<p>ಬೀದರ್: ಭಾರತೀಯ ಅಂಚೆ ಇಲಾಖೆಯ ನೂತನ ಉಪ ಅಂಚೆ ಕಚೇರಿಯ ಉದ್ಘಾಟನಾ ಸಮಾರಂಭ ನಗರದ ಸಿದ್ಧಾರೂಢ ಮಠದಲ್ಲಿ ಗುರುವಾರ ನಡೆಯಿತು.<br /> <br /> ಸಾರ್ವಜನಿಕರು ಅಂಚೆ ಕಚೇರಿಯಲ್ಲಿ ವ್ಯವಹರಿಸುವ ಮೂಲಕ ಅಂಚೆ ಇಲಾಖೆಗೆ ಸಹಕರಿಸಬೇಕು ಎಂದು ಉದ್ಘಾಟನೆ ನೆರವೇರಿಸಿದ ಚಿದಂಬರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಚನ್ನಬಸಪ್ಪ ಹಾಲಹಳ್ಳಿ ಹೇಳಿದರು.<br /> <br /> ನೂತನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ, ಜೀವ ವಿಮೆ, ಪರೀಕ್ಷಾ ಪತ್ರಿಕೆಗಳ ಸಾಗಣೆ, ಅಂಚೆ ಚೀಟಿ, ಸ್ಪೀಡ್ ಪೋಸ್ಟ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಪಡೆಯಬಹುದು ಎಂದು ಅಧ್ಯಕ್ಷತೆ ವಹಿಸಿದ್ದ ಅಂಚೆ ಇಲಾಖೆಯ ಅಧೀಕ್ಷಕ ಬಿ. ಜಗನ್ನಾಥರಾವ ಗ್ರಾಹಕರಿಗೆ ತಿಳಿಸಿದರು.<br /> <br /> ಪ್ರಮುಖರಾದ ಬಿ.ಜಿ. ಶೆಟಕಾರ, ರವೀಂದ್ರಕುಮಾರ, ಗುಣವಂತ ಶಿಂಧೆ, ಸುಬ್ರಹ್ಮಣ್ಯನ್ ಉಪಸ್ಥಿತರಿದ್ದರು. ವಿ.ಎಲ್. ಚಿತ್ಕೋಟೆ ಸ್ವಾಗತಿಸಿದರು. ಗುರುನಾಥ ಅಕ್ಕಣ್ಣ ನಿರೂಪಿಸಿದರು. ಕಲ್ಲಪ್ಪ ಕೋಣೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಭಾರತೀಯ ಅಂಚೆ ಇಲಾಖೆಯ ನೂತನ ಉಪ ಅಂಚೆ ಕಚೇರಿಯ ಉದ್ಘಾಟನಾ ಸಮಾರಂಭ ನಗರದ ಸಿದ್ಧಾರೂಢ ಮಠದಲ್ಲಿ ಗುರುವಾರ ನಡೆಯಿತು.<br /> <br /> ಸಾರ್ವಜನಿಕರು ಅಂಚೆ ಕಚೇರಿಯಲ್ಲಿ ವ್ಯವಹರಿಸುವ ಮೂಲಕ ಅಂಚೆ ಇಲಾಖೆಗೆ ಸಹಕರಿಸಬೇಕು ಎಂದು ಉದ್ಘಾಟನೆ ನೆರವೇರಿಸಿದ ಚಿದಂಬರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಚನ್ನಬಸಪ್ಪ ಹಾಲಹಳ್ಳಿ ಹೇಳಿದರು.<br /> <br /> ನೂತನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ, ಜೀವ ವಿಮೆ, ಪರೀಕ್ಷಾ ಪತ್ರಿಕೆಗಳ ಸಾಗಣೆ, ಅಂಚೆ ಚೀಟಿ, ಸ್ಪೀಡ್ ಪೋಸ್ಟ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಪಡೆಯಬಹುದು ಎಂದು ಅಧ್ಯಕ್ಷತೆ ವಹಿಸಿದ್ದ ಅಂಚೆ ಇಲಾಖೆಯ ಅಧೀಕ್ಷಕ ಬಿ. ಜಗನ್ನಾಥರಾವ ಗ್ರಾಹಕರಿಗೆ ತಿಳಿಸಿದರು.<br /> <br /> ಪ್ರಮುಖರಾದ ಬಿ.ಜಿ. ಶೆಟಕಾರ, ರವೀಂದ್ರಕುಮಾರ, ಗುಣವಂತ ಶಿಂಧೆ, ಸುಬ್ರಹ್ಮಣ್ಯನ್ ಉಪಸ್ಥಿತರಿದ್ದರು. ವಿ.ಎಲ್. ಚಿತ್ಕೋಟೆ ಸ್ವಾಗತಿಸಿದರು. ಗುರುನಾಥ ಅಕ್ಕಣ್ಣ ನಿರೂಪಿಸಿದರು. ಕಲ್ಲಪ್ಪ ಕೋಣೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>