ವಿಜಯಪುರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಬಿಜೆಪಿಗೆ ಮತ ಚಲಾಯಿಸಿದ ಮೂವರು ಸದಸ್ಯರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಬಲೇಶ್ವರ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಸದಸ್ಯ ಉಮೇಶ ಕೋಳ್ಕೂರ, ಸಾಲೂಟಗಿ ಕ್ಷೇತ್ರದ ಶಿವಯೋಗಪ್ಪ ನೇದಲಗಿ ಹಾಗೂ ಹಲಸಂಗಿ ಕ್ಷೇತ್ರದ ಶಿವಶರಣ ಭೈರಗೊಂಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ.
ಮೂವರ ಜಿಲ್ಲಾ ಪಂಚಾಯ್ತಿ ಸದಸ್ಯತ್ವವನ್ನು ರದ್ದು ಪಡಿಸಲು ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.