ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ನೀರು ಸರಬರಾಜು ಮಂಡಳಿಯ ಎಂಜಿನಿಯರ್‌ ಎಸಿಬಿ ಬಲೆಗೆ

Last Updated 4 ಜನವರಿ 2022, 14:41 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಬಾಬು‌ ನದಾಫ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬಿದ್ದದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ಟೆಂಡರ್‌ ಪಡೆದು, ನಗರದಲ್ಲಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು, ಈ ಘಟಕಗಳಿಗೆ ಸಂಬಂಧಿಸಿದಂತೆ ₹ 25 ಲಕ್ಷ ಮೊತ್ತದ ಬಿಲ್‌ ಮಾಡಿಕೊಡಲು ಎಇಇ ನದಾಫ ₹ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ವಿಜಯಪುರ ಪುಲಕೇಶಿ ನಗರದ ಆರ್‌.ಓ ಪ್ಲಾಂಟ್‌ ಗುತ್ತಿಗೆದಾರ ಸುರೇಶ ಸಗರ ಎಂಬುವವರು ಎಸಿಬಿಗೆ ದೂರು ನೀಡಿದ್ದರು.

ಈ ಸಂಬಂಧ ಮಂಗಳವಾರ ಸಂಜೆ ಮಂಡಳಿಯ ಉಪ ವಿಭಾಗ ಕಚೇರಿಯಲ್ಲಿ ಗುತ್ತಿಗೆದಾರರಿಂದ ₹ 50 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಮಂಜುನಾಥ ಗಂಗಲ್, ಇನ್‌ಸ್ಪೆಕ್ಟರ್‌ ಪರಮೇಶ್ವರ ಹಾಗೂ ಚಂದ್ರಕಲಾ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT