<p><strong>ಸಿಂದಗಿ</strong>: ಪಟ್ಟಣದ ವಿಜಯಪುರ ರಸ್ತೆಯಲ್ಲಿನ ಹೊನ್ನಪ್ಪಗೌಡ ಬಡಾವಣೆಯಲ್ಲಿ 2 ಎಕರೆ 36 ಗುಂಟೆ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಟ್ರೀ ಕಾರ್ಕ್ ಯೋಜನೆಯಡಿ ₹ 1 ಕೋಟಿ ಅನುದಾನದಡಿ ಸಾಲು ಮರದ ತಿಮ್ಮಕ್ಕನವರ ವೃಕ್ಷೊದ್ಯಾನ ನಿರ್ಮಾಣಕ್ಕೆ ಶಾಸಕ ಅಶೋಕ ಮನಗೂಳಿ ಮುಂದಾಗಿದ್ದಾರೆ. ಈಗಾಗಲೇ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ.</p><p>ಈ ಉದ್ಯಾನದಲ್ಲಿ ವಾಯು ವಿಹಾರ ಮಾಡುವ ವ್ಯವಸ್ಥೆ ಇದೆ. ಯೋಗ ವೇದಿಕೆ ಇದೆ. ಮಕ್ಕಳಿಗೆ ಆಟವಾಡಲು ಆಟಿಕೆಗಳನ್ನು ಅಳವಡಿಸಲಾಗಿದೆ. ವಿಶ್ರಾಂತಿ ಪಡೆಯಲು ಆಸನಗಳಿವೆ. ಜಿಮ್ ವ್ಯವಸ್ಥೆಯೂ ಇದೆ. ಪರಗೋಲಗಳಿವೆ.</p><p>ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಕುಡಿಯುವ ನೀರಿನ ಆರ್ ಒ ಪ್ಲಾಂಟ್ ಇದೆ. ಶೌಚಾಲಯ ವ್ಯವಸ್ಥೆಯೂ ಮಾಡಲಾಗಿದೆ. ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ಉದ್ಯಾನ ತೆರೆದಿರುತ್ತದೆ ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಾಜೀವ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಸಿಂದಗಿಯಲ್ಲೊಂದು ಸುಸಜ್ಜಿತ ಉದ್ಯಾನ ನಿರ್ಮಾಣಗೊಂಡಿರುವುದು ಸಂತಸ ತರಿಸಿದೆ. ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.</p>.<div><blockquote>ಶಾಸಕ ಮನಗೂಳಿಯವರು ಪ್ರಾದೇಶಿಕ ಅರಣ್ಯ ಇಲಾಖೆಯ ಟ್ರೀ ಪಾರ್ಕ್ ಯೋಜನೆಯಡಿ ₹ 1 ಕೋಟಿ ಅನುದಾನ ಮಂಜೂರುಗೊಳಿಸಿದ್ದು ಸುಂದರವಾದ ವೃಕ್ಷೊದ್ಯಾನ ನಿರ್ಮಾಣಗೊಳ್ಳಲು ಸಾಧ್ಯವಾಗಿದೆ.</blockquote><span class="attribution">– ರಾಜೀವ್ ಬಿರಾದಾರ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಸಿಂದಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ಪಟ್ಟಣದ ವಿಜಯಪುರ ರಸ್ತೆಯಲ್ಲಿನ ಹೊನ್ನಪ್ಪಗೌಡ ಬಡಾವಣೆಯಲ್ಲಿ 2 ಎಕರೆ 36 ಗುಂಟೆ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಟ್ರೀ ಕಾರ್ಕ್ ಯೋಜನೆಯಡಿ ₹ 1 ಕೋಟಿ ಅನುದಾನದಡಿ ಸಾಲು ಮರದ ತಿಮ್ಮಕ್ಕನವರ ವೃಕ್ಷೊದ್ಯಾನ ನಿರ್ಮಾಣಕ್ಕೆ ಶಾಸಕ ಅಶೋಕ ಮನಗೂಳಿ ಮುಂದಾಗಿದ್ದಾರೆ. ಈಗಾಗಲೇ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ.</p><p>ಈ ಉದ್ಯಾನದಲ್ಲಿ ವಾಯು ವಿಹಾರ ಮಾಡುವ ವ್ಯವಸ್ಥೆ ಇದೆ. ಯೋಗ ವೇದಿಕೆ ಇದೆ. ಮಕ್ಕಳಿಗೆ ಆಟವಾಡಲು ಆಟಿಕೆಗಳನ್ನು ಅಳವಡಿಸಲಾಗಿದೆ. ವಿಶ್ರಾಂತಿ ಪಡೆಯಲು ಆಸನಗಳಿವೆ. ಜಿಮ್ ವ್ಯವಸ್ಥೆಯೂ ಇದೆ. ಪರಗೋಲಗಳಿವೆ.</p><p>ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಕುಡಿಯುವ ನೀರಿನ ಆರ್ ಒ ಪ್ಲಾಂಟ್ ಇದೆ. ಶೌಚಾಲಯ ವ್ಯವಸ್ಥೆಯೂ ಮಾಡಲಾಗಿದೆ. ಬೆಳಿಗ್ಗೆ 6 ರಿಂದ ಸಂಜೆ 7 ರವರೆಗೆ ಉದ್ಯಾನ ತೆರೆದಿರುತ್ತದೆ ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಾಜೀವ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಸಿಂದಗಿಯಲ್ಲೊಂದು ಸುಸಜ್ಜಿತ ಉದ್ಯಾನ ನಿರ್ಮಾಣಗೊಂಡಿರುವುದು ಸಂತಸ ತರಿಸಿದೆ. ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.</p>.<div><blockquote>ಶಾಸಕ ಮನಗೂಳಿಯವರು ಪ್ರಾದೇಶಿಕ ಅರಣ್ಯ ಇಲಾಖೆಯ ಟ್ರೀ ಪಾರ್ಕ್ ಯೋಜನೆಯಡಿ ₹ 1 ಕೋಟಿ ಅನುದಾನ ಮಂಜೂರುಗೊಳಿಸಿದ್ದು ಸುಂದರವಾದ ವೃಕ್ಷೊದ್ಯಾನ ನಿರ್ಮಾಣಗೊಳ್ಳಲು ಸಾಧ್ಯವಾಗಿದೆ.</blockquote><span class="attribution">– ರಾಜೀವ್ ಬಿರಾದಾರ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಸಿಂದಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>