<p><strong>ವಿಜಯಪುರ</strong>: ‘ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು, ಅವರನ್ನು ಕಂಡರೆ ನನಗೆ ಪ್ರೀತಿ ಹೆಚ್ಚು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಗಳಿದರು.</p>.<p>ಇಂಡಿಯಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಜಯಪುರ ಜಿಲ್ಲೆ ಬಹುತೇಕ ನೀರಾವರಿ ಆಗಿದೆ. ಇದಕ್ಕೆ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತ ರಾಯಗೌಡ ಪಾಟೀಲ, ವಿಠಲ ಕಟಕದೊಂಡ ಕಾರಣ’ ಎಂದು ಶ್ಲಾಘಿಸಿದರು.</p>.<p>‘ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಎಲ್ಲ ನೀರಾವರಿ ಯೋಜನೆಯನ್ನು ಮುಂದುವರಿಸಿ, ಪೂರ್ಣಗೊಳಿಸಿ, ಹಸಿರು ವಿಜಯಪುರ ಮಾಡುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಇಂಡಿಯಲ್ಲಿ ₹4557 ಕೋಟಿ ಮೊತ್ತದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಮಾಡಿ, ಪತ್ರಿಕೆಗಳಿಗೆ ಜಾಹೀರಾತು ನೀಡಿ’ ಎಂದು ಯಶವಂತ ರಾಯಗೌಡ ಪಾಟೀಲರಿಗೆ ಸಲಹೆ ನೀಡಿದರು.</p>.<p>‘ಇಂಡಿಯಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಪ್ರೋತ್ಸಾಹ ನೀಡುತ್ತಿರುವುದು ನಮ್ಮ ಸರ್ಕಾರ’ ಎಂದು ಹೇಳಿದರು.</p>.<p>‘ಇಂಡಿ ಅತೀ ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖವಾಗಿತ್ತು. ಆದರೆ, ಈಗ ಇಂಡಿ ಹಿಂದುಳಿದ ತಾಲ್ಲೂಕುಗಳ ಪಟ್ಟಿಯಲ್ಲಿ ಬರಲು ಸಾಧ್ಯವಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು, ಅವರನ್ನು ಕಂಡರೆ ನನಗೆ ಪ್ರೀತಿ ಹೆಚ್ಚು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಗಳಿದರು.</p>.<p>ಇಂಡಿಯಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಜಯಪುರ ಜಿಲ್ಲೆ ಬಹುತೇಕ ನೀರಾವರಿ ಆಗಿದೆ. ಇದಕ್ಕೆ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತ ರಾಯಗೌಡ ಪಾಟೀಲ, ವಿಠಲ ಕಟಕದೊಂಡ ಕಾರಣ’ ಎಂದು ಶ್ಲಾಘಿಸಿದರು.</p>.<p>‘ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಎಲ್ಲ ನೀರಾವರಿ ಯೋಜನೆಯನ್ನು ಮುಂದುವರಿಸಿ, ಪೂರ್ಣಗೊಳಿಸಿ, ಹಸಿರು ವಿಜಯಪುರ ಮಾಡುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಇಂಡಿಯಲ್ಲಿ ₹4557 ಕೋಟಿ ಮೊತ್ತದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಮಾಡಿ, ಪತ್ರಿಕೆಗಳಿಗೆ ಜಾಹೀರಾತು ನೀಡಿ’ ಎಂದು ಯಶವಂತ ರಾಯಗೌಡ ಪಾಟೀಲರಿಗೆ ಸಲಹೆ ನೀಡಿದರು.</p>.<p>‘ಇಂಡಿಯಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಪ್ರೋತ್ಸಾಹ ನೀಡುತ್ತಿರುವುದು ನಮ್ಮ ಸರ್ಕಾರ’ ಎಂದು ಹೇಳಿದರು.</p>.<p>‘ಇಂಡಿ ಅತೀ ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖವಾಗಿತ್ತು. ಆದರೆ, ಈಗ ಇಂಡಿ ಹಿಂದುಳಿದ ತಾಲ್ಲೂಕುಗಳ ಪಟ್ಟಿಯಲ್ಲಿ ಬರಲು ಸಾಧ್ಯವಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>