ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ ಗ್ರಾಮದ ತೋಟದ ವಸ್ತಿಯಲ್ಲಿ ಸೋಮವಾರ ರಾತ್ರಿ ಸಿಡಿಲು ಬಡೆದು ಮಹಾದೇವಿ ನಿಂಬರಗಿ (50) ಎಂಬ ಮಹಿಳೆ ಸಾವಿಗೀಡಾಗಿದ್ದಾರೆ. ಜೊತೆಗೆ ಒಂದು ಎಮ್ಮೆ ಕೂಡ ಸಿಡಿಲಿನಿಂದ ಸಾವಿಗೀಡಾಗಿದೆ.
ಸೋಮವಾರ ತಡ ರಾತ್ರಿ ಬಿರುಸಿನ ಗಾಳಿ, ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.