<p><strong>ವಿಜಯಪುರ:</strong> ಡಿ.ಆರ್.ಮಮದಾಪುರ ಪರಿವಾರದಿಂದ ಮಹಾನಗರ ಪಾಲಿಕೆಯ 500 ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸೆಪ್ಟೆಂಬರ್ 13ರಂದು ಮುಕುಂದ ನಗರದಲ್ಲಿರುವ ಭಾರತೀಯ ಜೀವ ವಿಮಾ ನಿಗಮದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಲ್ಐಜಿ ಪ್ರತಿನಿಧಿ ಡಿ.ಆರ್.ಮಮದಾಪುರ, ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ನಗರದ ಸ್ವಚ್ಛತೆ ಮಾಡುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಾಣದಲ್ಲಿ ಪೌರಕಾರ್ಮಿಕರ ಪಾತ್ರ ಮುಖ್ಯವಾಗಿರುವುದರಿಂದ ಅವರಿಗೆ ಪರಿವಾರದಿಂದ ಸನ್ಮಾನಿಸಲಾಗುವುದು ಎಂದರು.</p>.<p>ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಕುಪ್ಪಸ ಹಾಗೂ ಪುರುಷ ಪೌರಕಾರ್ಮಿಕರಿಗೆ ಪ್ಯಾಂಟ್, ಶರ್ಟ್ ನೀಡಿ ಹಾಗೂ ಗಡಿಯಾರ, ಶಾಲು, ಹಾರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ಎಲ್ಐಜಿ ಬೆಳಗಾವಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಅಜಿತ್ ದಾಮೋದರ ವಾರಕರಿ, ಮಾರುಕಟ್ಟೆ ಪ್ರಬಂಧಕ ಎ.ಆರ್.ಗಡಕರ, ಎಲ್ಐಸಿ ವಿಜಯಪುರ ಮುಖ್ಯ ಪ್ರಬಂಧಕ ಎಲ್.ಎಸ್.ಸುನೀಲ ಪ್ರಕಾಶ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.</p>.<p>ಡಾ.ಪ್ರಭು ಮಮದಾಪುರ, ಬಸವರಾಜ ಆಲೂರು, ಎಲ್ಐಸಿ ಅಭಿವೃದ್ಧಿ ಅಧಿಕಾರಿ ಎಸ್.ಎಂ.ಪವಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಡಿ.ಆರ್.ಮಮದಾಪುರ ಪರಿವಾರದಿಂದ ಮಹಾನಗರ ಪಾಲಿಕೆಯ 500 ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸೆಪ್ಟೆಂಬರ್ 13ರಂದು ಮುಕುಂದ ನಗರದಲ್ಲಿರುವ ಭಾರತೀಯ ಜೀವ ವಿಮಾ ನಿಗಮದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಲ್ಐಜಿ ಪ್ರತಿನಿಧಿ ಡಿ.ಆರ್.ಮಮದಾಪುರ, ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ನಗರದ ಸ್ವಚ್ಛತೆ ಮಾಡುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಾಣದಲ್ಲಿ ಪೌರಕಾರ್ಮಿಕರ ಪಾತ್ರ ಮುಖ್ಯವಾಗಿರುವುದರಿಂದ ಅವರಿಗೆ ಪರಿವಾರದಿಂದ ಸನ್ಮಾನಿಸಲಾಗುವುದು ಎಂದರು.</p>.<p>ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಕುಪ್ಪಸ ಹಾಗೂ ಪುರುಷ ಪೌರಕಾರ್ಮಿಕರಿಗೆ ಪ್ಯಾಂಟ್, ಶರ್ಟ್ ನೀಡಿ ಹಾಗೂ ಗಡಿಯಾರ, ಶಾಲು, ಹಾರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ಎಲ್ಐಜಿ ಬೆಳಗಾವಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಅಜಿತ್ ದಾಮೋದರ ವಾರಕರಿ, ಮಾರುಕಟ್ಟೆ ಪ್ರಬಂಧಕ ಎ.ಆರ್.ಗಡಕರ, ಎಲ್ಐಸಿ ವಿಜಯಪುರ ಮುಖ್ಯ ಪ್ರಬಂಧಕ ಎಲ್.ಎಸ್.ಸುನೀಲ ಪ್ರಕಾಶ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.</p>.<p>ಡಾ.ಪ್ರಭು ಮಮದಾಪುರ, ಬಸವರಾಜ ಆಲೂರು, ಎಲ್ಐಸಿ ಅಭಿವೃದ್ಧಿ ಅಧಿಕಾರಿ ಎಸ್.ಎಂ.ಪವಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>