<p><strong>ವಿಜಯಪುರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ಜೊಮ್ಯಾಟೊ ಕಂಪನಿಯ 300ಕ್ಕೂ ಅಧಿಕ ಆಹಾರ ವಿತರಕರು (ಫುಡ್ ಡೆಲಿವರಿ ಬಾಯ್ಸ್) ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನೂರಾರು ಜೊಮ್ಯಾಟೊ ವಿತರಕರು ಪ್ರತಿಭಟನಾ ಜಾಥಾ ನಡೆಸಿದರು.</p>.<p>ಜೊಮ್ಯಾಟೊ ಕಂಪನಿಯ ರೈಡರ್ ಇಬ್ರಾಹಿಂ ಮಾತನಾಡಿ, ಆಹಾರ ವಿತರಕರಿಗೆ ನೀಡಲಾಗುತ್ತಿದ್ದ ಸೌಲಭ್ಯ ಕಡಿತ ಮಾಡಲಾಗಿದೆ. ವಿತರಕರನ್ನು ಗಿಗ್ ಕಾರ್ಮಿಕರೆಂದು ಪರಿಗಣಿಸಬೇಕು, ಪಿಎಫ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>‘ಒಂದು ಕಿ.ಮೀ.ಗೆ ₹10 ನೀಡಬೇಕು, ನಿಗದಿತ ವೇತನ ನೀಡಬೇಕು, ಈ ಮೊದಲು ಪ್ರತಿ ಗಂಟೆಗೆ ₹80 ನೀಡಲಾಗುತಿತ್ತು. ಈಗ ಅರ್ಧದಷ್ಟು ಕಡಿತ ಮಾಡಲಾಗಿದೆ. 14 ಗಂಟೆ ಕೆಲಸ ಮಾಡಿಸಿಕೊಳ್ಳುತ್ತಾರೆ. ಕೆಲಸ ಮಾಡುವಂತೆ ಅಂಜಿಸುತ್ತಿದ್ದಾರೆ. ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಅಪಘಾತ ಆದರೂ ನಮಗೆ ಯಾವುದೇ ಸಹಾಯ ಮಾಡುತ್ತಿಲ್ಲ, ಸಂಸಾರ ನಡೆಸುವುದು ಕಷ್ಟವಾಗಿದೆ. ಕಂಪನಿ ಇದರ ಜವಾಬ್ದಾರಿ ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ನೂರಾರು ಜೊಮ್ಯಾಟೊ ರೈಡರ್ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ಜೊಮ್ಯಾಟೊ ಕಂಪನಿಯ 300ಕ್ಕೂ ಅಧಿಕ ಆಹಾರ ವಿತರಕರು (ಫುಡ್ ಡೆಲಿವರಿ ಬಾಯ್ಸ್) ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನೂರಾರು ಜೊಮ್ಯಾಟೊ ವಿತರಕರು ಪ್ರತಿಭಟನಾ ಜಾಥಾ ನಡೆಸಿದರು.</p>.<p>ಜೊಮ್ಯಾಟೊ ಕಂಪನಿಯ ರೈಡರ್ ಇಬ್ರಾಹಿಂ ಮಾತನಾಡಿ, ಆಹಾರ ವಿತರಕರಿಗೆ ನೀಡಲಾಗುತ್ತಿದ್ದ ಸೌಲಭ್ಯ ಕಡಿತ ಮಾಡಲಾಗಿದೆ. ವಿತರಕರನ್ನು ಗಿಗ್ ಕಾರ್ಮಿಕರೆಂದು ಪರಿಗಣಿಸಬೇಕು, ಪಿಎಫ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>‘ಒಂದು ಕಿ.ಮೀ.ಗೆ ₹10 ನೀಡಬೇಕು, ನಿಗದಿತ ವೇತನ ನೀಡಬೇಕು, ಈ ಮೊದಲು ಪ್ರತಿ ಗಂಟೆಗೆ ₹80 ನೀಡಲಾಗುತಿತ್ತು. ಈಗ ಅರ್ಧದಷ್ಟು ಕಡಿತ ಮಾಡಲಾಗಿದೆ. 14 ಗಂಟೆ ಕೆಲಸ ಮಾಡಿಸಿಕೊಳ್ಳುತ್ತಾರೆ. ಕೆಲಸ ಮಾಡುವಂತೆ ಅಂಜಿಸುತ್ತಿದ್ದಾರೆ. ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಅಪಘಾತ ಆದರೂ ನಮಗೆ ಯಾವುದೇ ಸಹಾಯ ಮಾಡುತ್ತಿಲ್ಲ, ಸಂಸಾರ ನಡೆಸುವುದು ಕಷ್ಟವಾಗಿದೆ. ಕಂಪನಿ ಇದರ ಜವಾಬ್ದಾರಿ ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ನೂರಾರು ಜೊಮ್ಯಾಟೊ ರೈಡರ್ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>