<p><strong>ಕೊಲ್ಹಾರ:</strong> ಭಾರತದ ಕೃಷಿ ಕ್ಷೇತ್ರದಲ್ಲಿ ಮೊದಲಿನಿಂದಲೂ ಮಹಿಳೆ ಪ್ರಧಾನ ಪಾತ್ರ ವಹಿಸುತ್ತಾಳೆ ಎಂದು ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಹೇಳಿದರು.</p>.<p>ಪಟ್ಟಣದ ಶ್ರೀ ಪಟ್ಟದೇವರು ಹಿರೇಮಠ ಸಹಯೋಗದಲ್ಲಿ ಬುಧವಾರ ಆಯೋಜಿಸಲಾಗಿದ್ದ ಮಾತೃ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಮಹಿಳೆ ಕೃಷಿ ಪ್ರಧಾನಳು, ಕೃಷಿ ಕ್ಷೇತ್ರದಲ್ಲಿ ಮಹಿಳೆ ಬೆಳಿಗ್ಗೆಯಿಂದ ರಾತ್ರಿವರೆಗೂ ಕೆಲಸ ಮಾಡಿ, ತನ್ನ ಕುಟುಂಬವನ್ನು ಸಲಹುತ್ತಿದ್ದಾಳೆ ಎಂದರು.</p>.<p>ಕೃಷಿ ಕಾಯಕದ ಜೊತೆ ನಮ್ಮ ದೇಶದ ಸಂಸ್ಕೃತಿ ಬೆಳೆಸಿ, ಉತ್ತಮ ಕೃಷಿಕ ಸಮಾಜದ ನಿರ್ಮಾಣಕ್ಕೆ ಪ್ರಯತ್ನ ಮಾಡೋಣ, ಸುಸಂಸ್ಕೃತ ಭಾರತ ನಿರ್ಮಾಣ ನಮ್ಮ ಕೈಯಲ್ಲಿ ಇದೆ ಎಂದು ಹೇಳಿದರು.</p>.<p>ಮಾತೃ ಸಮಾವೇಶದಲ್ಲಿ 11001 ಮುತ್ತೈದೆಯರಿಗೆ ಉಡಿ ತುಂಬಲಾಯಿತು. ಸಂಗೀತ ಸಂಜೆ, ಜಾನಪದ ಜಾದೂ ರಸಮಂಜರಿ ನಡೆಯಿತು.</p>.<p>ಮಾತೃ ಸಮಾವೇಶವನ್ನು ಭಾಗ್ಯಶ್ರೀ ಶಿವಾನಂದ ಪಾಟೀಲ ಉದ್ಘಾಟಿಸಿದರು ಚನ್ನಬಸವ ಸ್ವಾಮೀಜಿ, ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಸಿದ್ದರಾಮ ಸ್ವಾಮೀಜಿ, ಕಾವ್ಯ ಕಲ್ಲಪ್ಪ ದೇಸಾಯಿ, ಶಾಂತಾಬಾಯಿ ನಾಗರಾಳ, ಡಾ.ಜೀವನ್ ಸಾಬ್ ವಾಲಿಕಾರ, ಮಹಾಂತೇಶ ಹಡಪದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ:</strong> ಭಾರತದ ಕೃಷಿ ಕ್ಷೇತ್ರದಲ್ಲಿ ಮೊದಲಿನಿಂದಲೂ ಮಹಿಳೆ ಪ್ರಧಾನ ಪಾತ್ರ ವಹಿಸುತ್ತಾಳೆ ಎಂದು ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಹೇಳಿದರು.</p>.<p>ಪಟ್ಟಣದ ಶ್ರೀ ಪಟ್ಟದೇವರು ಹಿರೇಮಠ ಸಹಯೋಗದಲ್ಲಿ ಬುಧವಾರ ಆಯೋಜಿಸಲಾಗಿದ್ದ ಮಾತೃ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಮಹಿಳೆ ಕೃಷಿ ಪ್ರಧಾನಳು, ಕೃಷಿ ಕ್ಷೇತ್ರದಲ್ಲಿ ಮಹಿಳೆ ಬೆಳಿಗ್ಗೆಯಿಂದ ರಾತ್ರಿವರೆಗೂ ಕೆಲಸ ಮಾಡಿ, ತನ್ನ ಕುಟುಂಬವನ್ನು ಸಲಹುತ್ತಿದ್ದಾಳೆ ಎಂದರು.</p>.<p>ಕೃಷಿ ಕಾಯಕದ ಜೊತೆ ನಮ್ಮ ದೇಶದ ಸಂಸ್ಕೃತಿ ಬೆಳೆಸಿ, ಉತ್ತಮ ಕೃಷಿಕ ಸಮಾಜದ ನಿರ್ಮಾಣಕ್ಕೆ ಪ್ರಯತ್ನ ಮಾಡೋಣ, ಸುಸಂಸ್ಕೃತ ಭಾರತ ನಿರ್ಮಾಣ ನಮ್ಮ ಕೈಯಲ್ಲಿ ಇದೆ ಎಂದು ಹೇಳಿದರು.</p>.<p>ಮಾತೃ ಸಮಾವೇಶದಲ್ಲಿ 11001 ಮುತ್ತೈದೆಯರಿಗೆ ಉಡಿ ತುಂಬಲಾಯಿತು. ಸಂಗೀತ ಸಂಜೆ, ಜಾನಪದ ಜಾದೂ ರಸಮಂಜರಿ ನಡೆಯಿತು.</p>.<p>ಮಾತೃ ಸಮಾವೇಶವನ್ನು ಭಾಗ್ಯಶ್ರೀ ಶಿವಾನಂದ ಪಾಟೀಲ ಉದ್ಘಾಟಿಸಿದರು ಚನ್ನಬಸವ ಸ್ವಾಮೀಜಿ, ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಸಿದ್ದರಾಮ ಸ್ವಾಮೀಜಿ, ಕಾವ್ಯ ಕಲ್ಲಪ್ಪ ದೇಸಾಯಿ, ಶಾಂತಾಬಾಯಿ ನಾಗರಾಳ, ಡಾ.ಜೀವನ್ ಸಾಬ್ ವಾಲಿಕಾರ, ಮಹಾಂತೇಶ ಹಡಪದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>