<p><strong>ವಿಜಾಪುರ: </strong>ವೀರಶೈವ ಆದಿಬಣಜಿಗರ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಬೇಕು ಎಂದು ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಶಂಕರಗೌಡ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ವೀರಶೈವ ಆದಿ ಬಣಜಿಗರ ಸಮಾಜದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.<br /> <br /> ಹೋರಾಟಗಾರ ಪಂಚಪ್ಪ ಕಲಬುರ್ಗಿ ಮಾತನಾಡಿ, ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಹಳ ಹಿಂದುಳಿದಿದೆ. ಸಮಾಜದ ಎಲ್ಲ ಬಾಂಧವರು ಸಂಘಟಿತರಾಗಿ ಹೋರಾಡಬೇಕಿದೆ ಎಂದರು.<br /> <br /> ಶ್ರೀಪತಿಗೌಡ ಬಿರಾದಾರ, ಸಾಹಿತಿ ಮಲ್ಲಿಕಾರ್ಜುನ ಜೇವರಗಿ, ಸಂಘದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಬಾಣದವರ, ಸದಾಶಿವ ಕಾರಡಗಿ, ಹೈಬತ್ತಿ ಸಮಾಜದ ಸಂಘಟನೆಗೆ ಒತ್ತು ನೀಡಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಪಾಟೀಲ, ರಾಜ್ಯದಲ್ಲಿ ಆದಿ ಬಣಜಿಗ ಸಮಾಜದವರು ಬಹುಸಂಖ್ಯೆಯಲ್ಲಿ ಇದ್ದಾರೆ. ಸರ್ಕಾರದಿಂದ ಈ ವರೆಗೂ ಯಾವುದೇ ಸೌಲಭ್ಯ ಪಡೆದಿಲ್ಲ. ಈ ಸಮಾಜದ ಬಗ್ಗೆ ಸರ್ಕಾರ ಗಮನ ಹರಿಸದಿದ್ದರೆ ಗಂಭೀರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. <br /> <br /> ಎಸ್.ಪಿ. ಬಿರಾದಾರ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಎಂ.ಬಿ. ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ ಪರಗೊಂಡೆ ವಂದಿಸಿದರು.<br /> <br /> <strong>ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ</strong><br /> ನಗರದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ವಿಶಿಷ್ಟ ಆಧಾರ್ ಗುರುತಿನ ಚೀಟಿ ಮಾಹಿತಿ ಸಂಗ್ರಹಿಸುವ ಕೇಂದ್ರವನ್ನು ಪ್ರಾರಂಭಿಸಲಾಗಿದೆ.ವಿಜಾಪುರ ವಿಭಾಗದ ಅಂಚೆ ಅಧೀಕ್ಷಕ ಡಿ.ಬಿ. ಕುಲಕರ್ಣಿ ತಮ್ಮ ಮಾಹಿತಿ ನೀಡುವ ಮೂಲಕ ಕೇಂದ್ರಕ್ಕೆ ಚಾಲನೆ ನೀಡಿದರು. <br /> <br /> ಇದೇ ರೀತಿ ಆಧಾರ್ ಕೇಂದ್ರಗಳನ್ನು ಮುದ್ದೇಬಿಹಾಳ, ಸಿಂದಗಿ, ತಾಳಿಕೋಟೆ, ಚಡಚಣ, ಇಂಡಿ, ಬಸವನ ಬಾಗೇವಾಡಿ ಅಂಚೆ ಕಚೇರಿಗಳಲ್ಲಿಯೂ ಸಹ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕುಲಕರ್ಣಿ ಹೇಳಿದರು.<br /> <br /> ಎಲ್ಲ ನಾಗರಿಕರಿಗೂ ಸರ್ಕಾರದ ಸೌಲಭ್ಯಗಳು ಸುಗಮವಾಗಿ ತಲುಪಲು ಮತ್ತು ಗುರುತಿನ ಪತ್ರಗಳಲ್ಲಿ ಏಕತಾನತೆ ತರಲು ಪ್ರಾರಂಭಿಸಿರುವ ಈ ವಿಶಿಷ್ಠ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.<br /> <br /> ಜಿ.ಕೆ. ಶಿಳ್ಳೀನ, ಪತ್ತಾರ, ಎಸ್.ಡಿ. ಹಿಳ್ಳಿ, ಎಸ್.ಬಿ. ಪಾಟೀಲ, ಪಿ.ಎಸ್. ಹೆಡಿಜೋಳ, ಎಸ್.ಟಿ. ಬಗಲಿ, ಪಿ.ಜಿ. ರೊಟ್ಟಿ, ಎಚ್.ಕೆ. ಜೋಶಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>ವೀರಶೈವ ಆದಿಬಣಜಿಗರ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಬೇಕು ಎಂದು ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಶಂಕರಗೌಡ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ವೀರಶೈವ ಆದಿ ಬಣಜಿಗರ ಸಮಾಜದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.<br /> <br /> ಹೋರಾಟಗಾರ ಪಂಚಪ್ಪ ಕಲಬುರ್ಗಿ ಮಾತನಾಡಿ, ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಹಳ ಹಿಂದುಳಿದಿದೆ. ಸಮಾಜದ ಎಲ್ಲ ಬಾಂಧವರು ಸಂಘಟಿತರಾಗಿ ಹೋರಾಡಬೇಕಿದೆ ಎಂದರು.<br /> <br /> ಶ್ರೀಪತಿಗೌಡ ಬಿರಾದಾರ, ಸಾಹಿತಿ ಮಲ್ಲಿಕಾರ್ಜುನ ಜೇವರಗಿ, ಸಂಘದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಬಾಣದವರ, ಸದಾಶಿವ ಕಾರಡಗಿ, ಹೈಬತ್ತಿ ಸಮಾಜದ ಸಂಘಟನೆಗೆ ಒತ್ತು ನೀಡಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಪಾಟೀಲ, ರಾಜ್ಯದಲ್ಲಿ ಆದಿ ಬಣಜಿಗ ಸಮಾಜದವರು ಬಹುಸಂಖ್ಯೆಯಲ್ಲಿ ಇದ್ದಾರೆ. ಸರ್ಕಾರದಿಂದ ಈ ವರೆಗೂ ಯಾವುದೇ ಸೌಲಭ್ಯ ಪಡೆದಿಲ್ಲ. ಈ ಸಮಾಜದ ಬಗ್ಗೆ ಸರ್ಕಾರ ಗಮನ ಹರಿಸದಿದ್ದರೆ ಗಂಭೀರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. <br /> <br /> ಎಸ್.ಪಿ. ಬಿರಾದಾರ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಎಂ.ಬಿ. ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ ಪರಗೊಂಡೆ ವಂದಿಸಿದರು.<br /> <br /> <strong>ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ</strong><br /> ನಗರದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ವಿಶಿಷ್ಟ ಆಧಾರ್ ಗುರುತಿನ ಚೀಟಿ ಮಾಹಿತಿ ಸಂಗ್ರಹಿಸುವ ಕೇಂದ್ರವನ್ನು ಪ್ರಾರಂಭಿಸಲಾಗಿದೆ.ವಿಜಾಪುರ ವಿಭಾಗದ ಅಂಚೆ ಅಧೀಕ್ಷಕ ಡಿ.ಬಿ. ಕುಲಕರ್ಣಿ ತಮ್ಮ ಮಾಹಿತಿ ನೀಡುವ ಮೂಲಕ ಕೇಂದ್ರಕ್ಕೆ ಚಾಲನೆ ನೀಡಿದರು. <br /> <br /> ಇದೇ ರೀತಿ ಆಧಾರ್ ಕೇಂದ್ರಗಳನ್ನು ಮುದ್ದೇಬಿಹಾಳ, ಸಿಂದಗಿ, ತಾಳಿಕೋಟೆ, ಚಡಚಣ, ಇಂಡಿ, ಬಸವನ ಬಾಗೇವಾಡಿ ಅಂಚೆ ಕಚೇರಿಗಳಲ್ಲಿಯೂ ಸಹ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕುಲಕರ್ಣಿ ಹೇಳಿದರು.<br /> <br /> ಎಲ್ಲ ನಾಗರಿಕರಿಗೂ ಸರ್ಕಾರದ ಸೌಲಭ್ಯಗಳು ಸುಗಮವಾಗಿ ತಲುಪಲು ಮತ್ತು ಗುರುತಿನ ಪತ್ರಗಳಲ್ಲಿ ಏಕತಾನತೆ ತರಲು ಪ್ರಾರಂಭಿಸಿರುವ ಈ ವಿಶಿಷ್ಠ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.<br /> <br /> ಜಿ.ಕೆ. ಶಿಳ್ಳೀನ, ಪತ್ತಾರ, ಎಸ್.ಡಿ. ಹಿಳ್ಳಿ, ಎಸ್.ಬಿ. ಪಾಟೀಲ, ಪಿ.ಎಸ್. ಹೆಡಿಜೋಳ, ಎಸ್.ಟಿ. ಬಗಲಿ, ಪಿ.ಜಿ. ರೊಟ್ಟಿ, ಎಚ್.ಕೆ. ಜೋಶಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>