<p><strong>ವಿಜಯಪುರ:</strong> ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.</p><p>ಮೂವರಲ್ಲಿ ಒಬ್ಬ ಯುವಕನ ಶವ ಪತ್ತೆಯಾಗಿದ್ದು, ನಾಪತ್ತೆಯಾದ ಇನ್ನಿಬ್ಬರಿಗಾಗಿ ಹುಡುಕಾಟ ನಡೆದಿದೆ. </p><p>ಮೂವರು ಬಾಗಲಕೋಟೆ ತಾಲ್ಲೂಕಿನ ಇಲ್ಯಾಳ ಗ್ರಾಮದವರು. </p><p>ಸೋಮಶೇಖರ ಬೊಮ್ಮಣ್ಣ ದೇವರಮನಿ (15) ಶವ ಪತ್ತೆಯಾಗಿದೆ. ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (15), ಪರನಗೌಡ ಮಲ್ಲಪ್ಪ ಬೀಳಗಿ (17) ಕಾಣೆಯಾಗಿದ್ದು, ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದೆ.</p><p>ಘಟನೆ ನಡೆದ ತಕ್ಷಣ ಮೀನುಗಾರರು ಕಾಣೆಯಾದವರ ಹುಡುಕಾಟ ನಡೆಸಿದರು. ಒಬ್ಬ ಯುವಕನ ಶವ ಹೊರಗೆ ತೆಗೆದರು. ಕಾಣೆಯಾದವರ ಹುಡುಕಾಟಕ್ಕಾಗಿ ಬಾಗಲಕೋಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.</p><p>ಘಟನೆ ಆಲಮಟ್ಟಿ ಜಲಾಶಯದ ಕೃಷ್ಣಾ ನದಿಯ ಬಲಭಾಗದ ಬಾಗಲಕೋಟೆ ತಾಲ್ಲೂಕಿನ ಸೀತಿಮನಿ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಬಾಗಲಕೋಟೆ ಸಿಪಿಐ ಎಚ್. ಆರ್. ಪಾಟೀಲ ಭೇಟಿ ನೀಡಿದ್ದಾರೆ.</p><p>ಯುಗಾದಿ ಪಾಡ್ಯದ ನಿಮಿತ್ತ ಬಾಲಕರು ಕೃಷ್ಣಾ ನದಿಗೆ ಸ್ನಾನಕ್ಕೆ ಬಂದಿದ್ದರು. ನದಿ ನೀರಿನ ಆಳ ಗೊತ್ತಿಲ್ಲದೇ ಒಬ್ಬ ಮೊದಲು ಬಿದ್ದಿದ್ದು, ನಂತರ ಇನ್ನಿಬ್ಬರು ಅವನ ರಕ್ಷಣೆಗಾಗಿ ನದಿಗೆ ಇಳಿದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.</p><p>ಮೂವರಲ್ಲಿ ಒಬ್ಬ ಯುವಕನ ಶವ ಪತ್ತೆಯಾಗಿದ್ದು, ನಾಪತ್ತೆಯಾದ ಇನ್ನಿಬ್ಬರಿಗಾಗಿ ಹುಡುಕಾಟ ನಡೆದಿದೆ. </p><p>ಮೂವರು ಬಾಗಲಕೋಟೆ ತಾಲ್ಲೂಕಿನ ಇಲ್ಯಾಳ ಗ್ರಾಮದವರು. </p><p>ಸೋಮಶೇಖರ ಬೊಮ್ಮಣ್ಣ ದೇವರಮನಿ (15) ಶವ ಪತ್ತೆಯಾಗಿದೆ. ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (15), ಪರನಗೌಡ ಮಲ್ಲಪ್ಪ ಬೀಳಗಿ (17) ಕಾಣೆಯಾಗಿದ್ದು, ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದೆ.</p><p>ಘಟನೆ ನಡೆದ ತಕ್ಷಣ ಮೀನುಗಾರರು ಕಾಣೆಯಾದವರ ಹುಡುಕಾಟ ನಡೆಸಿದರು. ಒಬ್ಬ ಯುವಕನ ಶವ ಹೊರಗೆ ತೆಗೆದರು. ಕಾಣೆಯಾದವರ ಹುಡುಕಾಟಕ್ಕಾಗಿ ಬಾಗಲಕೋಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.</p><p>ಘಟನೆ ಆಲಮಟ್ಟಿ ಜಲಾಶಯದ ಕೃಷ್ಣಾ ನದಿಯ ಬಲಭಾಗದ ಬಾಗಲಕೋಟೆ ತಾಲ್ಲೂಕಿನ ಸೀತಿಮನಿ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಬಾಗಲಕೋಟೆ ಸಿಪಿಐ ಎಚ್. ಆರ್. ಪಾಟೀಲ ಭೇಟಿ ನೀಡಿದ್ದಾರೆ.</p><p>ಯುಗಾದಿ ಪಾಡ್ಯದ ನಿಮಿತ್ತ ಬಾಲಕರು ಕೃಷ್ಣಾ ನದಿಗೆ ಸ್ನಾನಕ್ಕೆ ಬಂದಿದ್ದರು. ನದಿ ನೀರಿನ ಆಳ ಗೊತ್ತಿಲ್ಲದೇ ಒಬ್ಬ ಮೊದಲು ಬಿದ್ದಿದ್ದು, ನಂತರ ಇನ್ನಿಬ್ಬರು ಅವನ ರಕ್ಷಣೆಗಾಗಿ ನದಿಗೆ ಇಳಿದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>