ನಿರಂತರ ಕಾರ್ಯ: ‘ಚುನಾವಣಾ ಸಮಯದಲ್ಲಿ ಕರ್ತವ್ಯಕ್ಕೆ ನಿಯೋಜಿಸುವುದಲ್ಲದೆ, ವರ್ಷ ಪೂರ್ತಿ ಗ್ರಾಮದ ಜನಸಂಖ್ಯೆಯ ಆಧಾರದ ಮೇಲೆ ಬಿಎಲ್ಒಗಳನ್ನು ನೇಮಿಸಿ, ಮತದಾರರ ಪಟ್ಟಿಗೆ ಹೊಸ ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ ಮಾಡುವ ಕೆಲಸ ಮಾಡುತ್ತಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸಭೆಗೆ ಆಗಾಗ ಹೋಗಬೇಕು. ಈ ಕೆಲಸಕ್ಕೆ ಶಾಲೆಯಲ್ಲಿರುವ ಮೂವರು ಶಿಕ್ಷಕರಲ್ಲಿ ಇಬ್ಬರನ್ನು ನೇಮಿಸಲಾಗಿದೆ. ಇದರಿಂದ ಮಕ್ಕಳಿಗೆ ಕಲಿಸಲು ತುಂಬಾ ತೊಂದರೆಯಾಗುತ್ತಿದೆ’ ಎನ್ನುತ್ತಾರೆ ನಾಲತವಾಡ ದೇಶಮುಖ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಮಹಾಂತೇಶ.