<p><strong>ವಿಜಯಪುರ:</strong> ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಿಂದಿನ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಅವರ ಅವಧಿಯಲ್ಲಿ, 2024ರಲ್ಲಿ ನಿಯಮಬಾಹಿರವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದ್ದ 53 ಬೋಧಕೇತರ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. </p>.<p>‘ನೇಮಕದಲ್ಲಿ ಅಕ್ರಮ ಕುರಿತ ದೂರುಗಳ ಹಿನ್ನೆಲೆಯಲ್ಲಿ ಪ್ರಾಧ್ಯಾಪಕ ರಾಜಕುಮಾರ ಮಾಲೀಪಾಟೀಲ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ಆಧರಿಸಿ ಸಿಂಡಿಕೇಟ್ ನಿರ್ಣಯದಂತೆ ವಜಾ ಮಾಡಲಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನೇಮಕಾತಿಗೆ ಸರ್ಕಾರ, ವಿಶ್ವವಿದ್ಯಾಲಯದ ಹಣಕಾಸು ಸಮಿತಿ ಅನುಮತಿ ಪಡೆದಿರಲಿಲ್ಲ. ಯಾವುದೇ ಪ್ರಕಟಣೆ (ನೋಟಿಫಿಕೇಶನ್) ಹೊರಡಿಸಿರಲಿಲ್ಲ. ಸಿಂಡಿಕೇಟ್ ಸಭೆ ಅನುಮೋದನೆ ಪಡೆದಿರಲಿಲ್ಲ. ಮೀಸಲಾತಿ ನಿಯಮ (ರೋಸ್ಟರ್) ಅನುಸರಿಸಿರಲಿಲ್ಲ’ ಎಂದು ಅವರು ತಿಳಿಸಿದರು.</p>.<p><strong>ಹಣ ಪಡೆದಿರುವ ಆರೋಪ:</strong></p>.<p>‘ಬೋಧಕೇತರ ಸಿಬ್ಬಂದಿ ನೇಮಕದಲ್ಲಿ ಹಣಕಾಸು ವ್ಯವಹಾರವಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ತನಿಖೆಯಾಗಲಿ. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ’ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಮಲ್ಲಮ್ಮ ಯಾಳವಾರ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಿಂದಿನ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಅವರ ಅವಧಿಯಲ್ಲಿ, 2024ರಲ್ಲಿ ನಿಯಮಬಾಹಿರವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದ್ದ 53 ಬೋಧಕೇತರ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. </p>.<p>‘ನೇಮಕದಲ್ಲಿ ಅಕ್ರಮ ಕುರಿತ ದೂರುಗಳ ಹಿನ್ನೆಲೆಯಲ್ಲಿ ಪ್ರಾಧ್ಯಾಪಕ ರಾಜಕುಮಾರ ಮಾಲೀಪಾಟೀಲ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ಆಧರಿಸಿ ಸಿಂಡಿಕೇಟ್ ನಿರ್ಣಯದಂತೆ ವಜಾ ಮಾಡಲಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನೇಮಕಾತಿಗೆ ಸರ್ಕಾರ, ವಿಶ್ವವಿದ್ಯಾಲಯದ ಹಣಕಾಸು ಸಮಿತಿ ಅನುಮತಿ ಪಡೆದಿರಲಿಲ್ಲ. ಯಾವುದೇ ಪ್ರಕಟಣೆ (ನೋಟಿಫಿಕೇಶನ್) ಹೊರಡಿಸಿರಲಿಲ್ಲ. ಸಿಂಡಿಕೇಟ್ ಸಭೆ ಅನುಮೋದನೆ ಪಡೆದಿರಲಿಲ್ಲ. ಮೀಸಲಾತಿ ನಿಯಮ (ರೋಸ್ಟರ್) ಅನುಸರಿಸಿರಲಿಲ್ಲ’ ಎಂದು ಅವರು ತಿಳಿಸಿದರು.</p>.<p><strong>ಹಣ ಪಡೆದಿರುವ ಆರೋಪ:</strong></p>.<p>‘ಬೋಧಕೇತರ ಸಿಬ್ಬಂದಿ ನೇಮಕದಲ್ಲಿ ಹಣಕಾಸು ವ್ಯವಹಾರವಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ತನಿಖೆಯಾಗಲಿ. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ’ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಮಲ್ಲಮ್ಮ ಯಾಳವಾರ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>