<p><strong>ಆಲಮಟ್ಟಿ (ವಿಜಯಪುರ ಜಿಲ್ಲೆ):</strong> ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಂದ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಮಂಗಳವಾರ ಕೃಷ್ಣಾ ನದಿಗಿಳಿದು ಪ್ರತಿಭಟನೆ ನಡೆಸಿದರು.</p>.<p>ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರ ಅಣಕು ಶ್ರದ್ಧಾಂಜಲಿ ನಡೆಸಿದರು.</p>.<p>ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ‘ರಾಜ್ಯದ ರೈತರ ಮೇಲೆ ಕಳಕಳಿ ಇಲ್ಲದ ಸರ್ಕಾರ ತೆಲಂಗಾಣ ರಾಜ್ಯಕ್ಕೆ ನಿರಂತರ ನೀರು ಹರಿಸಿ ಆಲಮಟ್ಟಿ ಜಲಾಶಯದ ನೀರನ್ನು ಸಂಪೂರ್ಣ ಖಾಲಿ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>ತೆಲಂಗಾಣಕ್ಕೆ ಕೇವಲ 1.24 ಟಿಎಂಸಿ ಅಡಿ ನೀರು ಹರಿ ಬಿಟ್ಟಿದ್ದೇವೆ ಎಂದು ಸುಳ್ಳು ಹೇಳಿ 10 ಟಿಎಂಸಿ ಅಡಿಗೂ ಹೆಚ್ಚು ನೀರು ಹರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದರು.</p>.<p>‘ನಿತ್ಯ ಆಲಮಟ್ಟಿಯಿಂದ 12,500 ಕ್ಯುಸೆಕ್ ನಷ್ಟು ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿಸುವ ಉದ್ದೇಶ ಏನು? ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಗಳು ಇದನ್ನು ಪ್ರಶ್ನಿಸುತ್ತಿಲ್ಲ, ಪ್ರತಿಭಟಿಸುತ್ತಿಲ್ಲ. ಪ್ರತಿಪಕ್ಷದವರು ಸುಮ್ಮನಿರುವುದು ಜಿಲ್ಲೆಯ ದೌರ್ಬಾಗ್ಯ’ ಎಂದು ತಿಳಿಸಿದರು. </p>.<p>ಮುಖಂಡ ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಈರಪ್ಪ ಹಂಚನಾಳ, ಸೋಮು ಬಿರಾದಾರ, ಬಾಲಪ್ಪಗೌಡ ಲಿಂಗದಳ್ಳಿ ರಾಮನಗೌಡ ಹಾದಿಮನಿ ಮಲ್ಲಪ್ಪ ಪಡಸಲಗಿ, ಗಿರಿಮಲ್ಲಪ್ಪ ದೊಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ (ವಿಜಯಪುರ ಜಿಲ್ಲೆ):</strong> ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಂದ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಮಂಗಳವಾರ ಕೃಷ್ಣಾ ನದಿಗಿಳಿದು ಪ್ರತಿಭಟನೆ ನಡೆಸಿದರು.</p>.<p>ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರ ಅಣಕು ಶ್ರದ್ಧಾಂಜಲಿ ನಡೆಸಿದರು.</p>.<p>ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ‘ರಾಜ್ಯದ ರೈತರ ಮೇಲೆ ಕಳಕಳಿ ಇಲ್ಲದ ಸರ್ಕಾರ ತೆಲಂಗಾಣ ರಾಜ್ಯಕ್ಕೆ ನಿರಂತರ ನೀರು ಹರಿಸಿ ಆಲಮಟ್ಟಿ ಜಲಾಶಯದ ನೀರನ್ನು ಸಂಪೂರ್ಣ ಖಾಲಿ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>ತೆಲಂಗಾಣಕ್ಕೆ ಕೇವಲ 1.24 ಟಿಎಂಸಿ ಅಡಿ ನೀರು ಹರಿ ಬಿಟ್ಟಿದ್ದೇವೆ ಎಂದು ಸುಳ್ಳು ಹೇಳಿ 10 ಟಿಎಂಸಿ ಅಡಿಗೂ ಹೆಚ್ಚು ನೀರು ಹರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದರು.</p>.<p>‘ನಿತ್ಯ ಆಲಮಟ್ಟಿಯಿಂದ 12,500 ಕ್ಯುಸೆಕ್ ನಷ್ಟು ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿಸುವ ಉದ್ದೇಶ ಏನು? ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಗಳು ಇದನ್ನು ಪ್ರಶ್ನಿಸುತ್ತಿಲ್ಲ, ಪ್ರತಿಭಟಿಸುತ್ತಿಲ್ಲ. ಪ್ರತಿಪಕ್ಷದವರು ಸುಮ್ಮನಿರುವುದು ಜಿಲ್ಲೆಯ ದೌರ್ಬಾಗ್ಯ’ ಎಂದು ತಿಳಿಸಿದರು. </p>.<p>ಮುಖಂಡ ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಈರಪ್ಪ ಹಂಚನಾಳ, ಸೋಮು ಬಿರಾದಾರ, ಬಾಲಪ್ಪಗೌಡ ಲಿಂಗದಳ್ಳಿ ರಾಮನಗೌಡ ಹಾದಿಮನಿ ಮಲ್ಲಪ್ಪ ಪಡಸಲಗಿ, ಗಿರಿಮಲ್ಲಪ್ಪ ದೊಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>