<p><span style="font-size: 26px;"><strong>ಬಸವನಬಾಗೇವಾಡಿ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಮಧ್ಯಾಹ್ನ ಮಳೆ ಸುರಿಯಿತು. </span><span style="font-size: 26px;">ಬುಧವಾರ ರಾತ್ರಿ 11. 30ಕ್ಕೆ ಆರಂಭವಾದ ಮಳೆ ಒಂದು ಗಂಟೆಗಿಂತ ಹೆಚ್ಚು ಕಾಲ ಸುರಿಯಿತು. ಮಳೆಯ ಅರ್ಭಟ ಜೋರಾಗಿತ್ತು. ಗುರುವಾರ ಮಧ್ಯಾಹ್ನ ವೇಳೆ ಪಟ್ಟಣ ಹಾಗೂ ಸುತ್ತಮುತ್ತಲೂ ಪ್ರದೇಶಗಳಲ್ಲಿ ಕೆಲ ಹೊತ್ತು ಮಳೆಯಾಯಿತು.<br /> <br /> ಮಳೆಯಿಂದಾಗಿ ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಅಲ್ಲದೇ ಜಮೀನಿನಲ್ಲಿ ನೀರು ಹರಿದು ಬದುವಿನಲ್ಲಿ ನೀರು ನಿಂತಿದೆ. ಹೊಲಗಳಲ್ಲಿ ನೀರು ನಿಂತು ಕೆರೆಯ ಪರಿಸ್ಥಿತಿ ಕಂಡುಬಂತು.</span><br /> <br /> ಕಳೆದ ಒಂದು ವಾರದಿಂದ ಆರಂಭವಾದ ಮಳೆಯಿಂದಾಗಿ ರೈತರನ್ನು ಕೃಷಿ ಚಟುವಟಿಕೆಯಲ್ಲಿ ತೊಡಗುವ ಉತ್ಸಾಹ ಹೆಚ್ಚಿಸಿದೆ. ಯಾವ ಬೆಳೆಯನ್ನು ಬೆಳೆಯಬೇಕು ಎಂಬ ಯೋಚನೆಯಲ್ಲಿ ತೊಡಗಿದ ರೈತರು ಬೀಜ, ಗೊಬ್ಬರಗಳನ್ನು ಸಂಗ್ರಹಿಸುವತ್ತ ಗಮನ ಹರಿಸುತ್ತಿದ್ದಾರೆ. <br /> <br /> ತಾಲ್ಲೂಕಿನ ವಿವಿಧ ಮಳೆ ಮಾಪನ ಕೇಂದ್ರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ದಾಖಲಾದ ಮಳೆ ವಿವಿರ ಹೀಗಿದೆ.<br /> ಬಸವನಬಾಗೇವಾಡಿ (47.4 ಮಿ.ಮೀ), ಆಲಮಟ್ಟಿ (28.4 ಮಿ.ಮೀ), ಆರೇಶಂಕರ (17.4 ಮಿ.ಮೀ), ಹೂವಿನಹಿಪ್ಪರಗಿ (40.2 ಮಿ.ಮೀ), ಮಟ್ಟಿಹಾಳ (8 ಮಿ.ಮೀ), ಮನಗೂಳಿ ಕೆಂದ್ರದಲ್ಲಿ (19 ಮಿ.ಮೀ) ಮಳೆಯಾದ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಬಸವನಬಾಗೇವಾಡಿ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಮಧ್ಯಾಹ್ನ ಮಳೆ ಸುರಿಯಿತು. </span><span style="font-size: 26px;">ಬುಧವಾರ ರಾತ್ರಿ 11. 30ಕ್ಕೆ ಆರಂಭವಾದ ಮಳೆ ಒಂದು ಗಂಟೆಗಿಂತ ಹೆಚ್ಚು ಕಾಲ ಸುರಿಯಿತು. ಮಳೆಯ ಅರ್ಭಟ ಜೋರಾಗಿತ್ತು. ಗುರುವಾರ ಮಧ್ಯಾಹ್ನ ವೇಳೆ ಪಟ್ಟಣ ಹಾಗೂ ಸುತ್ತಮುತ್ತಲೂ ಪ್ರದೇಶಗಳಲ್ಲಿ ಕೆಲ ಹೊತ್ತು ಮಳೆಯಾಯಿತು.<br /> <br /> ಮಳೆಯಿಂದಾಗಿ ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಅಲ್ಲದೇ ಜಮೀನಿನಲ್ಲಿ ನೀರು ಹರಿದು ಬದುವಿನಲ್ಲಿ ನೀರು ನಿಂತಿದೆ. ಹೊಲಗಳಲ್ಲಿ ನೀರು ನಿಂತು ಕೆರೆಯ ಪರಿಸ್ಥಿತಿ ಕಂಡುಬಂತು.</span><br /> <br /> ಕಳೆದ ಒಂದು ವಾರದಿಂದ ಆರಂಭವಾದ ಮಳೆಯಿಂದಾಗಿ ರೈತರನ್ನು ಕೃಷಿ ಚಟುವಟಿಕೆಯಲ್ಲಿ ತೊಡಗುವ ಉತ್ಸಾಹ ಹೆಚ್ಚಿಸಿದೆ. ಯಾವ ಬೆಳೆಯನ್ನು ಬೆಳೆಯಬೇಕು ಎಂಬ ಯೋಚನೆಯಲ್ಲಿ ತೊಡಗಿದ ರೈತರು ಬೀಜ, ಗೊಬ್ಬರಗಳನ್ನು ಸಂಗ್ರಹಿಸುವತ್ತ ಗಮನ ಹರಿಸುತ್ತಿದ್ದಾರೆ. <br /> <br /> ತಾಲ್ಲೂಕಿನ ವಿವಿಧ ಮಳೆ ಮಾಪನ ಕೇಂದ್ರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ದಾಖಲಾದ ಮಳೆ ವಿವಿರ ಹೀಗಿದೆ.<br /> ಬಸವನಬಾಗೇವಾಡಿ (47.4 ಮಿ.ಮೀ), ಆಲಮಟ್ಟಿ (28.4 ಮಿ.ಮೀ), ಆರೇಶಂಕರ (17.4 ಮಿ.ಮೀ), ಹೂವಿನಹಿಪ್ಪರಗಿ (40.2 ಮಿ.ಮೀ), ಮಟ್ಟಿಹಾಳ (8 ಮಿ.ಮೀ), ಮನಗೂಳಿ ಕೆಂದ್ರದಲ್ಲಿ (19 ಮಿ.ಮೀ) ಮಳೆಯಾದ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>