<p><strong>ಮುದ್ದೇಬಿಹಾಳ(ವಿಜಯಪುರ):</strong> ನಿರ್ಮಾಣ ಹಂತದಲ್ಲಿರುವ ಕೆಪಿಟಿಸಿಎಲ್ ವಿದ್ಯುತ್ ಕೇಂದ್ರದ ಆವರಣ ಗೋಡೆ(ಕಾಂಪೌಂಡ್) ಕುಸಿದಿದ್ದರಿಂದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಜಟ್ಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ.</p><p>ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕು ಕನ್ನಿಹಳ್ಳಿಯ ಬಸವಲಿಂಗಯ್ಯ ಕೊಟ್ರಯ್ಯ ಹಿರೇಮಠ(38) ಸಾವನ್ನಪ್ಪಿದ್ದ ಕಾರ್ಮಿಕ. ವೆಲ್ಡಿಂಗ್ ಹಾಕುವ ಕೆಲಸಕ್ಕಾಗಿ ಬಸವಲಿಂಗಯ್ಯ ಬಂದಿದ್ದರು. ಕಾಮಗಾರಿ ಪ್ರಗತಿಯಲ್ಲಿರುವಾಗಲೇ ದೊಡ್ಡ ಗಾತ್ರದ ಕಲ್ಲುಗಳು ಉರುಳಿವೆ.</p><p>ಬೆಂಗಳೂರಿನ ಕುಮಾರ ಎಲೆಕ್ಟ್ರಿಕಲ್ ಕಂಪನಿಯು ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದೆ. ಗೋಡೆ ಕುಸಿತಕ್ಕೆ ಕಳಪೆ ಕಾಮಗಾರಿ ಕಾರಣ ಎಂದು ಆರೋಪಿಸಲಾಗಿದೆ.</p><p>ಘಟನಾ ಸ್ಥಳಕ್ಕೆ ಪಿಎಸ್ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಎಎಸ್ಐ ಎಸ್.ಎನ್.ನಾಯ್ಕ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p><p>ಸ್ಥಳೀಯರ ಆಕ್ರೋಶ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ಕೊಡುವ ಬಗ್ಗೆಯಾಗಲೀ, ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರನ ಮೇಲಾಗಲೀ ಕ್ರಮ ಕೈಗೊಳ್ಳುವ ಮಾತು ಆಡುತ್ತಿಲ್ಲ ಎಂದು ನೆರೆದಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ(ವಿಜಯಪುರ):</strong> ನಿರ್ಮಾಣ ಹಂತದಲ್ಲಿರುವ ಕೆಪಿಟಿಸಿಎಲ್ ವಿದ್ಯುತ್ ಕೇಂದ್ರದ ಆವರಣ ಗೋಡೆ(ಕಾಂಪೌಂಡ್) ಕುಸಿದಿದ್ದರಿಂದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಜಟ್ಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ.</p><p>ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕು ಕನ್ನಿಹಳ್ಳಿಯ ಬಸವಲಿಂಗಯ್ಯ ಕೊಟ್ರಯ್ಯ ಹಿರೇಮಠ(38) ಸಾವನ್ನಪ್ಪಿದ್ದ ಕಾರ್ಮಿಕ. ವೆಲ್ಡಿಂಗ್ ಹಾಕುವ ಕೆಲಸಕ್ಕಾಗಿ ಬಸವಲಿಂಗಯ್ಯ ಬಂದಿದ್ದರು. ಕಾಮಗಾರಿ ಪ್ರಗತಿಯಲ್ಲಿರುವಾಗಲೇ ದೊಡ್ಡ ಗಾತ್ರದ ಕಲ್ಲುಗಳು ಉರುಳಿವೆ.</p><p>ಬೆಂಗಳೂರಿನ ಕುಮಾರ ಎಲೆಕ್ಟ್ರಿಕಲ್ ಕಂಪನಿಯು ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದೆ. ಗೋಡೆ ಕುಸಿತಕ್ಕೆ ಕಳಪೆ ಕಾಮಗಾರಿ ಕಾರಣ ಎಂದು ಆರೋಪಿಸಲಾಗಿದೆ.</p><p>ಘಟನಾ ಸ್ಥಳಕ್ಕೆ ಪಿಎಸ್ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಎಎಸ್ಐ ಎಸ್.ಎನ್.ನಾಯ್ಕ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p><p>ಸ್ಥಳೀಯರ ಆಕ್ರೋಶ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ಕೊಡುವ ಬಗ್ಗೆಯಾಗಲೀ, ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರನ ಮೇಲಾಗಲೀ ಕ್ರಮ ಕೈಗೊಳ್ಳುವ ಮಾತು ಆಡುತ್ತಿಲ್ಲ ಎಂದು ನೆರೆದಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>