<p><strong>ವಿಜಾಪುರ: </strong>ಕರ್ಮಯೋಗಿ, ಜ್ಞಾನಯೋಗಿ ಶಿವಯೋಗಿ ಸಿದ್ಧರಾಮೇಶ್ವರರ ಬದುಕು ನಮ್ಮ ಜೀವನಕ್ಕೆ ಮಾರ್ಗ ದರ್ಶಿಯಾಗಬೇಕು. ಅವರ ತತ್ವ –ಸಿದ್ಧಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಕರೆ ನೀಡಿದರು.<br /> <br /> ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಇಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.<br /> <br /> ಶರಣರು ಮಾಡಿದ ಕಾರ್ಯಗಳನ್ನು ಜನರಿಗೆ ತಲುಪಿಸುವ ಹಾಗೂ ಶರಣರನ್ನು ಸ್ಮರಿಸುವ ನಿಟ್ಟಿನಲ್ಲಿ, ಸರ್ಕಾರ ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಈ ವರ್ಷದಿಂದ ಆಚರಿಸುತ್ತಿದೆ ಎಂದರು.<br /> <br /> ಶಿವಯೋಗಿಗಳು ಕಲ್ಯಾಣಕ್ಕೆ ಬರುವ ಮೊದಲು ಹಲವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಸಿದ್ಧರಾಮೇಶ್ವರರು ಕೆರೆ ನಿರ್ಮಾಣ, ಬಡವರು, ನಿರ್ಗತಿ ಕರಿಗಾಗಿ ಪರಿಹಾರ ಕಾರ್ಯಗಳನ್ನು ಕೈಗೊಂಡು ಕಾಯಕ ಯೋಗಿಯಾಗಿದ್ದರು. ಅಲ್ಲಮಪ್ರಭುಗಳ ಮಾರ್ಗದರ್ಶನದಲ್ಲಿ ಜ್ಞಾನಯೋಗಿಯಾದರು. ತಮ್ಮ ವಚನಗಳ ಮೂಲಕ ಜಗತ್ತಿಗೆ ಮಾರ್ಗದರ್ಶಕರಾದರು ಎಂದು ಹೇಳಿದರು.<br /> <br /> ಸಿದ್ಧರಾಮೇಶ್ವರರ ಕಾರ್ಯತತ್ವಗಳನ್ನು ಅನುಸರಿಸಿ ಅವರ ಸ್ಮರಣೆಯಲ್ಲಿ ಜಿಲ್ಲೆಯ ಮಮದಾಪುರ, ಬೇಗಂ ತಲಾಬ್ ಹಾಗೂ ಭೂತನಾಳ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.<br /> <br /> ಉಪನ್ಯಾಸ ನೀಡಿದ ಡಾ.ಮಲ್ಲಿಕಾರ್ಜುನ ಮೇತ್ರಿ, ಸಿದ್ಧರಾಮೇಶ್ವರರು ಸೋಲಾಪುರ ಜಿಲ್ಲೆಯ ಸೊನ್ನಲಗಿ ಗ್ರಾಮದಲ್ಲಿ ಹುಟ್ಟಿ ಬೆಳೆದವರು. ಅವರ ಮೂಲ ಹೆಸರು ಧೂಳಿಮಾಂಕಾಳ. ಅವರು 68,000 ವಚನಗಳನ್ನು ಬರೆದಿದ್ದು, ಕೇವಲ 1,679 ವಚನ ಲಭ್ಯವಾಗಿವೆ ಎಂದರು.<br /> <br /> ಜ್ಞಾನಯೋಗಾಶ್ರಮದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಿದ್ಧೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಎಸ್.ಹಿರೇಮಠ, ಉಪಾಧ್ಯಕ್ಷ ಸಂಗು ಸಜ್ಜನ, ಜಿಲ್ಲಾಧಿಕಾರಿ ರಿತ್ವಿಕ್ ಪಾಂಡೆ, ಭೋವಿ ಸಮಾಜದ ಮುಖಂಡ ರಾಜು ಆಲಕುಂಟೆ ವೇದಿಕೆಯಲ್ಲಿದ್ದರು.<br /> <br /> ಇದಕ್ಕೂ ಮೊದಲು ನಗರದ ಸಿದ್ಧರಾಮೇಶ್ವರ ದೇವಾಲಯದಿಂದ ರಂಗ ಮಂದಿರದ ವರೆಗೆ ವಿವಿಧ ಕಲಾತಂಡಗಳೊಂದಿಗೆ ಸಿದ್ಧರಾಮೇಶ್ವರರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>ಕರ್ಮಯೋಗಿ, ಜ್ಞಾನಯೋಗಿ ಶಿವಯೋಗಿ ಸಿದ್ಧರಾಮೇಶ್ವರರ ಬದುಕು ನಮ್ಮ ಜೀವನಕ್ಕೆ ಮಾರ್ಗ ದರ್ಶಿಯಾಗಬೇಕು. ಅವರ ತತ್ವ –ಸಿದ್ಧಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಕರೆ ನೀಡಿದರು.<br /> <br /> ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಇಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.<br /> <br /> ಶರಣರು ಮಾಡಿದ ಕಾರ್ಯಗಳನ್ನು ಜನರಿಗೆ ತಲುಪಿಸುವ ಹಾಗೂ ಶರಣರನ್ನು ಸ್ಮರಿಸುವ ನಿಟ್ಟಿನಲ್ಲಿ, ಸರ್ಕಾರ ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಈ ವರ್ಷದಿಂದ ಆಚರಿಸುತ್ತಿದೆ ಎಂದರು.<br /> <br /> ಶಿವಯೋಗಿಗಳು ಕಲ್ಯಾಣಕ್ಕೆ ಬರುವ ಮೊದಲು ಹಲವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಸಿದ್ಧರಾಮೇಶ್ವರರು ಕೆರೆ ನಿರ್ಮಾಣ, ಬಡವರು, ನಿರ್ಗತಿ ಕರಿಗಾಗಿ ಪರಿಹಾರ ಕಾರ್ಯಗಳನ್ನು ಕೈಗೊಂಡು ಕಾಯಕ ಯೋಗಿಯಾಗಿದ್ದರು. ಅಲ್ಲಮಪ್ರಭುಗಳ ಮಾರ್ಗದರ್ಶನದಲ್ಲಿ ಜ್ಞಾನಯೋಗಿಯಾದರು. ತಮ್ಮ ವಚನಗಳ ಮೂಲಕ ಜಗತ್ತಿಗೆ ಮಾರ್ಗದರ್ಶಕರಾದರು ಎಂದು ಹೇಳಿದರು.<br /> <br /> ಸಿದ್ಧರಾಮೇಶ್ವರರ ಕಾರ್ಯತತ್ವಗಳನ್ನು ಅನುಸರಿಸಿ ಅವರ ಸ್ಮರಣೆಯಲ್ಲಿ ಜಿಲ್ಲೆಯ ಮಮದಾಪುರ, ಬೇಗಂ ತಲಾಬ್ ಹಾಗೂ ಭೂತನಾಳ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.<br /> <br /> ಉಪನ್ಯಾಸ ನೀಡಿದ ಡಾ.ಮಲ್ಲಿಕಾರ್ಜುನ ಮೇತ್ರಿ, ಸಿದ್ಧರಾಮೇಶ್ವರರು ಸೋಲಾಪುರ ಜಿಲ್ಲೆಯ ಸೊನ್ನಲಗಿ ಗ್ರಾಮದಲ್ಲಿ ಹುಟ್ಟಿ ಬೆಳೆದವರು. ಅವರ ಮೂಲ ಹೆಸರು ಧೂಳಿಮಾಂಕಾಳ. ಅವರು 68,000 ವಚನಗಳನ್ನು ಬರೆದಿದ್ದು, ಕೇವಲ 1,679 ವಚನ ಲಭ್ಯವಾಗಿವೆ ಎಂದರು.<br /> <br /> ಜ್ಞಾನಯೋಗಾಶ್ರಮದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಿದ್ಧೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಎಸ್.ಹಿರೇಮಠ, ಉಪಾಧ್ಯಕ್ಷ ಸಂಗು ಸಜ್ಜನ, ಜಿಲ್ಲಾಧಿಕಾರಿ ರಿತ್ವಿಕ್ ಪಾಂಡೆ, ಭೋವಿ ಸಮಾಜದ ಮುಖಂಡ ರಾಜು ಆಲಕುಂಟೆ ವೇದಿಕೆಯಲ್ಲಿದ್ದರು.<br /> <br /> ಇದಕ್ಕೂ ಮೊದಲು ನಗರದ ಸಿದ್ಧರಾಮೇಶ್ವರ ದೇವಾಲಯದಿಂದ ರಂಗ ಮಂದಿರದ ವರೆಗೆ ವಿವಿಧ ಕಲಾತಂಡಗಳೊಂದಿಗೆ ಸಿದ್ಧರಾಮೇಶ್ವರರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>