<p><strong>ವಿಜಯಪುರ:</strong> ಕರ್ನಾಟಕ–ಮಹಾರಾಷ್ಟ್ರ ಅಂತರರಾಜ್ಯ ಗಡಿಗಳಲ್ಲಿ ಎಷ್ಟೇ ತಪಾಸಣೆ, ನಿರ್ಬಂಧಗಳನ್ನು ಮಾಡಿದರೂ ಸ್ಥಳೀಯ ಸಾರ್ವಜನಿಕರ ಸಹಕಾರ ಅತಿ ಮುಖ್ಯವಾಗಿದೆ. ಜನರ ಸಹಕಾರವಿಲ್ಲದೇ ಕೋವಿಡ್ ತಡೆ ಅಸಾಧ್ಯ ಎಂದು ಎಡಿಜಿಪಿ(ಸಿಐಡಿ) ಉಮೇಶ್ ಕುಮಾರ್ ಹೇಳಿದರು.</p>.<p>ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯಲ್ಲಿ ಡಿಸಿ, ಎಸ್ಪಿ, ಡಿಎಚ್ಒ ಅವರೊಂದಿಗೆ ಮಂಗಳವಾರ ರಾತ್ರಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರುಮಾತನಾಡಿದರು.</p>.<p>ಮಹಾರಾಷ್ಟ್ರದಿಂದ ಕದ್ದುಮುಚ್ಚಿ ರಾಜ್ಯಕ್ಕೆ ಬರುವವರ ಬಗ್ಗೆ ಗಡಿ ಗ್ರಾಮಗಳಲ್ಲಿ ಈಗಾಗಲೇ ರಚಿಸಲಾಗಿರುವ ವಿಲೇಜ್ ಟಾಸ್ಕ್ ಪೋರ್ಸ್ ಎಚ್ಚರ ವಹಿಸಬೇಕು ಎಂದು ತಿಳಿಸಿದರು.</p>.<p>ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ರಾಜ್ಯವನ್ನು ಪ್ರವೇಶಿಸುವ ಪ್ರಮುಖ ಮಾರ್ಗಗಳಲ್ಲಿ 11 ಚೆಕ್ಪೋಸ್ಟ್ಗಳನ್ನು ಈಗಾಗಲೇ ಆರಂಭಿಸಲಾಗಿದೆ. ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಹಿರಿಯ ಅಧಿಕಾರಿಗಳು ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.</p>.<p>ಮಹಾರಾಷ್ಟ್ರದಿಂದ ಬರುವ ಎಲ್ಲ ವಾಹನ, ಪ್ರಯಾಣಿಕರನ್ನು ಕಡ್ಡಾಯ ತಪಾಸಣೆ ಮಾಡಲಾಗುತ್ತಿದೆ. ಆರ್ಟಿಪಿಸಿಆರ್ ನೆಗೆಟಿವ್ ವರದಿ ಇರದಿದ್ದರೆ ವಾಪಸ್ ಕಳುಹಿಸಲಾಗುವುದು ಎಂದು ಹೇಳಿದರು.</p>.<p>ರೈಲಿನ ಮೂಲಕ ಬರುವವರ ತಪಾಸಣೆಗೂ ಕ್ರಮಕೈಗೊಳ್ಳಲಾಗುವುದು. ಈ ಬಗ್ಗೆ ಯಾವ ರೀತಿ ತಪಾಸಣೆ ಮಾಡಬೇಕು ಎಂಬುದರ ಬಗ್ಗೆ ಶೀಘ್ರ ಮಾರ್ಗಸೂಚಿ ರೂಪಿಸಲಾಗುವುದು ಎಂದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತವು ರಾಜ್ಯದ ಗಡಿ ಭಾಗದ ಹಳ್ಳಿಯ ಜನರಿಗೆ ಈಗಾಗಲೇ ಕೋವಿಡ್ ಲಸಿಕೆ ಎರಡು ಡೋಸ್ ನೀಡಿದೆ. ಜನರು ಅನವಶ್ಯಕವಾಗಿ ಹೆದರುವ ಅಗತ್ಯವಿಲ್ಲ. ಆದರೆ, ಅನಗತ್ಯವಾಗಿ ತಿರುಗಾಡಬಾರದು, ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ಕರ್ನಾಟಕ–ಮಹಾರಾಷ್ಟ್ರ ಗಡಿ ಚೆಕ್ಪೋಸ್ಟ್ ದೂಳಖೇಡಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ಮಾಡಿದರು.</p>.<p>ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಬಾಗಲಕೋಟೆ ಎಸ್ಪಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ ಇದ್ದರು.</p>.<p>***</p>.<p>ನಮ್ಮ ಮತ್ತು ನೆರೆಯ ರಾಜ್ಯಗಳ ನಡುವೆ ಇರುವುದು ಅಂತರರಾಷ್ಟ್ರೀಯ ಗಡಿಗಳಲ್ಲ. ಹೀಗಾಗಿ ಕದ್ದುಮುಚ್ಚಿ ಬರುವವರನ್ನು ಅಪರಾಧಿಗಳೆಂದು ಭಾವಿಸಲಾಗದು. ಆದರೆ,ಕೋವಿಡ್ ಹಿನ್ನೆಲೆಯಲ್ಲಿ ಎಚ್ಚರ ಅಗತ್ಯ.