<p>ಆಲಮಟ್ಟಿ: ರಾಜ್ಯದಲ್ಲಿ ನೇಕಾರರ ಜನಸಂಖ್ಯೆ 50 ಲಕ್ಷ ಇದೆ. ನೇಕಾರರು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿಯಲು ಸಂಘಟನೆಯ ಕೊರತೆಯೇ ಕಾರಣ ಎಂದು ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಹೇಳಿದರು.<br /> <br /> ಗೊಳಸಂಗಿಯಲ್ಲಿ ನಡೆದ ನೇಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ರೈತ ಸಂಘಟನೆಗಳು ಪ್ರಬಲವಾಗಿರುವ ಕಾರಣಕ್ಕೆ ಅವರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸುತ್ತದೆ. ಅದರಂತೆ ನೇಕಾರ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.<br /> <br /> ನೇಕಾರರ ಒಳಿತಿಗಾಗಿ ಕೈಮಗ್ಗ ಅಭಿವೃದ್ಧಿ ನಿಗಮ ಶ್ರಮಿಸುತ್ತಿದೆ. ನೇಕಾರರ ಮನೆ ಸಾಲವನ್ನು ಮನ್ನಾ ಮಾಡಲಾಗಿದೆ. ನೇಕಾರ ಮಕ್ಕಳಿಗೆ ಸರಕಾರ ವಿದ್ಯಾರ್ಥಿ ವೇತನ ನೀಡುತ್ತಿದೆ. ನೇಕಾರರ ಕೂಲಿ ದರವನ್ನು 50ರಷ್ಟು ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> ಮದನೂರಿನಲ್ಲಿರುವ ದೇವರ ದಾಸೀಮಯ್ಯವರ ದೇವಸ್ಥಾನವನ್ನು ನಿರ್ಮಿಸಿ, ಪ್ರವಾಸಿ ತಾಣವನ್ನಾಗಿ ಮಾಡಲು ವೇಗದ ಹೆಜ್ಜೆ ಇರಿಸಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.<br /> ಮುಖಂಡ ರವೀಂದ್ರ ಕಲಬುರ್ಗಿ ಮಾತನಾಡಿದರು. ಡಿ.ಬಿ. ಕುಪ್ಪಸ್ತ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು. ರಾಘವೇಂದ್ರಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ದೇವಾಂಗ ಸಮಾಜದ ಅಧ್ಯಕ್ಷ ಶಂಕ್ರಪ್ಪ ಮುತ್ತಗಿ ಅಧ್ಯಕ್ಷತೆ ವಹಿಸಿದ್ದರು.<br /> <br /> ವೇದಿಕೆಯಲ್ಲಿ ಭಾಗ್ಯಲಕ್ಷ್ಮಿನಾರಾಯಣ, ಪ್ರಭಾಕರ ಶೆಲ್ಲೇದ, ರತ್ನಾ ಮಲಘಾಣ, ರಾಮಕೃಷ್ಣ ಕಾಳಗಿ, ಆನಂದಮೂರ್ತಿ, ವೀರಣ್ಣ ಸೊನ್ನದ, ಎನ್.ಎಸ್.ಭಾವಿಕಟ್ಟಿ, ದೇವಾಂಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನಪ್ಪ ತೆಳಗಡಿ, ವಿರಣ್ಣ ಸೊನ್ನದ, ಶಾರದಾ ಯಂಕಂಚಿ, ಆನಂದಯ್ಯ ದೇವಾಂಗಮಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲಮಟ್ಟಿ: ರಾಜ್ಯದಲ್ಲಿ ನೇಕಾರರ ಜನಸಂಖ್ಯೆ 50 ಲಕ್ಷ ಇದೆ. ನೇಕಾರರು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿಯಲು ಸಂಘಟನೆಯ ಕೊರತೆಯೇ ಕಾರಣ ಎಂದು ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಹೇಳಿದರು.<br /> <br /> ಗೊಳಸಂಗಿಯಲ್ಲಿ ನಡೆದ ನೇಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ರೈತ ಸಂಘಟನೆಗಳು ಪ್ರಬಲವಾಗಿರುವ ಕಾರಣಕ್ಕೆ ಅವರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸುತ್ತದೆ. ಅದರಂತೆ ನೇಕಾರ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.<br /> <br /> ನೇಕಾರರ ಒಳಿತಿಗಾಗಿ ಕೈಮಗ್ಗ ಅಭಿವೃದ್ಧಿ ನಿಗಮ ಶ್ರಮಿಸುತ್ತಿದೆ. ನೇಕಾರರ ಮನೆ ಸಾಲವನ್ನು ಮನ್ನಾ ಮಾಡಲಾಗಿದೆ. ನೇಕಾರ ಮಕ್ಕಳಿಗೆ ಸರಕಾರ ವಿದ್ಯಾರ್ಥಿ ವೇತನ ನೀಡುತ್ತಿದೆ. ನೇಕಾರರ ಕೂಲಿ ದರವನ್ನು 50ರಷ್ಟು ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> ಮದನೂರಿನಲ್ಲಿರುವ ದೇವರ ದಾಸೀಮಯ್ಯವರ ದೇವಸ್ಥಾನವನ್ನು ನಿರ್ಮಿಸಿ, ಪ್ರವಾಸಿ ತಾಣವನ್ನಾಗಿ ಮಾಡಲು ವೇಗದ ಹೆಜ್ಜೆ ಇರಿಸಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.<br /> ಮುಖಂಡ ರವೀಂದ್ರ ಕಲಬುರ್ಗಿ ಮಾತನಾಡಿದರು. ಡಿ.ಬಿ. ಕುಪ್ಪಸ್ತ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು. ರಾಘವೇಂದ್ರಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ದೇವಾಂಗ ಸಮಾಜದ ಅಧ್ಯಕ್ಷ ಶಂಕ್ರಪ್ಪ ಮುತ್ತಗಿ ಅಧ್ಯಕ್ಷತೆ ವಹಿಸಿದ್ದರು.<br /> <br /> ವೇದಿಕೆಯಲ್ಲಿ ಭಾಗ್ಯಲಕ್ಷ್ಮಿನಾರಾಯಣ, ಪ್ರಭಾಕರ ಶೆಲ್ಲೇದ, ರತ್ನಾ ಮಲಘಾಣ, ರಾಮಕೃಷ್ಣ ಕಾಳಗಿ, ಆನಂದಮೂರ್ತಿ, ವೀರಣ್ಣ ಸೊನ್ನದ, ಎನ್.ಎಸ್.ಭಾವಿಕಟ್ಟಿ, ದೇವಾಂಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನಪ್ಪ ತೆಳಗಡಿ, ವಿರಣ್ಣ ಸೊನ್ನದ, ಶಾರದಾ ಯಂಕಂಚಿ, ಆನಂದಯ್ಯ ದೇವಾಂಗಮಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>