<p><strong>ವಿಜಾಪುರ: </strong>ಪ್ರತಿಯೊಬ್ಬ ಮಹಿಳೆಯಲ್ಲಿ ಅಪಾರವಾದ ಪ್ರತಿಭೆ, ಶಕ್ತಿ ಮತ್ತು ಸಾಮರ್ಥ್ಯವಿದೆ. ಮಹಿಳೆಯರಲ್ಲಿರುವ ಹಾಗೂ ಮಹಿಳೆಯರ ಬಗ್ಗೆ ಇರುವ ಕೀಳರಿಮೆ ತೊಲಗಬೇಕಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎ.ಆರ್. ಅಳಗವಾಡಿ ಹೇಳಿದರು.<br /> <br /> ಇಲ್ಲಿಯ ಹಿಟ್ನಳ್ಳಿಯ ಕೃಷಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ತಂತ್ರಜ್ಞರ ಸಂಸ್ಥೆ, ಆಹೇರಿ ರಾಷ್ಟ್ರೀಯ ಕ್ರೀಡಾ ಸಂಘದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ `ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ಸಬಲೀಕರಣ~ ಕುರಿತ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> ಮಹಿಳೆಯರಿಗೆ ಆರ್ಥಿಕ, ಸ್ವಾತಂತ್ರ್ಯ ಹಾಗೂ ಸಮಾಜಿಕ ಭದ್ರತೆ ಒದಗಿಸಲು ಸರ್ಕಾರಗಳು ದಿಟ್ಟ ನಿಲುವು ತೆಳಯಬೇಕಾಗಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಅಧ್ಯಕ್ಷೆ ಕಮಲಾಬಾಯಿ ಮಾಯವಂಶಿ, ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದರು.<br /> <br /> ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಮೇತ್ರಿ, ಸಮಾಜದಲ್ಲಿ ಸ್ತ್ರೀ - ಪುರುಷರ ಮಧ್ಯ ಇರುವ ಲಿಂಗ ತಾರತಮ್ಯ ತೊಡೆದು ಹಾಕಿ ಸಮಾನತೆಯ ಸ್ವಾತಂತ್ರ್ಯದ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವುದೇ ಮಹಿಳಾ ಸಬಲೀಕರಣದ ಉದ್ದೇಶವಾಗಿದೆ ಎಂದರು.<br /> <br /> ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಸಹಾಯಕ ಪ್ರಧ್ಯಾಪಕಿ ಡಾ.ಎಚ್.ಎಂ. ಹೇಮಲತಾ ಮಾತನಾಡಿ, ಮಹಿಳೆಯರ ಸಶಕ್ತೀಕರಣ ಕೇವಲ ವ್ಯವಹಾರಿಕ ವರ್ಷಾಚಾರಣೆಯಿಂದ ಸಾಧ್ಯವಿಲ್ಲ. ಮೂಲಭೂತವಾಗಿ ಸಮಾಜದಲ್ಲಿ ಮಹಿಳೆ ಮತ್ತು ಪುರುಷನನ್ನು ನೋಡುವ ದೃಷ್ಟಿ ಮಕ್ಕಳಿಂದಲೇ ಬದಲಾಗಬೇಕು ಎಂದರು.<br /> <br /> ವಕೀಲ ಎಂ.ಜಿ. ಮಠಪತಿ, ಪುರುಷ ಪ್ರಧಾನ ದೇಶದಲ್ಲಿ ಮಹಿಳೆ ಕಾನೂನಿನ ಚೌಕಟ್ಟಿನಲ್ಲಿ ಹಂತ ಹಂತವಾಗಿ ಸ್ವಾವಲಂಬಿಯಾಗಿ ಹಕ್ಕು ಪಡೆಯುತ್ತಿದ್ದಾರೆ ಎಂದು ಹೇಳಿದರು.<br /> <br /> ಜಿ.ಪಂ. ಸದಸ್ಯೆ ಸೌಮ್ಯ ಕಲ್ಲೂರ, ಡಾ.ಉಡಕೇರೆ, ಡಾ.ರಾಜೇಂದ್ರ ಪೊದ್ದಾರ, ಜಿ. ಶ್ರಿನಿವಾಸಲು, ಡಾ.ಎಸ್.ಬಿ. ಜಗ್ಗೆನವರ, ಡಾ.ಸತೀಶ ಪಾಟೀಲ ಡಾ. ಎಸ್.