<br /><em><strong>–ಉಮೇಶ್ ಕುಮಾರ್ ,</strong></em><em><strong>ಎಡಿಜಿಪಿ(ಸಿಐಡಿ)</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕರ್ನಾಟಕ–ಮಹಾರಾಷ್ಟ್ರ ಅಂತರರಾಜ್ಯ ಗಡಿಗಳಲ್ಲಿ ಎಷ್ಟೇ ತಪಾಸಣೆ, ನಿರ್ಬಂಧಗಳನ್ನು ಮಾಡಿದರೂ ಸ್ಥಳೀಯ ಸಾರ್ವಜನಿಕರ ಸಹಕಾರ ಅತಿ ಮುಖ್ಯವಾಗಿದೆ. ಜನರ ಸಹಕಾರವಿಲ್ಲದೇ ಕೋವಿಡ್ ತಡೆ ಅಸಾಧ್ಯ ಎಂದು ಎಡಿಜಿಪಿ(ಸಿಐಡಿ) ಉಮೇಶ್ ಕುಮಾರ್ ಹೇಳಿದರು.</p>.<p>ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯಲ್ಲಿ ಡಿಸಿ, ಎಸ್ಪಿ, ಡಿಎಚ್ಒ ಅವರೊಂದಿಗೆ ಮಂಗಳವಾರ ರಾತ್ರಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರುಮಾತನಾಡಿದರು.</p>.<p>ಮಹಾರಾಷ್ಟ್ರದಿಂದ ಕದ್ದುಮುಚ್ಚಿ ರಾಜ್ಯಕ್ಕೆ ಬರುವವರ ಬಗ್ಗೆ ಗಡಿ ಗ್ರಾಮಗಳಲ್ಲಿ ಈಗಾಗಲೇ ರಚಿಸಲಾಗಿರುವ ವಿಲೇಜ್ ಟಾಸ್ಕ್ ಪೋರ್ಸ್ ಎಚ್ಚರ ವಹಿಸಬೇಕು ಎಂದು ತಿಳಿಸಿದರು.</p>.<p>ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ರಾಜ್ಯವನ್ನು ಪ್ರವೇಶಿಸುವ ಪ್ರಮುಖ ಮಾರ್ಗಗಳಲ್ಲಿ 11 ಚೆಕ್ಪೋಸ್ಟ್ಗಳನ್ನು ಈಗಾಗಲೇ ಆರಂಭಿಸಲಾಗಿದೆ. ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಹಿರಿಯ ಅಧಿಕಾರಿಗಳು ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.</p>.<p>ಮಹಾರಾಷ್ಟ್ರದಿಂದ ಬರುವ ಎಲ್ಲ ವಾಹನ, ಪ್ರಯಾಣಿಕರನ್ನು ಕಡ್ಡಾಯ ತಪಾಸಣೆ ಮಾಡಲಾಗುತ್ತಿದೆ. ಆರ್ಟಿಪಿಸಿಆರ್ ನೆಗೆಟಿವ್ ವರದಿ ಇರದಿದ್ದರೆ ವಾಪಸ್ ಕಳುಹಿಸಲಾಗುವುದು ಎಂದು ಹೇಳಿದರು.</p>.<p>ರೈಲಿನ ಮೂಲಕ ಬರುವವರ ತಪಾಸಣೆಗೂ ಕ್ರಮಕೈಗೊಳ್ಳಲಾಗುವುದು. ಈ ಬಗ್ಗೆ ಯಾವ ರೀತಿ ತಪಾಸಣೆ ಮಾಡಬೇಕು ಎಂಬುದರ ಬಗ್ಗೆ ಶೀಘ್ರ ಮಾರ್ಗಸೂಚಿ ರೂಪಿಸಲಾಗುವುದು ಎಂದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತವು ರಾಜ್ಯದ ಗಡಿ ಭಾಗದ ಹಳ್ಳಿಯ ಜನರಿಗೆ ಈಗಾಗಲೇ ಕೋವಿಡ್ ಲಸಿಕೆ ಎರಡು ಡೋಸ್ ನೀಡಿದೆ. ಜನರು ಅನವಶ್ಯಕವಾಗಿ ಹೆದರುವ ಅಗತ್ಯವಿಲ್ಲ. ಆದರೆ, ಅನಗತ್ಯವಾಗಿ ತಿರುಗಾಡಬಾರದು, ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ಕರ್ನಾಟಕ–ಮಹಾರಾಷ್ಟ್ರ ಗಡಿ ಚೆಕ್ಪೋಸ್ಟ್ ದೂಳಖೇಡಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ಮಾಡಿದರು.</p>.<p>ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಬಾಗಲಕೋಟೆ ಎಸ್ಪಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ ಇದ್ದರು.</p>.<p>***</p>.<p>ನಮ್ಮ ಮತ್ತು ನೆರೆಯ ರಾಜ್ಯಗಳ ನಡುವೆ ಇರುವುದು ಅಂತರರಾಷ್ಟ್ರೀಯ ಗಡಿಗಳಲ್ಲ. ಹೀಗಾಗಿ ಕದ್ದುಮುಚ್ಚಿ ಬರುವವರನ್ನು ಅಪರಾಧಿಗಳೆಂದು ಭಾವಿಸಲಾಗದು. ಆದರೆ,ಕೋವಿಡ್ ಹಿನ್ನೆಲೆಯಲ್ಲಿ ಎಚ್ಚರ ಅಗತ್ಯ.<br /><em><strong>–ಉಮೇಶ್ ಕುಮಾರ್ ,</strong></em><em><strong>ಎಡಿಜಿಪಿ(ಸಿಐಡಿ)</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>