<p><strong>ವಿಜಯಪುರ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಿಂದಶನಿವಾರ ಜನಜೀವನ ಸ್ತಬ್ಧವಾಗಿತ್ತು. ಭಾನುವಾರವೂ ಯಥಾ ರೀತಿ ಮುಂದುವರಿಯಲಿದೆ.</p>.<p>ನಾಲ್ಕೈದು ತಿಂಗಳಿಂದ ವಾರಂತ್ಯದ ರಜೆ ದಿನಗಳಲ್ಲಿ ನಗರದ ಪ್ರವಾಸಿ ತಾಣಗಳಿಗೆ ಮುತ್ತಿಕ್ಕುತ್ತಿದ್ದ ಪ್ರವಾಸಿಗರು ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಕಂಡುಬರಲಿಲ್ಲ. ವಿಶ್ವ ಪ್ರಸಿದ್ಧ ಗೋಳಗುಮ್ಮಟ, ಬಾರಾ ಕಮಾನ್, ಇಬ್ರಾಹಿಂರೋಜಾ, ಆಲಮಟ್ಟಿ ಜಲಾಶಯ, ಬಸವನ ಬಾಗೇವಾಡಿಯಲ್ಲಿರುವ ಬಸವಣ್ಣನ ಜನ್ಮ ಸ್ಥಳ ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದ್ದವು.</p>.<p>ಪ್ರಮುಖ ಹೆದ್ದಾರಿ, ರಸ್ತೆ, ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ತಡೆವೊಡ್ಡಿದ್ದರು. ಹೋಗಿ ಬರುವ ಬೈಕ್, ಕಾರು ಮತ್ತಿತರರ ವಾಹನಗಳನ್ನು ತಡೆದು, ವಿಚಾರಣೆ ಮಾಡಿದರು. ತುರ್ತು ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿದರು. ಅನಗತ್ಯವಾಗಿ ತಿರುಗಾಡುವ ಬೈಕ್, ಕಾರುಗಳನ್ನು ತಡೆದು ದಂಡ ವಿಧಿಸಿದರು.</p>.<p>ಕಿರಾಣಿ ಅಂಗಡಿಗಳು, ಹಾಲು, ಹಣ್ಣು, ತರಕಾರಿ, ಹೂವು, ಮೀನು, ಮಾಂಸದ ಅಂಗಡಿಗಳು ಎಂದಿನಂತೆ ಬಾಗಿಲು ತೆರೆದಿದ್ದವು. ಆದರೆ, ಗ್ರಾಹಕರ ಸಂಖ್ಯೆ ಕ್ಷೀಣವಾಗಿತ್ತು.</p>.<p>ನಗರ ಸಾರಿಗೆ ಬಸ್ಗಳು ಹಾಗೂ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ಬಸ್, ರೈಲುಗಳ ಸಂಚಾರಎಂದಿನಂತೆ ಇತ್ತಾದರೂ ಪ್ರಯಾಣಿಕರು ಸಂಖ್ಯೆ ಕಡಿಮೆ ಇತ್ತು. ಬಸ್ ನಿಲ್ದಾಣದಲ್ಲಿ ಸಾಕಷ್ಟು ಪ್ರಯಾಣಿಕರು ಕಂಡುಬಂದರು.</p>.<p>ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.ಕೋವಿಡ್ಗೆ ಅಂಜಿದ ಜನರು ದಿನಪೂರ್ತಿ ಮನೆಯಲ್ಲಿ ಕಳೆದರು. ಖಾಸಗಿ ಕಂಪನಿಗಳ ಕಚೇರಿಗಳು, ಆಸ್ಪತ್ರೆಗಳು, ಔಷಧ ಅಂಗಡಿಗಳು ಕಾರ್ಯನಿರ್ವಹಿಸಿದವು.</p>.<p>ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಅವಕಾಶ ಕಲ್ಪಿಸಲಾಗಿತ್ತು.ಹೋಟೆಲ್ಗಳು, ವಾಣಿಜ್ಯ ಮಳಿಗೆಗಳು, ಮಾಲ್ಗಳು, ಮದ್ಯದ ಅಂಗಡಿಗಳು ಬಾಗಿಲು ಬಂದ್ ಆಗಿದ್ದವು.</p>.<p>ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಜನರ ಪ್ರವೇಶಕ್ಕೆ ನಿರ್ಬಂಧವಿತ್ತು. ಬಹುತೇಕ ಕಡೆ ಭಕ್ತರ ದರ್ಶನಕ್ಕೆ, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರಲಿಲ್ಲ.</p>.