<p><strong>ಇಂಡಿ:</strong> ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಸಬಲೀಕರಣಕ್ಕೆ ಜ್ಞಾನ ವಿಕಾಸ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ’ ಎಂದು ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.</p>.<p>ತಾಲ್ಲೂಕಿನ ಹಿರೇರೂಗಿ ಗ್ರಾಮದ ಶ್ರೀ ಜಟ್ಟಿಂಗೇಶ್ವರ ದೇವಾಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು. ಮಹಿಳೆಯರು ಶಿಕ್ಷಣವಂತರಾದರೆ ಮಾತ್ರ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಲು ಸಾಧ್ಯ. ಲಿಂಗ ಪತ್ತೆ, ಬಾಲ್ಯವಿವಾಹ ಮಾಡುವುದು ಅಪರಾಧ’ ಎಂದರು.</p>.<p>ಧರ್ಮಸ್ಥಳದ ಯೋಜನಾಧಿಕಾರಿ ನಟರಾಜ ಎಲ್. ಎಂ. ಮಾತನಾಡಿ, ‘ಗ್ರಾಮೀಣ ಭಾಗದ ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ಪೌಷ್ಠಿಕ ಅಹಾರ, ಕಾನೂನು ಅರಿವು, ಕೌಟುಂಬಿಕ ಸಾಮರಸ್ಯ ಅರಿವು ಮೂಡಿಸುವ ಜತೆಗೆ ಅಧ್ಯಯನ ಪ್ರವಾಸದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.</p>.<p>ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಭಾಗ್ಯಜ್ಯೋತಿ ಭಗವಂತಗೌಡರ ಮಾತನಾಡಿದರು.</p>.<p>ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋಮವ್ವ ಹೊಸಮನಿ, ವಕೀಲ ಜೆ.ಬಿ.ಬೇವನೂರ, ಜಯಶ್ರೀ ಎಸ್.ಎಂ, ಮೇಲ್ವಿಚಾರಕಿಯರಾದ ಅಶ್ವಿನಿ ಹಾಗೂ ಚನ್ನವೀರ ಮತ್ತು ಸೇವಾ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಸಬಲೀಕರಣಕ್ಕೆ ಜ್ಞಾನ ವಿಕಾಸ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ’ ಎಂದು ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.</p>.<p>ತಾಲ್ಲೂಕಿನ ಹಿರೇರೂಗಿ ಗ್ರಾಮದ ಶ್ರೀ ಜಟ್ಟಿಂಗೇಶ್ವರ ದೇವಾಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು. ಮಹಿಳೆಯರು ಶಿಕ್ಷಣವಂತರಾದರೆ ಮಾತ್ರ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಲು ಸಾಧ್ಯ. ಲಿಂಗ ಪತ್ತೆ, ಬಾಲ್ಯವಿವಾಹ ಮಾಡುವುದು ಅಪರಾಧ’ ಎಂದರು.</p>.<p>ಧರ್ಮಸ್ಥಳದ ಯೋಜನಾಧಿಕಾರಿ ನಟರಾಜ ಎಲ್. ಎಂ. ಮಾತನಾಡಿ, ‘ಗ್ರಾಮೀಣ ಭಾಗದ ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ಪೌಷ್ಠಿಕ ಅಹಾರ, ಕಾನೂನು ಅರಿವು, ಕೌಟುಂಬಿಕ ಸಾಮರಸ್ಯ ಅರಿವು ಮೂಡಿಸುವ ಜತೆಗೆ ಅಧ್ಯಯನ ಪ್ರವಾಸದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.</p>.<p>ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಭಾಗ್ಯಜ್ಯೋತಿ ಭಗವಂತಗೌಡರ ಮಾತನಾಡಿದರು.</p>.<p>ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋಮವ್ವ ಹೊಸಮನಿ, ವಕೀಲ ಜೆ.ಬಿ.ಬೇವನೂರ, ಜಯಶ್ರೀ ಎಸ್.ಎಂ, ಮೇಲ್ವಿಚಾರಕಿಯರಾದ ಅಶ್ವಿನಿ ಹಾಗೂ ಚನ್ನವೀರ ಮತ್ತು ಸೇವಾ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>