<p><strong>ವಿಜಯಪುರ:</strong> ಬೀದರ್ನಿಂದ ಚಾಮರಾಜನಗರ ವರೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆಯುತ್ತಿರುವ ವಕ್ಪ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಯತ್ನಾಳ ಅವರ ಸ್ವಕ್ಷೇತ್ರ ವಿಜಯಪುರದಲ್ಲೇ ಇದೀಗ ತೀವ್ರ ವಿರೋಧ ವ್ಯಕ್ತವಾಗಿದೆ.</p><p>‘ಯತ್ನಾಳ ನಡೆಸುತ್ತಿರುವುದು ವಕ್ಪ್ ವಿರೋಧಿ ಜಾಥಾ ಅಲ್ಲ; ಕಾಂಗ್ರೆಸ್ನಿಂದ ಸುಪಾರಿ ಪಡೆದು ಬಿಜೆಪಿ ಮುಗಿಸಲು ನಡೆಸುತ್ತಿರುವ ಪಕ್ಷ ವಿರೋಧಿ ಜಾಥಾ ವಿಜಯಪುರ ಜಿಲ್ಲೆ ಪ್ರವೇಶ ಮಾಡಿದರೆ ತಡೆವೊಡ್ಡುತ್ತೇವೆ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ ಬಿರಾದಾರ, ರಾಜ್ಯ ಎಸ್.ಸಿ.ಮೋರ್ಚಾ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p><p>‘ಕಾಂಗ್ರೆಸ್ ಏಜೆಂಟ್ ಆಗಿ ಬಿಜೆಪಿಯನ್ನು ದುರ್ಬಲಗೊಳಿಸುವ ಕಾರ್ಯದಲ್ಲಿ ತೊಡಗಿರುವ ಯತ್ನಾಳ ಅವರನ್ನು ಬಿಜೆಪಿ ವರಿಷ್ಠರು ತಕ್ಷಣ ಪಕ್ಷದಿಂದ ವಜಾಮಾಡಬೇಕು’ ಎಂದು ಆಗ್ರಹಿಸಿದರು.</p><p><strong>ಎಂ.ಬಿ.ಪಾಟೀಲ ಭಿಕ್ಷೆ:</strong></p><p>‘ಕಾಂಗ್ರೆಸ್ ಭಿಕ್ಷೆಯಿಂದ ವಿಜಯೇಂದ್ರ ಶಿಕಾರಿಪುರ ಶಾಸಕರಾಗಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಪ್ರಸ್ತಾಪಿಸಿ ಪದೇ ಪದೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಅವಮಾನ ಮಾಡುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯಪುರದಲ್ಲಿ ಸಚಿವ ಎಂ.ಬಿ.ಪಾಟೀಲ ನೀಡಿರುವ ಭಿಕ್ಷೆಯಿಂದ ಶಾಸಕರಾಗಿದ್ದಾರೆ’ ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದರು. </p><p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ನಡೆಸುತ್ತಿರುವ ವಕ್ಪ್ ವಿರೋಧಿ ಹೋರಾಟದ ಲಾಭ ಪಡೆಯಲು ಯತ್ನಾಳ ಹವಣಿಸುತ್ತಿದ್ದಾರೆ. ಹೋರಾಟವನ್ನು ರಾಜಕೀಯಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ ದೂಷಿಸುವ ಬದಲಾಗಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಂಶವಾದ, ಭ್ರಷ್ಟಾಚಾರದ ಆರೋಪಗಳನ್ನು ಮಾಡಿ, ಟೀಕಾ ಪ್ರಹಾರ ನಡೆಸುತ್ತಿರುವುದು ಖಂಡನೀಯ’ ಎಂದರು.</p><p>‘ತಮ್ಮ ರಾಜಕೀಯ ಅನುಕೂಲಕ್ಕಾಗಿ ಬಸನಗೌಡ ಪಾಟೀಲ ಯತ್ನಾಳ ಒಮ್ಮೆ ಹಿಂದುತ್ವ, ಇನ್ನೊಮ್ಮೆ ಪಂಚಮಸಾಲಿ ಹೋರಾಟ ಮಾಡುತ್ತಾರೆ. ಸಮಯ ಬಂದಾಗ ಮಸೀದಿಗೆ ಹೋಗಿ ಟೊಪ್ಪಿ ಹಾಕುತ್ತಾರೆ, ನಮಾಜು ಮಾಡುತ್ತಾರೆ, ಸುರಕುಂಬಾ ಹಂಚುತ್ತಾರೆ, ಅವರೊಬ್ಬ ಅವಕಾಶವಾದಿ, ಬಣ್ಣ ಬದಲಾಯಿಸುವ ಗೋಸುಂಬೆ ರಾಜಕಾರಣಿ’ ಎಂದು ಟೀಕಿಸಿದರು. </p><p>‘ವಿಜಯೇಂದ್ರ ನಾಯಕತ್ವವನ್ನು ಟೀಕೆ ಮಾಡುವ ಯಾವ ನೈತಿಕತೆಯೂ ಯತ್ನಾಳಗೆ ಇಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕನನ್ನಾಗಿ ಯತ್ನಾಳನನ್ನು ಮಾಡಲಾಗಿತ್ತು. ಒಂದೇ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲಿಲ್ಲ, ಮೊನ್ನೆ ನಡೆದ ಶಿಗ್ಗಾವಿ ಉಪ ಚುನಾವಣೆಯಲ್ಲಿ ಒಂದು ವಾರ ಪ್ರಚಾರ ಮಾಡಿ ಭರತ್ ಬೊಮ್ಮಾಯಿಯನ್ನು ಸೋಲಿಸಿ ಬಂದಿದ್ದೀರಿ’ ಎಂದು ಆರೋಪಿಸಿದರು.