌಡ ಪಾಟೀಲ ನಡೆ ರಾಜಕೀಯವಾಗಿ ಕುತೂಹಲ ಕೆರಳಿಸಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಬಿಜೆಪಿಯ ಒಮ್ಮತದ ಅಭ್ಯರ್ಥಿಯನ್ನಾಗಿ ಭೀಮಾಶಂಕರ ಬಿರಾದಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಇಬ್ಬರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂಬುದು ಊಹಾಪೂಹ. ನಮ್ಮ ಪ್ರಯತ್ನ ನಡೆದಿದೆ. ಈ ಬಾರಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Subhead"><strong>ಜೆಡಿಎಸ್ ಬೆಂಬಲ ಯಾರಿಗೆ?:</strong></p>.<p>ಮೂರು ಸದಸ್ಯ ಬಲ ಹೊಂದಿರುವ ಜೆಡಿಎಸ್ನಲ್ಲಿ ಇಬ್ಬರು ಕಾಂಗ್ರೆಸ್ನತ್ತ, ಒಬ್ಬರು ಬಿಜೆಪಿಯತ್ತ ಒಲವು ಹೊಂದಿದ್ದಾರೆ. ಅಲ್ಲದೇ, ಪಕ್ಷೇತರ ಸದಸ್ಯರೊಬ್ಬರೂ ಸಹ ಬಿಜೆಪಿ ಬೆಂಬಲಿಸಿದ್ದಾರೆ. ಹೀಗಾಗಿ ಕದನ ಕಣ ಕುತೂಹಲ ಕೆರಳಿಸಿದೆ.</p>.<p>ಕಾಂಗ್ರೆಸ್, ಬಿಜೆಪಿಯಲ್ಲಿ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ಇಲ್ಲದಿರುವುದರಿಂದ ಕೊನೆಯ ಕ್ಷಣದ ವರೆಗೂ ಯಾರು ಅಧ್ಯಕ್ಷರಾಗುತ್ತಾರೆ ಎಂಬುದು ಫಿಫ್ಟಿ–ಫಿಫ್ಟಿ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>