<p>ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು, ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಎಂದಿನಂತೆ ನಡೆದವು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಯಾವುದೇ ಅಡಚಣೆಯಾಗಲಿಲ್ಲ.</p>.<p>ನಗರ ಮತ್ತು ಜಿಲ್ಲೆಯಲ್ಲಿಕೋವಿಡ್ ಸೋಂಕಿನ ಪ್ರಮಾಣ ಅಷ್ಟೊಂದು ಇಲ್ಲ. ಆದರೆ, ಎನ್ಟಿಪಿಸಿಯಲ್ಲಿ ಕೊರೊನಾ ಸೋಂಕು ಹೆಚ್ಚು ಜನರಲ್ಲಿ ಕಾಣಿಸಿಕೊಂಡಿದ್ದು, ನಿರ್ಬಂಧ ವಿಧಿಸಲಾಗಿದೆ.</p>.<p>ಜಿಲ್ಲೆಯ ಗಡಿ ಭಾಗದಲ್ಲಿ ಮಹಾರಾಷ್ಟ್ರದಿಂದ ಬರುವ, ಹೋಗುವ ವಾಹನಗಳು, ಪ್ರಯಾಣಿಕರನ್ನು ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ಮಾಡಿ ಬಿಡಲಾಗುತ್ತಿದೆ.</p>.<p class="Subhead"><strong>ನಿಯಮ ಉಲ್ಲಂಘನೆ:</strong>ಕೋವಿಡ್ ಮೂರನೇ ಅಲೆ ಆರಂಭವಾಗಿದ್ದರೂ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಜನರು ಮುಖಕ್ಕೆ ಮಾಸ್ಕ್ ತೊಡುವುದು, ಕೈಗಳಿಗೆ ಸ್ಯಾನಿಟೈಜ್ ಮಾಡುವುದು ಕಡಿಮೆಯಾಗಿದೆ. ಅಲ್ಲದೇ, ಮಾರುಕಟ್ಟೆ, ಅಂಗಡಿ, ಮಳಿಗೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಅಂತರವಿಲ್ಲದೇ ಜನರು ಗುಂಪು ಸೇರುವುದು ಸಾಮಾನ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಿಂದಶನಿವಾರ ಜನಜೀವನ ಸ್ತಬ್ಧವಾಗಿತ್ತು. ಭಾನುವಾರವೂ ಯಥಾ ರೀತಿ ಮುಂದುವರಿಯಲಿದೆ.</p>.<p>ನಾಲ್ಕೈದು ತಿಂಗಳಿಂದ ವಾರಂತ್ಯದ ರಜೆ ದಿನಗಳಲ್ಲಿ ನಗರದ ಪ್ರವಾಸಿ ತಾಣಗಳಿಗೆ ಮುತ್ತಿಕ್ಕುತ್ತಿದ್ದ ಪ್ರವಾಸಿಗರು ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಕಂಡುಬರಲಿಲ್ಲ. ವಿಶ್ವ ಪ್ರಸಿದ್ಧ ಗೋಳಗುಮ್ಮಟ, ಬಾರಾ ಕಮಾನ್, ಇಬ್ರಾಹಿಂರೋಜಾ, ಆಲಮಟ್ಟಿ ಜಲಾಶಯ, ಬಸವನ ಬಾಗೇವಾಡಿಯಲ್ಲಿರುವ ಬಸವಣ್ಣನ ಜನ್ಮ ಸ್ಥಳ ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದ್ದವು.</p>.<p>ಪ್ರಮುಖ ಹೆದ್ದಾರಿ, ರಸ್ತೆ, ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ತಡೆವೊಡ್ಡಿದ್ದರು. ಹೋಗಿ ಬರುವ ಬೈಕ್, ಕಾರು ಮತ್ತಿತರರ ವಾಹನಗಳನ್ನು ತಡೆದು, ವಿಚಾರಣೆ ಮಾಡಿದರು. ತುರ್ತು ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿದರು. ಅನಗತ್ಯವಾಗಿ ತಿರುಗಾಡುವ ಬೈಕ್, ಕಾರುಗಳನ್ನು ತಡೆದು ದಂಡ ವಿಧಿಸಿದರು.</p>.<p>ಕಿರಾಣಿ ಅಂಗಡಿಗಳು, ಹಾಲು, ಹಣ್ಣು, ತರಕಾರಿ, ಹೂವು, ಮೀನು, ಮಾಂಸದ ಅಂಗಡಿಗಳು ಎಂದಿನಂತೆ ಬಾಗಿಲು ತೆರೆದಿದ್ದವು. ಆದರೆ, ಗ್ರಾಹಕರ ಸಂಖ್ಯೆ ಕ್ಷೀಣವಾಗಿತ್ತು.