</p><p>‘ಪಂಚಮಸಾಲಿ ಸಮಾಜಕ್ಕೆ ಯತ್ನಾಳ ಯಾವುದೇ ಕೊಡುಗೆ ನೀಡಿಲ್ಲ, ತಮಗೆ ರಾಜಕೀಯ ಅಸ್ಥಿರತೆ ಉಂಟಾದಾಗ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನುಸುಳಿಕೊಂಡಿದ್ದಾರೆ, ಪಂಚಮಸಾಲಿ ಸಮಾಜಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವವರು ಮಾಜಿ ಸಚಿವ ಮುರುಗೇಶ ನಿರಾಣಿಯೇ ಹೊರತು, ಯತ್ನಾಳ ಅಲ್ಲ’ ಎಂದರು.</p><p>‘ಯತ್ನಾಳ ಅವರಿಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದವರು ಬಿ.ಎಸ್.ಯಡಿಯೂರಪ್ಪ ಮತ್ತು ಮುರುಗೇಶ ನಿರಾಣಿ ಎಂಬುದನ್ನು ಮರೆತು, ಅವರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ’ ಎಂದರು.</p><p>‘ಈ ಹಿಂದೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿ.ಎಲ್.ಸಂತೋಷ, ಜಗದೀಶ ಶೆಟ್ಟರ್, ಯಡಿಯೂರಪ್ಪ ಅವರನ್ನು ಬಿಡದೇ ಟೀಕಿಸಿದ್ದಾರೆ. ಹೊಂದಾಣಿಕೆ ರಾಜಕಾರಣದ ಬಗ್ಗೆ ಡೋಂಗಿ ಮಾತನಾಡುವ ಯತ್ನಾಳ ವಿಜಯಪುರದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬೀದರ್ನಿಂದ ಚಾಮರಾಜನಗರ ವರೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆಯುತ್ತಿರುವ ವಕ್ಪ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಯತ್ನಾಳ ಅವರ ಸ್ವಕ್ಷೇತ್ರ ವಿಜಯಪುರದಲ್ಲೇ ಇದೀಗ ತೀವ್ರ ವಿರೋಧ ವ್ಯಕ್ತವಾಗಿದೆ.</p><p>‘ಯತ್ನಾಳ ನಡೆಸುತ್ತಿರುವುದು ವಕ್ಪ್ ವಿರೋಧಿ ಜಾಥಾ ಅಲ್ಲ; ಕಾಂಗ್ರೆಸ್ನಿಂದ ಸುಪಾರಿ ಪಡೆದು ಬಿಜೆಪಿ ಮುಗಿಸಲು ನಡೆಸುತ್ತಿರುವ ಪಕ್ಷ ವಿರೋಧಿ ಜಾಥಾ ವಿಜಯಪುರ ಜಿಲ್ಲೆ ಪ್ರವೇಶ ಮಾಡಿದರೆ ತಡೆವೊಡ್ಡುತ್ತೇವೆ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ ಬಿರಾದಾರ, ರಾಜ್ಯ ಎಸ್.ಸಿ.ಮೋರ್ಚಾ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p><p>‘ಕಾಂಗ್ರೆಸ್ ಏಜೆಂಟ್ ಆಗಿ ಬಿಜೆಪಿಯನ್ನು ದುರ್ಬಲಗೊಳಿಸುವ ಕಾರ್ಯದಲ್ಲಿ ತೊಡಗಿರುವ ಯತ್ನಾಳ ಅವರನ್ನು ಬಿಜೆಪಿ ವರಿಷ್ಠರು ತಕ್ಷಣ ಪಕ್ಷದಿಂದ ವಜಾಮಾಡಬೇಕು’ ಎಂದು ಆಗ್ರಹಿಸಿದರು.</p><p><strong>ಎಂ.ಬಿ.ಪಾಟೀಲ ಭಿಕ್ಷೆ:</strong></p><p>‘ಕಾಂಗ್ರೆಸ್ ಭಿಕ್ಷೆಯಿಂದ ವಿಜಯೇಂದ್ರ ಶಿಕಾರಿಪುರ ಶಾಸಕರಾಗಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಪ್ರಸ್ತಾಪಿಸಿ ಪದೇ ಪದೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಅವಮಾನ ಮಾಡುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯಪುರದಲ್ಲಿ ಸಚಿವ ಎಂ.