ವಿಜಯಪುರ: ನಿಡಗುಂದಿ ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ರಾತ್ರಿ ಹೊಲಕ್ಕೆ ನೀರು ಹಾಯಿಸಲು ಹೋದಾಗ ತೋಳ ಕಚ್ಚಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದಾನೆ.
ಮೃತ ಯುವಕ ಮಸೂತಿ ಗ್ರಾಮದ ಮಲ್ಲಪ್ಪ ಶಿವಪ್ಪ ಕೂಡಗಿ (37).
ಕಳೆದ 15 ದಿನಗಳ ಹಿಂದೆ ಹೊಲದಲ್ಲಿ ರಾತ್ರಿ ನೀರುಣಿಸುವಾಗ ತೋಳ ಮುಖ, ಕಾಲು ಸೇರಿದಂತೆ ನಾನಾ ಕಡೆ ಕಚ್ಚಿತ್ತು. ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ನಸುಕಿನ ಜಾವ ಯುವಕ ಮೃತಪಟ್ಟಿದ್ದಾನೆ.