</p>.<p>ನಗರ ಸಾರಿಗೆ ಬಸ್ಗಳು ಹಾಗೂ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ಬಸ್, ರೈಲುಗಳ ಸಂಚಾರಎಂದಿನಂತೆ ಇತ್ತಾದರೂ ಪ್ರಯಾಣಿಕರು ಸಂಖ್ಯೆ ಕಡಿಮೆ ಇತ್ತು. ಬಸ್ ನಿಲ್ದಾಣದಲ್ಲಿ ಸಾಕಷ್ಟು ಪ್ರಯಾಣಿಕರು ಕಂಡುಬಂದರು.</p>.<p>ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.ಕೋವಿಡ್ಗೆ ಅಂಜಿದ ಜನರು ದಿನಪೂರ್ತಿ ಮನೆಯಲ್ಲಿ ಕಳೆದರು. ಖಾಸಗಿ ಕಂಪನಿಗಳ ಕಚೇರಿಗಳು, ಆಸ್ಪತ್ರೆಗಳು, ಔಷಧ ಅಂಗಡಿಗಳು ಕಾರ್ಯನಿರ್ವಹಿಸಿದವು.</p>.<p>ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಅವಕಾಶ ಕಲ್ಪಿಸಲಾಗಿತ್ತು.ಹೋಟೆಲ್ಗಳು, ವಾಣಿಜ್ಯ ಮಳಿಗೆಗಳು, ಮಾಲ್ಗಳು, ಮದ್ಯದ ಅಂಗಡಿಗಳು ಬಾಗಿಲು ಬಂದ್ ಆಗಿದ್ದವು.</p>.<p>ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಜನರ ಪ್ರವೇಶಕ್ಕೆ ನಿರ್ಬಂಧವಿತ್ತು. ಬಹುತೇಕ ಕಡೆ ಭಕ್ತರ ದರ್ಶನಕ್ಕೆ, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರಲಿಲ್ಲ.</p>.<p>ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು, ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಎಂದಿನಂತೆ ನಡೆದವು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಯಾವುದೇ ಅಡಚಣೆಯಾಗಲಿಲ್ಲ.</p>.<p>ನಗರ ಮತ್ತು ಜಿಲ್ಲೆಯಲ್ಲಿಕೋವಿಡ್ ಸೋಂಕಿನ ಪ್ರಮಾಣ ಅಷ್ಟೊಂದು ಇಲ್ಲ. ಆದರೆ, ಎನ್ಟಿಪಿಸಿಯಲ್ಲಿ ಕೊರೊನಾ ಸೋಂಕು ಹೆಚ್ಚು ಜನರಲ್ಲಿ ಕಾಣಿಸಿಕೊಂಡಿದ್ದು, ನಿರ್ಬಂಧ ವಿಧಿಸಲಾಗಿದೆ.</p>.<p>ಜಿಲ್ಲೆಯ ಗಡಿ ಭಾಗದಲ್ಲಿ ಮಹಾರಾಷ್ಟ್ರದಿಂದ ಬರುವ, ಹೋಗುವ ವಾಹನಗಳು, ಪ್ರಯಾಣಿಕರನ್ನು ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ಮಾಡಿ ಬಿಡಲಾಗುತ್ತಿದೆ.</p>.<p class="Subhead"><strong>ನಿಯಮ ಉಲ್ಲಂಘನೆ:</strong>ಕೋವಿಡ್ ಮೂರನೇ ಅಲೆ ಆರಂಭವಾಗಿದ್ದರೂ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಜನರು ಮುಖಕ್ಕೆ ಮಾಸ್ಕ್ ತೊಡುವುದು, ಕೈಗಳಿಗೆ ಸ್ಯಾನಿಟೈಜ್ ಮಾಡುವುದು ಕಡಿಮೆಯಾಗಿದೆ. ಅಲ್ಲದೇ, ಮಾರುಕಟ್ಟೆ, ಅಂಗಡಿ, ಮಳಿಗೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಅಂತರವಿಲ್ಲದೇ ಜನರು ಗುಂಪು ಸೇರುವುದು ಸಾಮಾನ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>