<p><strong>ಸಿಂದಗಿ</strong>: ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಾರಂಭಗೊಂಡ ಯೋಗ ಸಪ್ತಾಹ ಒಂಬತ್ತು ದಿನಗಳ ಬಳಿಕ ಭಾನುವಾರ ಸಂಪನ್ನಗೊಂಡಿತು.</p>.<p>ಯಾದಗಿರಿ ಜಿಲ್ಲೆಯ ಗೋಗಿ ಜ್ಞಾನಯೋಗ ಮಂದಿರದ ಯೋಗಿ ಜಯಗುರುದೇವ ಸ್ವಾಮೀಜಿ ಗಳಿಂದ ಪ್ರತಿನಿತ್ಯ ಬೆಳಿಗ್ಗೆ-ಸಾಯಂಕಾಲ ಅಷ್ಟಾಂಗ ಯೋಗ ಮತ್ತು ಪ್ರಣವ ಧ್ಯಾನ ಯೋಗ ತರಬೇತಿ ನಡೆಯಿತು.</p>.<p>ಸಮಾರೋಪ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಶಾಖೆ ಅಧ್ಯಕ್ಷ ಅಶೋಕ ವಾರದ ಯೋಗ ಶಿಬಿರಾರ್ಥಿಗಳಾಗಿ ಅನಿಸಿಕೆ ವ್ಯಕ್ತಪಡಿಸಿದರು.</p>.<p>ಯೋಗ ಗುರು ಜಯಗುರುದೇವ ಸ್ವಾಮೀಜಿ ಗೌರವ ಸ್ವೀಕರಿಸಿ ಯೋಗ ನಿತ್ಯ ಮುಂದುವರೆಸಿಕೊಂಡು ಆರೋಗ್ಯವಂತರಾಗುವಂತೆ ಹೇಳಿದರು.</p>.<p>ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಪ್ರಭು ಸಾರಂಗದೇವ ಶಿವಾಚಾರ್ಯರು, ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ತಡವಲಗಾ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.</p>.<p>ಸಂಸ್ಥೆಯ ನಿರ್ದೇಶಕರಾದ ಗಂಗಾಧರ ಜೋಗೂರ, ಹ.ಮ.ಪೂಜಾರ, ಅಶೋಕ ಮಸಳಿ, ವಿವೇಕಾನಂದ ಸಾಲಿಮಠ ಹಾಗೂ ಆಡಳಿತಾಧಿಕಾರಿ ಬಿ.ಜಿ.ಮಠ ಮುಖ್ಯ ಅತಿಥಿಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನದಂದು ಪ್ರಾರಂಭಗೊಂಡ ಯೋಗ ಸಪ್ತಾಹ ಒಂಬತ್ತು ದಿನಗಳ ಬಳಿಕ ಭಾನುವಾರ ಸಂಪನ್ನಗೊಂಡಿತು.</p>.<p>ಯಾದಗಿರಿ ಜಿಲ್ಲೆಯ ಗೋಗಿ ಜ್ಞಾನಯೋಗ ಮಂದಿರದ ಯೋಗಿ ಜಯಗುರುದೇವ ಸ್ವಾಮೀಜಿ ಗಳಿಂದ ಪ್ರತಿನಿತ್ಯ ಬೆಳಿಗ್ಗೆ-ಸಾಯಂಕಾಲ ಅಷ್ಟಾಂಗ ಯೋಗ ಮತ್ತು ಪ್ರಣವ ಧ್ಯಾನ ಯೋಗ ತರಬೇತಿ ನಡೆಯಿತು.</p>.<p>ಸಮಾರೋಪ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಶಾಖೆ ಅಧ್ಯಕ್ಷ ಅಶೋಕ ವಾರದ ಯೋಗ ಶಿಬಿರಾರ್ಥಿಗಳಾಗಿ ಅನಿಸಿಕೆ ವ್ಯಕ್ತಪಡಿಸಿದರು.</p>.<p>ಯೋಗ ಗುರು ಜಯಗುರುದೇವ ಸ್ವಾಮೀಜಿ ಗೌರವ ಸ್ವೀಕರಿಸಿ ಯೋಗ ನಿತ್ಯ ಮುಂದುವರೆಸಿಕೊಂಡು ಆರೋಗ್ಯವಂತರಾಗುವಂತೆ ಹೇಳಿದರು.</p>.<p>ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಪ್ರಭು ಸಾರಂಗದೇವ ಶಿವಾಚಾರ್ಯರು, ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ತಡವಲಗಾ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.</p>.<p>ಸಂಸ್ಥೆಯ ನಿರ್ದೇಶಕರಾದ ಗಂಗಾಧರ ಜೋಗೂರ, ಹ.ಮ.ಪೂಜಾರ, ಅಶೋಕ ಮಸಳಿ, ವಿವೇಕಾನಂದ ಸಾಲಿಮಠ ಹಾಗೂ ಆಡಳಿತಾಧಿಕಾರಿ ಬಿ.ಜಿ.ಮಠ ಮುಖ್ಯ ಅತಿಥಿಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>