<p>ಪ್ರಜಾವಾಣಿ ವಾರ್ತೆ</p>.<p>ವಿಜಯಪುರ: ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದೇವಾನುದೇವತೆಗಳ ಮೂರ್ತಿಗಳು, ಆಭರಣಗಳ ತಯಾರಿಕೆಯಲ್ಲಿ ವಿಶ್ವಕರ್ಮ ಸಮಾಜ ತಮ್ಮ ಕಲಾ ಕೌಶಲದಿಂದ ಗುರುತಿಸಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ವಿಶ್ವಕರ್ಮ ಸಮುದಾಯ ಜನರು ಬಹಳ ಶ್ರಮ ಜೀವಿಗಳು, ತಮ್ಮ ಬದುಕು, ಸಂಸಾರವನ್ನು ಬದಿಗಿಟ್ಟು ಸಮ ಸಮಾಜ, ಸುಂದರ ಹಾಗೂ ಕಷ್ಟಗಳನ್ನು ಅರಿತ ಈ ಸಮುದಾಯವು ಉಳಿದ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರು. ಇತಿಹಾಸವನ್ನು ಅರಿಯುವ ಮೂಲಕ ಮಹನೀಯರ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.</p>.<p>ಉಪನ್ಯಾಸ ನೀಡಿದ ಐಶ್ವರ್ಯ ಪತ್ತಾರ, ಜಗತ್ತನ್ನು ಸೃಷ್ಟಿಸಿದ ಮಹಾನ್ ಪುರುಷರಾದ ವಿಶ್ವಕರ್ಮ ಪರಬ್ರಹ್ಮ ದೇವಶಿಲ್ಪಿ ವಿಶ್ವಕರ್ಮರು ಶಿವನಿಗಾಗಿ ಲಂಕೆಯನ್ನು ನಿರ್ಮಿಸಿದವರು. ಹಲವಾರು ಕಲೆಗಳನ್ನು ಕರಗತ ಹೊಂದಿದವರು. ರೈತರ ಬೆನ್ನೆಲಬು ವಿಶ್ವಕರ್ಮರು, ಅತಿಥಿ ಸಂಸ್ಕಾರ, ಗುರುಹಿರಿಯರ ಸೇವೆ, ದೈವಭಕ್ತಿ ಹಾಗೂ ಗುರುಗಳ ಸೇವೆ ಇವರ ಕರ್ತವ್ಯಗಳಾಗಿದ್ದವು ಎಂದು ಅವರು ಹೇಳಿದರು.</p>.<p>ಮೂರುಸಾವಿರ ಮಠದ ಮಹೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ವೈ.ಎಸ್ ನಾರಾಯಣಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಬೋವಿ, ಸಮಾಜದ ಮುಖಂಡರಾದ ಸುದರ್ಶನ ಪೇಂಟರ್, ಉಮೇಶ ಪೊದ್ದಾರ, ಮೌನೇಶ ಪೊದ್ದಾರ, ಬಾಳು ಗಿರಗಾಂವ್ಕರ, ಸಚಿನ ಗಿರಗಾಂವ್ಕರ, ಡಾ.ಜ್ಞಾನೇಶ್ವರ ಪಂಡಿತ, ವಿನಾಯಕ ವಿಜಾಪುರಕರ, ಶ್ರೀಕಾಂತ ಕುಂದನಗಾರ, ಈರಣ್ಣ ಪತ್ತಾರ, ವಿದ್ಯಾವತಿ ಅಂಕಲಗಿ ಉಪಸ್ಥಿತರಿದ್ದರು.</p>.<div><blockquote>ಎಲ್ಲಿಯವರೆಗೆ ಕೌಶಲ ಆಧಾರಿತ ವೃತ್ತಿಗಳು ಭೂಮಿಯ ಮೇಲೆ ಅಸ್ಥಿತ್ವದಲ್ಲಿರುತ್ತವೆಯೋ ಅಲ್ಲಿಯವರೆಗೆ ವಿಶ್ವಕರ್ಮರು ಅಜರಾಮರಾಗಿತ್ತಾರೆ </blockquote><span class="attribution"> -ಸಂಗಮೇಶ ಬಬಲೇಶ್ವರ ಅಧ್ಯಕ್ಷ ಬಾಲ ವಿಕಾಸ ಅಕಾಡೆಮಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ವಿಜಯಪುರ: ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದೇವಾನುದೇವತೆಗಳ ಮೂರ್ತಿಗಳು, ಆಭರಣಗಳ ತಯಾರಿಕೆಯಲ್ಲಿ ವಿಶ್ವಕರ್ಮ ಸಮಾಜ ತಮ್ಮ ಕಲಾ ಕೌಶಲದಿಂದ ಗುರುತಿಸಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ವಿಶ್ವಕರ್ಮ ಸಮುದಾಯ ಜನರು ಬಹಳ ಶ್ರಮ ಜೀವಿಗಳು, ತಮ್ಮ ಬದುಕು, ಸಂಸಾರವನ್ನು ಬದಿಗಿಟ್ಟು ಸಮ ಸಮಾಜ, ಸುಂದರ ಹಾಗೂ ಕಷ್ಟಗಳನ್ನು ಅರಿತ ಈ ಸಮುದಾಯವು ಉಳಿದ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರು. ಇತಿಹಾಸವನ್ನು ಅರಿಯುವ ಮೂಲಕ ಮಹನೀಯರ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.</p>.<p>ಉಪನ್ಯಾಸ ನೀಡಿದ ಐಶ್ವರ್ಯ ಪತ್ತಾರ, ಜಗತ್ತನ್ನು ಸೃಷ್ಟಿಸಿದ ಮಹಾನ್ ಪುರುಷರಾದ ವಿಶ್ವಕರ್ಮ ಪರಬ್ರಹ್ಮ ದೇವಶಿಲ್ಪಿ ವಿಶ್ವಕರ್ಮರು ಶಿವನಿಗಾಗಿ ಲಂಕೆಯನ್ನು ನಿರ್ಮಿಸಿದವರು. ಹಲವಾರು ಕಲೆಗಳನ್ನು ಕರಗತ ಹೊಂದಿದವರು. ರೈತರ ಬೆನ್ನೆಲಬು ವಿಶ್ವಕರ್ಮರು, ಅತಿಥಿ ಸಂಸ್ಕಾರ, ಗುರುಹಿರಿಯರ ಸೇವೆ, ದೈವಭಕ್ತಿ ಹಾಗೂ ಗುರುಗಳ ಸೇವೆ ಇವರ ಕರ್ತವ್ಯಗಳಾಗಿದ್ದವು ಎಂದು ಅವರು ಹೇಳಿದರು.</p>.<p>ಮೂರುಸಾವಿರ ಮಠದ ಮಹೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ವೈ.ಎಸ್ ನಾರಾಯಣಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಬೋವಿ, ಸಮಾಜದ ಮುಖಂಡರಾದ ಸುದರ್ಶನ ಪೇಂಟರ್, ಉಮೇಶ ಪೊದ್ದಾರ, ಮೌನೇಶ ಪೊದ್ದಾರ, ಬಾಳು ಗಿರಗಾಂವ್ಕರ, ಸಚಿನ ಗಿರಗಾಂವ್ಕರ, ಡಾ.ಜ್ಞಾನೇಶ್ವರ ಪಂಡಿತ, ವಿನಾಯಕ ವಿಜಾಪುರಕರ, ಶ್ರೀಕಾಂತ ಕುಂದನಗಾರ, ಈರಣ್ಣ ಪತ್ತಾರ, ವಿದ್ಯಾವತಿ ಅಂಕಲಗಿ ಉಪಸ್ಥಿತರಿದ್ದರು.</p>.<div><blockquote>ಎಲ್ಲಿಯವರೆಗೆ ಕೌಶಲ ಆಧಾರಿತ ವೃತ್ತಿಗಳು ಭೂಮಿಯ ಮೇಲೆ ಅಸ್ಥಿತ್ವದಲ್ಲಿರುತ್ತವೆಯೋ ಅಲ್ಲಿಯವರೆಗೆ ವಿಶ್ವಕರ್ಮರು ಅಜರಾಮರಾಗಿತ್ತಾರೆ </blockquote><span class="attribution"> -ಸಂಗಮೇಶ ಬಬಲೇಶ್ವರ ಅಧ್ಯಕ್ಷ ಬಾಲ ವಿಕಾಸ ಅಕಾಡೆಮಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>