ವೈ. ವಾಲಿ ಇತರರು ವೇದಿಕೆಯಲ್ಲಿದ್ದರು. ಬಂಡೆಪ್ಪ ತೇಲಿ ಸ್ವಾಗತಿಸಿದರು. ಪೂಜಾ ಬಿ. ಕಾರ್ಯಕ್ರಮ ನಿರೂಪಿಸಿದರು. ಶರಣಗೌಡ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>ಪ್ರತಿಯೊಬ್ಬ ಮಹಿಳೆಯಲ್ಲಿ ಅಪಾರವಾದ ಪ್ರತಿಭೆ, ಶಕ್ತಿ ಮತ್ತು ಸಾಮರ್ಥ್ಯವಿದೆ. ಮಹಿಳೆಯರಲ್ಲಿರುವ ಹಾಗೂ ಮಹಿಳೆಯರ ಬಗ್ಗೆ ಇರುವ ಕೀಳರಿಮೆ ತೊಲಗಬೇಕಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎ.ಆರ್. ಅಳಗವಾಡಿ ಹೇಳಿದರು.<br /> <br /> ಇಲ್ಲಿಯ ಹಿಟ್ನಳ್ಳಿಯ ಕೃಷಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ತಂತ್ರಜ್ಞರ ಸಂಸ್ಥೆ, ಆಹೇರಿ ರಾಷ್ಟ್ರೀಯ ಕ್ರೀಡಾ ಸಂಘದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ `ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ಸಬಲೀಕರಣ~ ಕುರಿತ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> ಮಹಿಳೆಯರಿಗೆ ಆರ್ಥಿಕ, ಸ್ವಾತಂತ್ರ್ಯ ಹಾಗೂ ಸಮಾಜಿಕ ಭದ್ರತೆ ಒದಗಿಸಲು ಸರ್ಕಾರಗಳು ದಿಟ್ಟ ನಿಲುವು ತೆಳಯಬೇಕಾಗಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಅಧ್ಯಕ್ಷೆ ಕಮಲಾಬಾಯಿ ಮಾಯವಂಶಿ, ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದರು.<br /> <br /> ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಮೇತ್ರಿ, ಸಮಾಜದಲ್ಲಿ ಸ್ತ್ರೀ - ಪುರುಷರ ಮಧ್ಯ ಇರುವ ಲಿಂಗ ತಾರತಮ್ಯ ತೊಡೆದು ಹಾಕಿ ಸಮಾನತೆಯ ಸ್ವಾತಂತ್ರ್ಯದ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವುದೇ ಮಹಿಳಾ ಸಬಲೀಕರಣದ ಉದ್ದೇಶವಾಗಿದೆ ಎಂದರು.<br /> <br /> ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಸಹಾಯಕ ಪ್ರಧ್ಯಾಪಕಿ ಡಾ.ಎಚ್.ಎಂ. ಹೇಮಲತಾ ಮಾತನಾಡಿ, ಮಹಿಳೆಯರ ಸಶಕ್ತೀಕರಣ ಕೇವಲ ವ್ಯವಹಾರಿಕ ವರ್ಷಾಚಾರಣೆಯಿಂದ ಸಾಧ್ಯವಿಲ್ಲ. ಮೂಲಭೂತವಾಗಿ ಸಮಾಜದಲ್ಲಿ ಮಹಿಳೆ ಮತ್ತು ಪುರುಷನನ್ನು ನೋಡುವ ದೃಷ್ಟಿ ಮಕ್ಕಳಿಂದಲೇ ಬದಲಾಗಬೇಕು ಎಂದರು.<br /> <br /> ವಕೀಲ ಎಂ.ಜಿ. ಮಠಪತಿ, ಪುರುಷ ಪ್ರಧಾನ ದೇಶದಲ್ಲಿ ಮಹಿಳೆ ಕಾನೂನಿನ ಚೌಕಟ್ಟಿನಲ್ಲಿ ಹಂತ ಹಂತವಾಗಿ ಸ್ವಾವಲಂಬಿಯಾಗಿ ಹಕ್ಕು ಪಡೆಯುತ್ತಿದ್ದಾರೆ ಎಂದು ಹೇಳಿದರು.<br /> <br /> ಜಿ.ಪಂ. ಸದಸ್ಯೆ ಸೌಮ್ಯ ಕಲ್ಲೂರ, ಡಾ.ಉಡಕೇರೆ, ಡಾ.ರಾಜೇಂದ್ರ ಪೊದ್ದಾರ, ಜಿ. ಶ್ರಿನಿವಾಸಲು, ಡಾ.ಎಸ್.ಬಿ. ಜಗ್ಗೆನವರ, ಡಾ.ಸತೀಶ ಪಾಟೀಲ ಡಾ. ಎಸ್.ವೈ. ವಾಲಿ ಇತರರು ವೇದಿಕೆಯಲ್ಲಿದ್ದರು. ಬಂಡೆಪ್ಪ ತೇಲಿ ಸ್ವಾಗತಿಸಿದರು. ಪೂಜಾ ಬಿ. ಕಾರ್ಯಕ್ರಮ ನಿರೂಪಿಸಿದರು. ಶರಣಗೌಡ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>