ವಿಜಯಪುರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರು ವಿನೂತನ ಕಾರ್ಯಕ್ರಮ ನಡೆಸಲು ಸಜ್ಜಾಗಿದ್ದಾರೆ.
ಸೆಪ್ಟೆಂಬರ್ 4ರಂದುಸಂಜೆ 6ಕ್ಕೆತಿಕೋಟಾ ತಾಲ್ಲೂಕಿನ ಲೋಗಾಂವ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಅಡವಿಯಲ್ಲಿ ಅಲೆಮಾರಿ ಕುರಿಗಾಯಿಗೊಂದಿಗೆ ಸಂವಾದ ಮತ್ತು ವಾಸ್ತವ್ಯ ಮಾಡಲಿದ್ದಾರೆ.
ಅಧ್ಯಕ್ಷರೊಂದಿಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಮತ್ತು ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕುರಿಗಾಹಿಗಳ ಸಮಸ್ಯೆಗಳನ್ನು ಆಲಿಸಲಿರುವ ಅಧ್ಯಕ್ಷರು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ಅಸಂಘಟಿತ ವಲಯಕ್ಕೆ ಸೇರಿರುವಅಲೆಮಾರಿ ಕುರಿಗಾಹಿಗಳು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಶಿಕ್ಷಣ, ನಗರದಿಂದ ವಂಚಿತರಾಗಿದ್ದಾರೆ. ಹೀಗಾಗಿ ಅವರ ದೂರು, ದುಮ್ಮಾನಗಳನ್ನು ಆಲಿಸುವ ಉದ್ದೇಶದಿಂದ ಸಂವಾದ, ವಾಸ್ತವ್ಯ ಮಾಡಲಿದ್ದೇನೆ’ ಎಂದು ತಿಳಿಸಿದರು.
‘ಕುರಿಗಾಹಿಗಳೊಂದಿಗೆ ಟೆಂಟ್ನಲ್ಲೇ ವಾಸ್ತವ್ಯ ಮಾಡಿದ ಬಳಿಕ ಮರುದಿನ ಬೆಳಿಗ್ಗೆ ಇಟ್ಟಂಗಿಹಾಳ ಗ್ರಾಮದಲ್ಲಿ ಬಯಲು ಶೌಚಾಲಯದ ಕುರಿತು ಜನರಿಗೆ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.