ವಿಜಯಪುರ: ಆಮ್ ಆದ್ಮಿ ಪಾರ್ಟಿಯಿಂದ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸಿದ್ಧತೆ ನಡೆಯಿತು.
ಆಮ್ ಆದ್ಮಿ ಪಕ್ಷದ ವಿಜಯಪುರ ನಗರ ಕ್ಷೇತ್ರದ ಆಕಾಂಕ್ಷಿ ಡಾ.ಬಿ.ಎಂ.ಬಿರಾದಾರ ಮಾತನಾಡಿ, ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷದ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆ ಜೊತೆಗೆ ಜನರನ್ನು ಪಕ್ಷದತ್ತ ಸೆಳೆಯಲು ಆದ್ಯತೆ ನೀಡಬೇಕು ಎಂದರು.
ದೆಹಲಿ, ಪಂಜಾಬ್ನಲ್ಲಿ ಎಎಪಿ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳು ಹಾಗೂ ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ನಮ್ಮ ಮತದಾರರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.
ಜನಜಾಗೃತಿಗಾಗಿ ರೋಡ್ ಶೋ, ಬೀದಿ ಸಭೆ, ಬಹಿರಂಗ ಸಮಾವೇಶ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಅವರು ಸೂಚಿಸಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೋಗೇಶ್ ಸೋಲಾಪುರ, ಎಲ್ಲ ಪಕ್ಷಗಳು ನಮ್ಮ ರಾಜ್ಯದ ಯುವಕರನ್ನು ದಾರಿ ತಪ್ಪಿಸುತ್ತಿವೆ. ಇಂದು ಯುವಕರು ಜಾಗರುಕರಾಗಬೇಕು ಎಂದು ಹೇಳಿದರು.