<p><strong>ಸಿಂದಗಿ:</strong> ತಾಲ್ಲೂಕಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಶನಿವಾರ ಇಲ್ಲಿಯ ಪ್ರಜಾಸೌಧ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಒಬ್ಬ ವ್ಯಕ್ತಿಗೆ ಒಂದು ಮತ ಇರಬೇಕು. ಆದರೆ ವಲಸೆ ಹೋದವರು ಎರಡೆರಡು ಮತಗಳನ್ನು ಹೊಂದಿದ್ದಾರೆ. ಈ ಬಗ್ಗೆ ಮ್ಯಾಪಿಂಗ್ ಮಾಡಬೇಕಾದ ಬಿಎಲ್ಓ ಗಳು ಶಾಲೆ, ಮನೆಗಳಲ್ಲಿ ಕುಳಿತುಕೊಂಡು ಮಾಡುತ್ತಿದ್ದಾರೆ. ನಕಲಿ ಮತಗಳು, ಮೃತರಾದವರ ಹೆಸರುಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಈರಣ್ಣ ರಾವೂರ ಜಿಲ್ಲೆಯಲ್ಲಿ ಅಕ್ರಮ ಮತಗಳು, ನುಸುಳುಕೋರರ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. </p>.<p>ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಬಿಎಲ್ಓಗಳು ಮನೆ, ಮನೆಗೆ ಹೋಗಿ ಮತದಾರರ ಮ್ಯಾಪಿಂಗ್ ಮಾಡಬೇಕು. ಈ ಬಗ್ಗೆ ತಾಲ್ಲೂಕು ಆಡಳಿತ ಅವರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಬಿಜೆಪಿ ಪ್ರಮುಖ ಚಿದಾನಂದ ಚಲವಾದಿ, ಬಾಂಗ್ಲಾ ದೇಶವನ್ನೊಳಗೊಂಡು ಬೇರೆ ರಾಷ್ಟ್ರಗಳ ಜನರು ಜಿಲ್ಲೆಯಲ್ಲಿಯೂ ಸೇರಿಕೊಂಡಿದ್ದಾರೆ, ಅಂಥವರನ್ನು ಗುರುತಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನಕಾರರು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಬಿಜೆಪಿ ಪ್ರಮುಖರಾದ ಬಿ.ಎಚ್.ಬಿರಾದಾರ, ಗುರು ತಳವಾರ, ಪ್ರಶಾಂತ ಕದ್ದರಕಿ, ಮೂಲಿಮನಿ, ಸದಾಶಿವ ಕೋರಳ್ಳಿ, ಸಿದ್ರಾಮ ಆನಗೊಂಡ, ಅನುಸೂಯ ಪಾರಗೊಂಡ, ಜಗದೇವಿ ಬಿರಾದಾರ, ಶ್ಯಾಮಲಾ ಮಂದೇವಾಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>
<p><strong>ಸಿಂದಗಿ:</strong> ತಾಲ್ಲೂಕಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಶನಿವಾರ ಇಲ್ಲಿಯ ಪ್ರಜಾಸೌಧ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಒಬ್ಬ ವ್ಯಕ್ತಿಗೆ ಒಂದು ಮತ ಇರಬೇಕು. ಆದರೆ ವಲಸೆ ಹೋದವರು ಎರಡೆರಡು ಮತಗಳನ್ನು ಹೊಂದಿದ್ದಾರೆ. ಈ ಬಗ್ಗೆ ಮ್ಯಾಪಿಂಗ್ ಮಾಡಬೇಕಾದ ಬಿಎಲ್ಓ ಗಳು ಶಾಲೆ, ಮನೆಗಳಲ್ಲಿ ಕುಳಿತುಕೊಂಡು ಮಾಡುತ್ತಿದ್ದಾರೆ. ನಕಲಿ ಮತಗಳು, ಮೃತರಾದವರ ಹೆಸರುಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.</p>.<p>ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಈರಣ್ಣ ರಾವೂರ ಜಿಲ್ಲೆಯಲ್ಲಿ ಅಕ್ರಮ ಮತಗಳು, ನುಸುಳುಕೋರರ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. </p>.<p>ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಬಿಎಲ್ಓಗಳು ಮನೆ, ಮನೆಗೆ ಹೋಗಿ ಮತದಾರರ ಮ್ಯಾಪಿಂಗ್ ಮಾಡಬೇಕು. ಈ ಬಗ್ಗೆ ತಾಲ್ಲೂಕು ಆಡಳಿತ ಅವರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಬಿಜೆಪಿ ಪ್ರಮುಖ ಚಿದಾನಂದ ಚಲವಾದಿ, ಬಾಂಗ್ಲಾ ದೇಶವನ್ನೊಳಗೊಂಡು ಬೇರೆ ರಾಷ್ಟ್ರಗಳ ಜನರು ಜಿಲ್ಲೆಯಲ್ಲಿಯೂ ಸೇರಿಕೊಂಡಿದ್ದಾರೆ, ಅಂಥವರನ್ನು ಗುರುತಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನಕಾರರು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಬಿಜೆಪಿ ಪ್ರಮುಖರಾದ ಬಿ.ಎಚ್.ಬಿರಾದಾರ, ಗುರು ತಳವಾರ, ಪ್ರಶಾಂತ ಕದ್ದರಕಿ, ಮೂಲಿಮನಿ, ಸದಾಶಿವ ಕೋರಳ್ಳಿ, ಸಿದ್ರಾಮ ಆನಗೊಂಡ, ಅನುಸೂಯ ಪಾರಗೊಂಡ, ಜಗದೇವಿ ಬಿರಾದಾರ, ಶ್ಯಾಮಲಾ ಮಂದೇವಾಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>