ಬಿ.ಪಾಟೀಲ ನೀಡಿರುವ ಭಿಕ್ಷೆಯಿಂದ ಶಾಸಕರಾಗಿದ್ದಾರೆ’ ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದರು. </p><p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ನಡೆಸುತ್ತಿರುವ ವಕ್ಪ್ ವಿರೋಧಿ ಹೋರಾಟದ ಲಾಭ ಪಡೆಯಲು ಯತ್ನಾಳ ಹವಣಿಸುತ್ತಿದ್ದಾರೆ. ಹೋರಾಟವನ್ನು ರಾಜಕೀಯಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ ದೂಷಿಸುವ ಬದಲಾಗಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಂಶವಾದ, ಭ್ರಷ್ಟಾಚಾರದ ಆರೋಪಗಳನ್ನು ಮಾಡಿ, ಟೀಕಾ ಪ್ರಹಾರ ನಡೆಸುತ್ತಿರುವುದು ಖಂಡನೀಯ’ ಎಂದರು.</p><p>‘ತಮ್ಮ ರಾಜಕೀಯ ಅನುಕೂಲಕ್ಕಾಗಿ ಬಸನಗೌಡ ಪಾಟೀಲ ಯತ್ನಾಳ ಒಮ್ಮೆ ಹಿಂದುತ್ವ, ಇನ್ನೊಮ್ಮೆ ಪಂಚಮಸಾಲಿ ಹೋರಾಟ ಮಾಡುತ್ತಾರೆ. ಸಮಯ ಬಂದಾಗ ಮಸೀದಿಗೆ ಹೋಗಿ ಟೊಪ್ಪಿ ಹಾಕುತ್ತಾರೆ, ನಮಾಜು ಮಾಡುತ್ತಾರೆ, ಸುರಕುಂಬಾ ಹಂಚುತ್ತಾರೆ, ಅವರೊಬ್ಬ ಅವಕಾಶವಾದಿ, ಬಣ್ಣ ಬದಲಾಯಿಸುವ ಗೋಸುಂಬೆ ರಾಜಕಾರಣಿ’ ಎಂದು ಟೀಕಿಸಿದರು. </p><p>‘ವಿಜಯೇಂದ್ರ ನಾಯಕತ್ವವನ್ನು ಟೀಕೆ ಮಾಡುವ ಯಾವ ನೈತಿಕತೆಯೂ ಯತ್ನಾಳಗೆ ಇಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕನನ್ನಾಗಿ ಯತ್ನಾಳನನ್ನು ಮಾಡಲಾಗಿತ್ತು. ಒಂದೇ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲಿಲ್ಲ, ಮೊನ್ನೆ ನಡೆದ ಶಿಗ್ಗಾವಿ ಉಪ ಚುನಾವಣೆಯಲ್ಲಿ ಒಂದು ವಾರ ಪ್ರಚಾರ ಮಾಡಿ ಭರತ್ ಬೊಮ್ಮಾಯಿಯನ್ನು ಸೋಲಿಸಿ ಬಂದಿದ್ದೀರಿ’ ಎಂದು ಆರೋಪಿಸಿದರು.</p><p>‘ಪಂಚಮಸಾಲಿ ಸಮಾಜಕ್ಕೆ ಯತ್ನಾಳ ಯಾವುದೇ ಕೊಡುಗೆ ನೀಡಿಲ್ಲ, ತಮಗೆ ರಾಜಕೀಯ ಅಸ್ಥಿರತೆ ಉಂಟಾದಾಗ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನುಸುಳಿಕೊಂಡಿದ್ದಾರೆ, ಪಂಚಮಸಾಲಿ ಸಮಾಜಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವವರು ಮಾಜಿ ಸಚಿವ ಮುರುಗೇಶ ನಿರಾಣಿಯೇ ಹೊರತು, ಯತ್ನಾಳ ಅಲ್ಲ’ ಎಂದರು.</p><p>‘ಯತ್ನಾಳ ಅವರಿಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದವರು ಬಿ.ಎಸ್.ಯಡಿಯೂರಪ್ಪ ಮತ್ತು ಮುರುಗೇಶ ನಿರಾಣಿ ಎಂಬುದನ್ನು ಮರೆತು, ಅವರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ’ ಎಂದರು.</p><p>‘ಈ ಹಿಂದೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿ.ಎಲ್.ಸಂತೋಷ, ಜಗದೀಶ ಶೆಟ್ಟರ್, ಯಡಿಯೂರಪ್ಪ ಅವರನ್ನು ಬಿಡದೇ ಟೀಕಿಸಿದ್ದಾರೆ. ಹೊಂದಾಣಿಕೆ ರಾಜಕಾರಣದ ಬಗ್ಗೆ ಡೋಂಗಿ ಮಾತನಾಡುವ ಯತ್ನಾಳ ವಿಜಯಪುರದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>